<p><strong>ಬಾಗಲಕೋಟೆ</strong>: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಹೆಸರು ಘೋಷಿಸಲಾಗಿದೆ.</p>.<p>ಜಮಖಂಡಿ ಕ್ಷೇತ್ರದಿಂದ ಹಾಲಿ ಶಾಸಕ ಆನಂದ ನ್ಯಾಮಗೌಡ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಹುನಗುಂದ ಕ್ಷೇತ್ರದಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅಭ್ಯರ್ಥಿಯಾಗಿದ್ದಾರೆ.</p>.<p>ರಾಜ್ಯದಲ್ಲಿ ಬಹುಚರ್ಚಿತ ವಿಧಾನಸಭಾ ಕ್ಷೇತ್ರ, ಹಾಲಿ ಶಾಸಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದಿರುವುದು ಚರ್ಚೆಗೆ ಕಾರಣವಾಗಿದೆ. </p>.<p>ಸಿದ್ದರಾಮಯ್ಯ ಹೆಸರನ್ನು ವರುಣಾ ಕ್ಷೇತ್ರಕ್ಕೆ ಘೋಷಿಸಿರುವುದರಿಂದ ಬಾದಾಮಿ ಕ್ಷೇತ್ರಕ್ಕೂ ಹೆಸರು ಘೋಷಣೆ ಮಾಡಬೇಕಿತ್ತು ಎಂಬುದು ಸ್ಥಳೀಯ ಕಾಂಗ್ರೆಸ್ ನಾಯಕರ ಅನಿಸಿಕೆ.</p>.<p>ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಜನಾಗ್ರಹದ ವಿಷಯವನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿರುವುದರಿಂದ ಬಾದಾಮಿಯಿಂದಲೂ ಸ್ಪರ್ಧಿಸಬಹುದು ಎಂಬ ಚರ್ಚೆಗೆ ಮುಂದುವರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಹೆಸರು ಘೋಷಿಸಲಾಗಿದೆ.</p>.<p>ಜಮಖಂಡಿ ಕ್ಷೇತ್ರದಿಂದ ಹಾಲಿ ಶಾಸಕ ಆನಂದ ನ್ಯಾಮಗೌಡ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ಹುನಗುಂದ ಕ್ಷೇತ್ರದಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅಭ್ಯರ್ಥಿಯಾಗಿದ್ದಾರೆ.</p>.<p>ರಾಜ್ಯದಲ್ಲಿ ಬಹುಚರ್ಚಿತ ವಿಧಾನಸಭಾ ಕ್ಷೇತ್ರ, ಹಾಲಿ ಶಾಸಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದಿರುವುದು ಚರ್ಚೆಗೆ ಕಾರಣವಾಗಿದೆ. </p>.<p>ಸಿದ್ದರಾಮಯ್ಯ ಹೆಸರನ್ನು ವರುಣಾ ಕ್ಷೇತ್ರಕ್ಕೆ ಘೋಷಿಸಿರುವುದರಿಂದ ಬಾದಾಮಿ ಕ್ಷೇತ್ರಕ್ಕೂ ಹೆಸರು ಘೋಷಣೆ ಮಾಡಬೇಕಿತ್ತು ಎಂಬುದು ಸ್ಥಳೀಯ ಕಾಂಗ್ರೆಸ್ ನಾಯಕರ ಅನಿಸಿಕೆ.</p>.<p>ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಜನಾಗ್ರಹದ ವಿಷಯವನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿರುವುದರಿಂದ ಬಾದಾಮಿಯಿಂದಲೂ ಸ್ಪರ್ಧಿಸಬಹುದು ಎಂಬ ಚರ್ಚೆಗೆ ಮುಂದುವರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>