<p><strong>ಬಾಗಲಕೋಟೆ: </strong>ಈ ಬಾರಿಯ ಬಜೆಟ್ನಲ್ಲಿ ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರದ 15 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಪತ್ರ ಬರೆದಿದ್ದಾರೆ.</p>.<p>ಇದರಲ್ಲಿ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ, ಕೆರೂರು ಏತನೀರಾವರಿ ಯೋಜನೆ, ಬಾದಾಮಿಯಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯ, ಟ್ರೀ ಪಾರ್ಕ್, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಗುಳೇದಗುಡ್ಡದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕ, ಜವಳಿ ಪಾರ್ಕ್, ಪಶುವೈದ್ಯಕೀಯ ಕಾಲೇಜು ಸ್ಥಾಪನೆಯ ಬೇಡಿಕೆ ಒಳಗೊಂಡಿದೆ.</p>.<p>ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ₹25 ಕೋಟಿ, ಕೆರೂರು ಏತ ನೀರಾವರಿ ಯೋಜನೆಗೆ ₹525 ಕೋಟಿ, ಜವಳಿ ಪಾರ್ಕ್ಗೆ ₹50 ಕೋಟಿ, ಟ್ರೀಪಾರ್ಕ್ಗೆ ₹100 ಕೋಟಿ, ಪ್ರವಾಸಿಗರಿಗೆ ಮೂಲ ಸೌಕರ್ಯಕ್ಕೆ ₹1000 ಕೋಟಿ, ಕೆರೆಗಳಿಗೆ ನೀರು ತುಂಬಿಸಲು ₹90 ಕೋಟಿ, ಬಹುಮಹಡಿ ವಾಣಿಜ್ಯ ಸಂಕೀರ್ಣಕ್ಕೆ ₹25 ಕೋಟಿ ಅನುದಾನ ಕಲ್ಪಿಸಲು ಬೇಡಿಕೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಈ ಬಾರಿಯ ಬಜೆಟ್ನಲ್ಲಿ ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರದ 15 ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಪತ್ರ ಬರೆದಿದ್ದಾರೆ.</p>.<p>ಇದರಲ್ಲಿ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ, ಕೆರೂರು ಏತನೀರಾವರಿ ಯೋಜನೆ, ಬಾದಾಮಿಯಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯ, ಟ್ರೀ ಪಾರ್ಕ್, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಗುಳೇದಗುಡ್ಡದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕ, ಜವಳಿ ಪಾರ್ಕ್, ಪಶುವೈದ್ಯಕೀಯ ಕಾಲೇಜು ಸ್ಥಾಪನೆಯ ಬೇಡಿಕೆ ಒಳಗೊಂಡಿದೆ.</p>.<p>ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ₹25 ಕೋಟಿ, ಕೆರೂರು ಏತ ನೀರಾವರಿ ಯೋಜನೆಗೆ ₹525 ಕೋಟಿ, ಜವಳಿ ಪಾರ್ಕ್ಗೆ ₹50 ಕೋಟಿ, ಟ್ರೀಪಾರ್ಕ್ಗೆ ₹100 ಕೋಟಿ, ಪ್ರವಾಸಿಗರಿಗೆ ಮೂಲ ಸೌಕರ್ಯಕ್ಕೆ ₹1000 ಕೋಟಿ, ಕೆರೆಗಳಿಗೆ ನೀರು ತುಂಬಿಸಲು ₹90 ಕೋಟಿ, ಬಹುಮಹಡಿ ವಾಣಿಜ್ಯ ಸಂಕೀರ್ಣಕ್ಕೆ ₹25 ಕೋಟಿ ಅನುದಾನ ಕಲ್ಪಿಸಲು ಬೇಡಿಕೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>