<p><strong>ಬಾಗಲಕೋಟೆ:</strong> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಇದೇ ಸಂದರ್ಭದಲ್ಲಿ ಭೀಮಪ್ಪ ಗೊರವರ ಸ್ಮರಣಾರ್ಥ ನೀಡುವ ಕನಕಸಿರಿ ಪ್ರಶಸ್ತಿಯನ್ನು ನೀಲಪ್ಪ ಅಂಬಲಿಯವರ ಅವರಿಗೆ ಪ್ರದಾನ ಮಾಡಲಾಯಿತು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನಿಲಕುಮಾರ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮುದಾಯದ ಮುಖಂಡರಾದ ಬಿ.ಡಿ.ಸಿದ್ದಾಪುರ, ಎಚ್.ಬಿ.ಗೊರವರ, ಮಳಿಯಪ್ಪ ಗುಳಬಾಳ, ಧರ್ಮಣ್ಣ ಸುಣಗದ, ಸೋಮು ಕೈರವಾಡಗಿ, ಆತ್ಮಾನಂದ ಜಾಲಿಹಾಳ, ಸಿದ್ದು ಪೂಜಾರ ಉಪಸ್ಥಿತರಿದ್ದರು.</p>.<p><strong>ಸರ್ಕಾರಿ ಪ್ರಥಮ ದರ್ಜೆ ಕಾಲೇಜು:</strong></p>.<p> ಭಕ್ತ ಕನಕದಾಸರ ಕಾವ್ಯ ಭಾಷೆ ಅತ್ಯಂತ ಸರಳವಾಗಿದ್ದು, ಸಾಮಾಜಿಕ ಸಮಾನತೆ ಮತ್ತು ಮಾನವ ಕಳಕಳಿ ಹೊಂದಿರುವುದರಿಂದ ಅವರ ಚಿಂತನೆಗಳು ಎಲ್ಲಕಾಲಕ್ಕೂ ಪ್ರಸ್ತುತವಾಗಿವೆ ಎಂದು ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.</p>.<p>ಕನಕದಾಸರ ಆದರ್ಶಗಳನ್ನು ಪಾಲಿಸುತ್ತಾ ಅವರು ಹಾಕಿಕೊಟ್ಟಿರುವ ಪಥದಲ್ಲಿ ಮುನ್ನಡೆಯಬೇಕು ಎಂದರು.</p>.<p><strong>ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಕಾಲೇಜು:</strong> </p>.<p>ಕನಕದಾಸರಂತಹ ಹಲವು ಮಹಾತ್ಮರ ಬದುಕು-ಬರಹ, ಸಂದೇಶ ಹಾಗೂ ಸಾಧನೆ ಮನುಕುಲಕ್ಕೆ ದಾರಿದೀಪ ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.</p>.<p>ಉಪನ್ಯಾಸಕಿ ಗೀತಾ ಕಿಲಬನೂರ ಮಾತನಾಡಿ, ಕನಕದಾಸರ ಕೀರ್ತನೆಗಳಲ್ಲಿ ಕಂಡುಬರುವ ಮಾನವೀಯ ಮೌಲ್ಯ, ಸಾಮಾಜಿಕ ಕಳಕಳಿ, ಜಾತಿ ಪದ್ಧತಿ, ಸಾಮಾಜಿಕ ಮೌಢ್ಯ ಮುಂತಾದವುಗಳ ಕುರಿತು ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ಸಾರಿಯಾ ಜಲಗೇರಿ, ಪ್ರಶಾಂತ ಭಜಂತ್ರಿ, ನಿಂಗಪ್ಪ ಕೆಂಗರ, ಮಂಜುಳಾ ಗೌಡರ, ಸ್ನೇಹಾ ಅರಬಿ ಮತ್ತು ಉಪನ್ಯಾಸಕಿ ಕೀರ್ತಿ ದಾಸರ ಮಾತನಾಡಿದರು.</p>.<p>ಉಪನ್ಯಾಸಕ ಕೆ.ಜಿ.ಲಮಾಣಿ, ಐಕ್ಯೂಎಸಿ ಸಂಯೋಜಕ ಪ್ರೊ.ಎಸ್.ಎಸ್.ಹಂಗರಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಇದೇ ಸಂದರ್ಭದಲ್ಲಿ ಭೀಮಪ್ಪ ಗೊರವರ ಸ್ಮರಣಾರ್ಥ ನೀಡುವ ಕನಕಸಿರಿ ಪ್ರಶಸ್ತಿಯನ್ನು ನೀಲಪ್ಪ ಅಂಬಲಿಯವರ ಅವರಿಗೆ ಪ್ರದಾನ ಮಾಡಲಾಯಿತು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನಿಲಕುಮಾರ ದಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮುದಾಯದ ಮುಖಂಡರಾದ ಬಿ.ಡಿ.ಸಿದ್ದಾಪುರ, ಎಚ್.ಬಿ.ಗೊರವರ, ಮಳಿಯಪ್ಪ ಗುಳಬಾಳ, ಧರ್ಮಣ್ಣ ಸುಣಗದ, ಸೋಮು ಕೈರವಾಡಗಿ, ಆತ್ಮಾನಂದ ಜಾಲಿಹಾಳ, ಸಿದ್ದು ಪೂಜಾರ ಉಪಸ್ಥಿತರಿದ್ದರು.</p>.<p><strong>ಸರ್ಕಾರಿ ಪ್ರಥಮ ದರ್ಜೆ ಕಾಲೇಜು:</strong></p>.<p> ಭಕ್ತ ಕನಕದಾಸರ ಕಾವ್ಯ ಭಾಷೆ ಅತ್ಯಂತ ಸರಳವಾಗಿದ್ದು, ಸಾಮಾಜಿಕ ಸಮಾನತೆ ಮತ್ತು ಮಾನವ ಕಳಕಳಿ ಹೊಂದಿರುವುದರಿಂದ ಅವರ ಚಿಂತನೆಗಳು ಎಲ್ಲಕಾಲಕ್ಕೂ ಪ್ರಸ್ತುತವಾಗಿವೆ ಎಂದು ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.</p>.<p>ಕನಕದಾಸರ ಆದರ್ಶಗಳನ್ನು ಪಾಲಿಸುತ್ತಾ ಅವರು ಹಾಕಿಕೊಟ್ಟಿರುವ ಪಥದಲ್ಲಿ ಮುನ್ನಡೆಯಬೇಕು ಎಂದರು.</p>.<p><strong>ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಕಾಲೇಜು:</strong> </p>.<p>ಕನಕದಾಸರಂತಹ ಹಲವು ಮಹಾತ್ಮರ ಬದುಕು-ಬರಹ, ಸಂದೇಶ ಹಾಗೂ ಸಾಧನೆ ಮನುಕುಲಕ್ಕೆ ದಾರಿದೀಪ ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.</p>.<p>ಉಪನ್ಯಾಸಕಿ ಗೀತಾ ಕಿಲಬನೂರ ಮಾತನಾಡಿ, ಕನಕದಾಸರ ಕೀರ್ತನೆಗಳಲ್ಲಿ ಕಂಡುಬರುವ ಮಾನವೀಯ ಮೌಲ್ಯ, ಸಾಮಾಜಿಕ ಕಳಕಳಿ, ಜಾತಿ ಪದ್ಧತಿ, ಸಾಮಾಜಿಕ ಮೌಢ್ಯ ಮುಂತಾದವುಗಳ ಕುರಿತು ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ಸಾರಿಯಾ ಜಲಗೇರಿ, ಪ್ರಶಾಂತ ಭಜಂತ್ರಿ, ನಿಂಗಪ್ಪ ಕೆಂಗರ, ಮಂಜುಳಾ ಗೌಡರ, ಸ್ನೇಹಾ ಅರಬಿ ಮತ್ತು ಉಪನ್ಯಾಸಕಿ ಕೀರ್ತಿ ದಾಸರ ಮಾತನಾಡಿದರು.</p>.<p>ಉಪನ್ಯಾಸಕ ಕೆ.ಜಿ.ಲಮಾಣಿ, ಐಕ್ಯೂಎಸಿ ಸಂಯೋಜಕ ಪ್ರೊ.ಎಸ್.ಎಸ್.ಹಂಗರಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>