<p><strong>ಜಮಖಂಡಿ</strong> (ಬಾಗಲಕೋಟೆ): ‘ತಾಲ್ಲೂಕಿನ ಕಲ್ಹಳ್ಳಿ ಗ್ರಾಮದ ಸತ್ಯಕಾಮ ಪ್ರತಿಷ್ಠಾನದ ‘ಸುಮ್ಮನೆ’ ಸಭಾಭವನದ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯಸಭೆ ಹಮ್ಮಿಕೊಳ್ಳಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.</p>.<p>‘ಕಾರ್ಯಕಾರಿಣಿ ಸಮಿತಿಯಲ್ಲಿ ಅನುಮೋದನೆ ಪಡೆದು, ಸಭೆಯ ಸ್ಥಳ ಘೋಷಿಸಲಾಗುವುದು. ಎಲ್ಲಿಯಾದರೂ ಸಾಮಾನ್ಯ ಸಭೆ ಮಾಡಬಹುದು ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಹಳ್ಳಿಗಳಲ್ಲಿ ಸಾಮಾನ್ಯ ಸಭೆ ಮಾಡುವುದರಿಂದ ಜನರಲ್ಲಿ ಕನ್ನಡದ ಬಗ್ಗೆ ಆಸಕ್ತಿ ಮೂಡುತ್ತದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಪರಿಷತ್ತಿನ ವಾರ್ಷಿಕ ಸಭೆಯು ಕೆಲವರ ಕುತಂತ್ರದಿಂದ ನೆರವೇರಲಿಲ್ಲ. ಪರಿಷತ್ತಿನ ಸದಸ್ಯ ಬಲ 4 ಲಕ್ಷ ಇದೆ. ಎಲ್ಲರೂ ಬಂದರೆ ಹೇಗೆ ನಿಭಾಯಿಸಲು ಸಾಧ್ಯ ಎಂದು ಪೊಲೀಸರಿಗೆ ತಪ್ಪು ಮಾಹಿತಿ ನೀಡಿದರು. ಸುರಕ್ಷತೆ ಕಾರಣದಿಂದ ಸಭೆಗೆ ಅನುಮತಿ ನಿರಾಕರಿಸಲಾಯಿತು’ ಎಂದು ಅವರು ಹೇಳಿದರು.</p>.<p>‘ದೊಡ್ಡ ಸಂಸ್ಥೆಯಲ್ಲಿ ಪರ, ವಿರೋಧ ಸಹಜ. ಆದರೆ, ಎಸ್.ಜಿ.ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ವಸುಂಧರಾ ಭೂಪತಿ, ಹಂ.ಪ.ನಾಗರಾಜಯ್ಯ ಸೇರಿ ಕೆಲವರು ದ್ವೇಷದ ಕಾರಣಕ್ಕೆ ಕುತಂತ್ರ ನಡೆಸಿದ್ದಾರೆ. ಅದಕ್ಕೆ ಬಗ್ಗುವದಿಲ್ಲ, ದಾರಿ ತಪ್ಪಿಸುವ ಕೆಲಸವನ್ನು ಅವರು ಬಿಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong> (ಬಾಗಲಕೋಟೆ): ‘ತಾಲ್ಲೂಕಿನ ಕಲ್ಹಳ್ಳಿ ಗ್ರಾಮದ ಸತ್ಯಕಾಮ ಪ್ರತಿಷ್ಠಾನದ ‘ಸುಮ್ಮನೆ’ ಸಭಾಭವನದ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯಸಭೆ ಹಮ್ಮಿಕೊಳ್ಳಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.</p>.<p>‘ಕಾರ್ಯಕಾರಿಣಿ ಸಮಿತಿಯಲ್ಲಿ ಅನುಮೋದನೆ ಪಡೆದು, ಸಭೆಯ ಸ್ಥಳ ಘೋಷಿಸಲಾಗುವುದು. ಎಲ್ಲಿಯಾದರೂ ಸಾಮಾನ್ಯ ಸಭೆ ಮಾಡಬಹುದು ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಹಳ್ಳಿಗಳಲ್ಲಿ ಸಾಮಾನ್ಯ ಸಭೆ ಮಾಡುವುದರಿಂದ ಜನರಲ್ಲಿ ಕನ್ನಡದ ಬಗ್ಗೆ ಆಸಕ್ತಿ ಮೂಡುತ್ತದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಪರಿಷತ್ತಿನ ವಾರ್ಷಿಕ ಸಭೆಯು ಕೆಲವರ ಕುತಂತ್ರದಿಂದ ನೆರವೇರಲಿಲ್ಲ. ಪರಿಷತ್ತಿನ ಸದಸ್ಯ ಬಲ 4 ಲಕ್ಷ ಇದೆ. ಎಲ್ಲರೂ ಬಂದರೆ ಹೇಗೆ ನಿಭಾಯಿಸಲು ಸಾಧ್ಯ ಎಂದು ಪೊಲೀಸರಿಗೆ ತಪ್ಪು ಮಾಹಿತಿ ನೀಡಿದರು. ಸುರಕ್ಷತೆ ಕಾರಣದಿಂದ ಸಭೆಗೆ ಅನುಮತಿ ನಿರಾಕರಿಸಲಾಯಿತು’ ಎಂದು ಅವರು ಹೇಳಿದರು.</p>.<p>‘ದೊಡ್ಡ ಸಂಸ್ಥೆಯಲ್ಲಿ ಪರ, ವಿರೋಧ ಸಹಜ. ಆದರೆ, ಎಸ್.ಜಿ.ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ವಸುಂಧರಾ ಭೂಪತಿ, ಹಂ.ಪ.ನಾಗರಾಜಯ್ಯ ಸೇರಿ ಕೆಲವರು ದ್ವೇಷದ ಕಾರಣಕ್ಕೆ ಕುತಂತ್ರ ನಡೆಸಿದ್ದಾರೆ. ಅದಕ್ಕೆ ಬಗ್ಗುವದಿಲ್ಲ, ದಾರಿ ತಪ್ಪಿಸುವ ಕೆಲಸವನ್ನು ಅವರು ಬಿಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>