<p><strong>ಕಮತಗಿ (ಅಮಿನಗಡ)</strong>: ಜೀವನದಲ್ಲಿ ಕಷ್ಟ, ನಷ್ಟಗಳು ಬರುವುದು ಸಹಜ. ತಾಳ್ಮೆಯಿಂದ ಜೀವನದ ಚೆಸ್ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸಬೇಕು ಎಂದು ಹುಚ್ಚೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಗ್ರಾಮೀಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ಏಕ ವಲಯ ಅಂತರ್ ಕಾಲೇಜುಗಳ ಚೆಸ್ ಟೂರ್ನಮೆಂಟ್ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.</p>.<p>ಚೆಸ್ ಮಾನಸಿಕ ಏಕಾಗ್ರತೆ ಹಾಗೂ ತಾಳ್ಮೆಯನ್ನು ಪರೀಕ್ಷಿಸುವ ಕ್ರೀಡೆಯಾಗಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಸವರಾಜ ಕುಂಬಳಾವತಿ, ದೈಹಿಕ ಶಿಕ್ಷಣ ಪರೀಕ್ಷಕ ಎ.ಎಚ್ ನದಾಫ, ಶಿರೂರಿನ ಬಿ.ಎಸ್ ಲೋಕಾಪುರ ಮಾತನಾಡಿದರು.</p>.<p>ಸಂಘದ ಸಹಕಾರ್ಯದರ್ಶಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ. ಪಿ, ಸುನೀಲ ನಾರಾಯಣಿ , ಚಿದಾನಂದ ನಂದಾರ, ಪ್ರಾಚಾರ್ಯ ಪಿ.ಎಂ. ಗುರುವಿನಮಠ ಸೇರಿದಂತೆ ವಿವಿಧ ಕಾಲೇಜುಗಳ ತರಬೇತಿದಾರರು, ವಿದ್ಯಾರ್ಥಿಗಳು ಇದ್ದರು.</p>.<p><strong>ಚಾಂಪಿಯನ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ, ಬಾಗಲಕೋಟ.</strong></p>.<p><strong>ವಿಜೇತ ತಂಡಗಳು:</strong> ಪುರುಷರ ವಿಭಾಗ– ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ ( ಪ್ರಥಮ), ಎಸ್.ಆರ್.ಕೆ.ಪಿ ಕಾಲೇಜು, ಮುಧೋಳ (ದ್ವಿತೀಯ), ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯ ಗುಳೇದಗುಡ್ಡ (ತೃತೀಯ).</p>.<p><strong>ಮಹಿಳೆಯರ ವಿಭಾಗ–</strong> ಎಸ್.ಆರ್. ಕಂಠಿ ಕಾಲೇಜು ಮುಧೋಳ (ಪ್ರಥಮ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ (ದ್ವಿತೀಯ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹುನಗುಂದ (ತೃತೀಯ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮತಗಿ (ಅಮಿನಗಡ)</strong>: ಜೀವನದಲ್ಲಿ ಕಷ್ಟ, ನಷ್ಟಗಳು ಬರುವುದು ಸಹಜ. ತಾಳ್ಮೆಯಿಂದ ಜೀವನದ ಚೆಸ್ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸಬೇಕು ಎಂದು ಹುಚ್ಚೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಗ್ರಾಮೀಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ಏಕ ವಲಯ ಅಂತರ್ ಕಾಲೇಜುಗಳ ಚೆಸ್ ಟೂರ್ನಮೆಂಟ್ ಸಮಾರೋಪ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.</p>.<p>ಚೆಸ್ ಮಾನಸಿಕ ಏಕಾಗ್ರತೆ ಹಾಗೂ ತಾಳ್ಮೆಯನ್ನು ಪರೀಕ್ಷಿಸುವ ಕ್ರೀಡೆಯಾಗಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಸವರಾಜ ಕುಂಬಳಾವತಿ, ದೈಹಿಕ ಶಿಕ್ಷಣ ಪರೀಕ್ಷಕ ಎ.ಎಚ್ ನದಾಫ, ಶಿರೂರಿನ ಬಿ.ಎಸ್ ಲೋಕಾಪುರ ಮಾತನಾಡಿದರು.</p>.<p>ಸಂಘದ ಸಹಕಾರ್ಯದರ್ಶಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ. ಪಿ, ಸುನೀಲ ನಾರಾಯಣಿ , ಚಿದಾನಂದ ನಂದಾರ, ಪ್ರಾಚಾರ್ಯ ಪಿ.ಎಂ. ಗುರುವಿನಮಠ ಸೇರಿದಂತೆ ವಿವಿಧ ಕಾಲೇಜುಗಳ ತರಬೇತಿದಾರರು, ವಿದ್ಯಾರ್ಥಿಗಳು ಇದ್ದರು.</p>.<p><strong>ಚಾಂಪಿಯನ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ, ಬಾಗಲಕೋಟ.</strong></p>.<p><strong>ವಿಜೇತ ತಂಡಗಳು:</strong> ಪುರುಷರ ವಿಭಾಗ– ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ ( ಪ್ರಥಮ), ಎಸ್.ಆರ್.ಕೆ.ಪಿ ಕಾಲೇಜು, ಮುಧೋಳ (ದ್ವಿತೀಯ), ಭಂಡಾರಿ ಹಾಗೂ ರಾಠಿ ಮಹಾವಿದ್ಯಾಲಯ ಗುಳೇದಗುಡ್ಡ (ತೃತೀಯ).</p>.<p><strong>ಮಹಿಳೆಯರ ವಿಭಾಗ–</strong> ಎಸ್.ಆರ್. ಕಂಠಿ ಕಾಲೇಜು ಮುಧೋಳ (ಪ್ರಥಮ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನವನಗರ (ದ್ವಿತೀಯ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹುನಗುಂದ (ತೃತೀಯ).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>