ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆ ಸುಪಾ ಜಲಾಶಯದ ಮೂಲಕ ಹರಿದು ವ್ಯರ್ಥವಾಗಿ ಸಮುದ್ರ ಸೇರುವ 140 ಟಿಎಂಸಿ ಅಡಿ ನೀರನ್ನು ಬಳಕೆ ಮಾಡಿಕೊಳ್ಳಲು 35 ಕಿ.ಮೀ ದೂರದ ಪೈಪ್ಲೈನ್ ಹಾಗೂ ಗುರುತ್ವ ಬಲದಿಂದ ಮಲಪ್ರಭಾ ನದಿಗೆ ತಿರುಗಿಸುವ ಯೋಜನಾ ವರದಿಯನ್ನು ಮುಧೋಳದ ನಿರಾಣಿ ಫೌಂಡೇಷನ್ ಸಿದ್ಧಪಡಿಸಿದೆ. ಅದರ ಪ್ರಸ್ತಾವನೆ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯಕ್ಕೆ ಈಗಾಗಲೇ ಸಲ್ಲಿಸಲಾಗಿದೆ ಎಂದರು.