<p><strong>ಬಾಗಲಕೋಟೆ:</strong> ಘೋಷಣೆಯಾಗಿ ದಶ ವರ್ಷ ಪೂರೈಸಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಈ ವರ್ಷವೂ ಅನುದಾನ ದೊರೆತಿಲ್ಲ. ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಉಪಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ. ಆದರೆ, ಅನುದಾನದ ಬಗ್ಗೆ ಸ್ಪಷ್ಟತೆ ಇಲ್ಲ.</p>.<p>2014ದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಘೋಷಿಸಿರುವ ಯೋಜನೆಗೆ ಈ ವರ್ಷ ಅನುದಾನ ಸಿಗಲಿದೆ ಎಂದೇ ಕಾಂಗ್ರೆಸ್ ನಾಯಕರು ಹೇಳಿದ್ದರೆ. ಆದರೆ, ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪವೇ ಆಗಿಲ್ಲ. ಇದು ಜಿಲ್ಲೆಯ ಜನರಲ್ಲಿ ತೀವ್ರ ನಿರಾಸೆಯುಂಟು ಮಾಡಿದೆ.</p>.<p>ಕರ್ನಾಟಕ ನೀರಾವರಿ ನಿಗಮದಿಂದ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಅನವಾಲ ಏತ ನೀರಾವರಿ ಸೇರಿದಂತೆ ರಾಜ್ಯದ ವಿವಿಧ ಏತ ನೀರಾವರಿಗಳಿಗೆ ₹ 7,280 ಕೋಟಿ ಘೋಷಿಸಲಾಗಿದೆ.</p>.<p>ಕೃಷ್ಣಾಭಾಗ್ಯ ಜಲ ನಿಗಮದಿಂದ ಜಿಲ್ಲೆಯ ಕೆರೂರು ಸೇರಿದಂತೆ ರಾಜ್ಯದ ಏತ ನೀರಾವರಿಗೆ ₹ 3,779 ಕೋಟಿ ಘೋಷಿಸಲಾಗಿದೆ. ಆದರೆ, ಜಿಲ್ಲೆಯ ಯೋಜನೆಗಳಿಗೆ ಎಷ್ಟು ಸಿಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಯೋಜನೆ ಪೂರ್ಣಗೊಳ್ಳುವಷ್ಟು ಅನುದಾನ ದೊರೆತರೆ ಜನತೆಗೆ ಒಂದಷ್ಟು ಅನುಕೂಲ ಆಗಲಿದೆ.</p>.<p>ಸಕ್ಕರೆ ಕಾರ್ಖಾನೆಗಳಲ್ಲಿ ಎಪಿಎಂಸಿ ವತಿಯಿಂದ ತೂಕದ ಯಂತ್ರ ಅಳವಡಿಕೆ ಮಾಡುವುದರಿಂದ ತೂಕದಲ್ಲಿ ಮೋಸ ಆಗುತ್ತದೆ ಎಂದು ದೂರುತ್ತಿದ್ದ ರೈತರಿಗೆ ಒಂದಷ್ಟು ನಿರಾಳ ಆಗಬಹುದು.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಹುನಗುಂದದಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ವಿಮುಕ್ತ ದೇವದಾಸಿಯರು ಹೆಚ್ಚಿದ್ದಾರೆ. ಅವರ ಮಾಸಾಶನವನ್ನು ₹1,500 ರಿಂದ ₹ 2,000ಕ್ಕೆ ಹೆಚ್ಚಳ ಮಾಡಲಾಗಿದೆ.</p>.<p>2024-29ರವರೆಗೆ ರೂಪಿಸಿರುವ ಹೊಸ ಜವಳಿ ನೀತಿಯಡಿ ₹10 ಸಾವಿರ ಕೋಟಿ ಬಂಡವಾಳ ಹೂಡಲಾಗುತ್ತಿದ್ದು, 2 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅದರ ಲಾಭ ಎಷ್ಟು ಸಿಗುವುದೋ ಗೊತ್ತಿಲ್ಲ. ರಾಜ್ಯದ ವಿವಿಧೆಡೆ ಜವಳಿ ಪಾರ್ಕ್, 25 ಮಿನಿ ಜವಳಿ ಪಾರ್ಕ್ ಸ್ಥಾಪನೆ ಬಗ್ಗೆ ಉಲ್ಲೇಖಿಸಲಾಗಿದೆ. ಸ್ಥಳಗಳ ಉಲ್ಲೇಖವಿಲ್ಲ.</p>.<p>ಕೆಎಸ್ಟಿಡಿಸಿ ವತಿಯಿಂದ ಐಹೊಳೆಯಲ್ಲಿ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಘೋಷಣೆಯಾಗಿ ದಶ ವರ್ಷ ಪೂರೈಸಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಈ ವರ್ಷವೂ ಅನುದಾನ ದೊರೆತಿಲ್ಲ. ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಉಪಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ. ಆದರೆ, ಅನುದಾನದ ಬಗ್ಗೆ ಸ್ಪಷ್ಟತೆ ಇಲ್ಲ.</p>.<p>2014ದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಘೋಷಿಸಿರುವ ಯೋಜನೆಗೆ ಈ ವರ್ಷ ಅನುದಾನ ಸಿಗಲಿದೆ ಎಂದೇ ಕಾಂಗ್ರೆಸ್ ನಾಯಕರು ಹೇಳಿದ್ದರೆ. ಆದರೆ, ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪವೇ ಆಗಿಲ್ಲ. ಇದು ಜಿಲ್ಲೆಯ ಜನರಲ್ಲಿ ತೀವ್ರ ನಿರಾಸೆಯುಂಟು ಮಾಡಿದೆ.</p>.<p>ಕರ್ನಾಟಕ ನೀರಾವರಿ ನಿಗಮದಿಂದ ಜಿಲ್ಲೆಯ ಮೆಳ್ಳಿಗೇರಿ-ಹಲಗಲಿ, ಸಸಾಲಟ್ಟಿ-ಶಿವಲಿಂಗೇಶ್ವರ, ಶಿರೂರು, ಅನವಾಲ ಏತ ನೀರಾವರಿ ಸೇರಿದಂತೆ ರಾಜ್ಯದ ವಿವಿಧ ಏತ ನೀರಾವರಿಗಳಿಗೆ ₹ 7,280 ಕೋಟಿ ಘೋಷಿಸಲಾಗಿದೆ.</p>.<p>ಕೃಷ್ಣಾಭಾಗ್ಯ ಜಲ ನಿಗಮದಿಂದ ಜಿಲ್ಲೆಯ ಕೆರೂರು ಸೇರಿದಂತೆ ರಾಜ್ಯದ ಏತ ನೀರಾವರಿಗೆ ₹ 3,779 ಕೋಟಿ ಘೋಷಿಸಲಾಗಿದೆ. ಆದರೆ, ಜಿಲ್ಲೆಯ ಯೋಜನೆಗಳಿಗೆ ಎಷ್ಟು ಸಿಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಯೋಜನೆ ಪೂರ್ಣಗೊಳ್ಳುವಷ್ಟು ಅನುದಾನ ದೊರೆತರೆ ಜನತೆಗೆ ಒಂದಷ್ಟು ಅನುಕೂಲ ಆಗಲಿದೆ.</p>.<p>ಸಕ್ಕರೆ ಕಾರ್ಖಾನೆಗಳಲ್ಲಿ ಎಪಿಎಂಸಿ ವತಿಯಿಂದ ತೂಕದ ಯಂತ್ರ ಅಳವಡಿಕೆ ಮಾಡುವುದರಿಂದ ತೂಕದಲ್ಲಿ ಮೋಸ ಆಗುತ್ತದೆ ಎಂದು ದೂರುತ್ತಿದ್ದ ರೈತರಿಗೆ ಒಂದಷ್ಟು ನಿರಾಳ ಆಗಬಹುದು.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಹುನಗುಂದದಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ ವಿಮುಕ್ತ ದೇವದಾಸಿಯರು ಹೆಚ್ಚಿದ್ದಾರೆ. ಅವರ ಮಾಸಾಶನವನ್ನು ₹1,500 ರಿಂದ ₹ 2,000ಕ್ಕೆ ಹೆಚ್ಚಳ ಮಾಡಲಾಗಿದೆ.</p>.<p>2024-29ರವರೆಗೆ ರೂಪಿಸಿರುವ ಹೊಸ ಜವಳಿ ನೀತಿಯಡಿ ₹10 ಸಾವಿರ ಕೋಟಿ ಬಂಡವಾಳ ಹೂಡಲಾಗುತ್ತಿದ್ದು, 2 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅದರ ಲಾಭ ಎಷ್ಟು ಸಿಗುವುದೋ ಗೊತ್ತಿಲ್ಲ. ರಾಜ್ಯದ ವಿವಿಧೆಡೆ ಜವಳಿ ಪಾರ್ಕ್, 25 ಮಿನಿ ಜವಳಿ ಪಾರ್ಕ್ ಸ್ಥಾಪನೆ ಬಗ್ಗೆ ಉಲ್ಲೇಖಿಸಲಾಗಿದೆ. ಸ್ಥಳಗಳ ಉಲ್ಲೇಖವಿಲ್ಲ.</p>.<p>ಕೆಎಸ್ಟಿಡಿಸಿ ವತಿಯಿಂದ ಐಹೊಳೆಯಲ್ಲಿ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>