ಹಿಂದುಳಿದ ವರ್ಗ, ಮೀಸಲಾತಿ, ಅಲ್ಪಸಂಖ್ಯಾತರ ಉದ್ಧಾರ ಇವೆಲ್ಲವೂ ಬರೀ ಕಾಂಗ್ರೆಸ್ನವರ ಭಾಷಣದಲ್ಲಿ ಉಳಿದಿದೆ. ಆದರೆ ಬಿಜೆಪಿಗೆ ಭಾಷಣದಲ್ಲಿ ನಂಬಿಕೆ ಇಲ್ಲ. ಹಿಂದುಳಿದವರಿಗೆ ಆದ್ಯತೆ ನೀಡುವುದನ್ನು ನೇರವಾಗಿ, ಪ್ರಾಯೋಗಿಕವಾಗಿ ಮಾಡಿ ತೋರಿಸುತ್ತಿದ್ದೇವೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸಂಪುಟದ 81 ಸಚಿವರಲ್ಲಿ 45 ಮಂದಿ ಹಿಂದುಳಿದ ವರ್ಗಕ್ಕೆ ಸೇರಿದ್ದಾರೆ.ದೇಶದ ಇತಿಹಾಸದಲ್ಲಿಯೇ ಇದೇ ಮೊದಲು ಬಾರಿಗೆ ಹಿಂದುಳಿದ ಸಮಾಜದವರಿಗೆ ಇಷ್ಟೊಂದು ಪ್ರಾತಿನಿಧ್ಯ ದೊರೆತಿದೆ. ಇದನ್ನು ಸಿದ್ದರಾಮಯ್ಯ ಸ್ವಾಗತಿಸಬೇಕಿತ್ತು ಎಂದರು.