<p><strong>ಬಾಗಲಕೋಟೆ:</strong> ಮನೆ ಹಂಚಿಕೆ ಭ್ರಷ್ಟಾಚಾರ ಕುರಿತು ಬಿ.ಆರ್. ಪಾಟೀಲ, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ಕುರಿತು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.</p>.ಬಿ.ಆರ್.ಪಾಟೀಲ ಆಡಿಯೊ ಮೂಲಕ ಭ್ರಷ್ಟಾಚಾರ ಮತ್ತೊಮ್ಮೆ ಬಯಲು: ಜಗದೀಶ ಶೆಟ್ಟರ್.<p>ಜಿಲ್ಲೆಯ ಪಟ್ಟದಕಲ್ಲಿನಲ್ಲಿ ಶನಿವಾರ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಹೇಳಿದರೆ ಬಿಜೆಪಿಯವರಿಗೆ ಕೆಲಸ ಇಲ್ಲ ಎನ್ನುತ್ತಾರೆ. ಈಗ ಅವರದ್ದೇ ಪಕ್ಷದ ನಾಯಕರು ಹೇಳುತ್ತಿದ್ದಾರೆ ಎಂದರು.</p><p>ಮನೆ ಹಂಚಿಕೆಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಅಡಿಯೊ ಬಿಡುಗಡೆ ಆಗಿದೆ. ಹಣ ನೀಡದಿದ್ದರೆ ಮನೆ ಮಂಜೂರು ಮಾಡಲ್ಲ ಎಂದಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ದುಸ್ಥಿತಿ ಎಂದು ಟೀಕಿಸಿದರು.</p><p>ವರ್ಗಾವಣೆಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ. ಶೇ60 ಪರ್ಸೆಂಟ್ ಸರ್ಕಾರ ಎಂದು ಗುತ್ತಿಗೆದಾರರು ಆರೋಪಿಸುತ್ತಿದ್ದಾರೆ. ಭ್ರಷ್ಟಾಚಾರದ ಮೊಟ್ಟೆ ಇಟ್ಟು ಮರಿಗಳನ್ನು ಬೆಳೆಸಿದವರೇ ಕಾಂಗ್ರೆಸ್ಸಿಗರು ಎಂದು ಆರೋಪಿಸಿದರು.</p>.ಕಾಂಗ್ರೆಸ್ ಆಡಳಿತ ಭ್ರಷ್ಟಾಚಾರ, ಲಂಚಗುಳಿತನದಿಂದ ಗಬ್ಬುನಾರುತ್ತಿದೆ: ವಿಜಯೇಂದ್ರ.<p>ಯುಪಿಎ ಸರ್ಕಾರದಲ್ಲಿ ₹12 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ.</p><p>ಸೊನ್ನೆ ಇಡಲಿಕ್ಕೂ ಗೊಂದಲ ಆಗಬೇಕು. ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರೇ ಜಾಮೀನಿನ ಮೇಲೆ ಇದ್ದಾರೆ. ಇನ್ನು ಇವರಿಗೆ ಹೇಳುವವರು ಯಾರು ಎಂದು ಪ್ರಶ್ನಿಸಿದರು.</p><p>ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಬಣದವರು ನವೆಂಬರ್ ನಲ್ಲಿ ಸಿಎಂ ಬದಲಾವಣೆ ಖಚಿತ ಎನ್ನುತ್ತಾರೆ. ಸಿದ್ದರಾಮಯ್ಯ ಬಣದವರು ಯಾವುದೇ ಬದಲಾವಣೆ ಇಲ್ಲ ಎನ್ನುತ್ತಾರೆ. ಶಾಸಕರನ್ನು ಖರೀದಿಸಲು ಎರಡೂ ಬಣದವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.</p> .ಶಿವಮೊಗ್ಗ | ಬಿಜೆಪಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತ: ಸಂಸದ ಬಿ.ವೈ.ರಾಘವೇಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮನೆ ಹಂಚಿಕೆ ಭ್ರಷ್ಟಾಚಾರ ಕುರಿತು ಬಿ.ಆರ್. ಪಾಟೀಲ, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ ಕುರಿತು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.</p>.ಬಿ.ಆರ್.ಪಾಟೀಲ ಆಡಿಯೊ ಮೂಲಕ ಭ್ರಷ್ಟಾಚಾರ ಮತ್ತೊಮ್ಮೆ ಬಯಲು: ಜಗದೀಶ ಶೆಟ್ಟರ್.<p>ಜಿಲ್ಲೆಯ ಪಟ್ಟದಕಲ್ಲಿನಲ್ಲಿ ಶನಿವಾರ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಹೇಳಿದರೆ ಬಿಜೆಪಿಯವರಿಗೆ ಕೆಲಸ ಇಲ್ಲ ಎನ್ನುತ್ತಾರೆ. ಈಗ ಅವರದ್ದೇ ಪಕ್ಷದ ನಾಯಕರು ಹೇಳುತ್ತಿದ್ದಾರೆ ಎಂದರು.</p><p>ಮನೆ ಹಂಚಿಕೆಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಅಡಿಯೊ ಬಿಡುಗಡೆ ಆಗಿದೆ. ಹಣ ನೀಡದಿದ್ದರೆ ಮನೆ ಮಂಜೂರು ಮಾಡಲ್ಲ ಎಂದಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ದುಸ್ಥಿತಿ ಎಂದು ಟೀಕಿಸಿದರು.</p><p>ವರ್ಗಾವಣೆಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ. ಶೇ60 ಪರ್ಸೆಂಟ್ ಸರ್ಕಾರ ಎಂದು ಗುತ್ತಿಗೆದಾರರು ಆರೋಪಿಸುತ್ತಿದ್ದಾರೆ. ಭ್ರಷ್ಟಾಚಾರದ ಮೊಟ್ಟೆ ಇಟ್ಟು ಮರಿಗಳನ್ನು ಬೆಳೆಸಿದವರೇ ಕಾಂಗ್ರೆಸ್ಸಿಗರು ಎಂದು ಆರೋಪಿಸಿದರು.</p>.ಕಾಂಗ್ರೆಸ್ ಆಡಳಿತ ಭ್ರಷ್ಟಾಚಾರ, ಲಂಚಗುಳಿತನದಿಂದ ಗಬ್ಬುನಾರುತ್ತಿದೆ: ವಿಜಯೇಂದ್ರ.<p>ಯುಪಿಎ ಸರ್ಕಾರದಲ್ಲಿ ₹12 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ.</p><p>ಸೊನ್ನೆ ಇಡಲಿಕ್ಕೂ ಗೊಂದಲ ಆಗಬೇಕು. ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರೇ ಜಾಮೀನಿನ ಮೇಲೆ ಇದ್ದಾರೆ. ಇನ್ನು ಇವರಿಗೆ ಹೇಳುವವರು ಯಾರು ಎಂದು ಪ್ರಶ್ನಿಸಿದರು.</p><p>ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಬಣದವರು ನವೆಂಬರ್ ನಲ್ಲಿ ಸಿಎಂ ಬದಲಾವಣೆ ಖಚಿತ ಎನ್ನುತ್ತಾರೆ. ಸಿದ್ದರಾಮಯ್ಯ ಬಣದವರು ಯಾವುದೇ ಬದಲಾವಣೆ ಇಲ್ಲ ಎನ್ನುತ್ತಾರೆ. ಶಾಸಕರನ್ನು ಖರೀದಿಸಲು ಎರಡೂ ಬಣದವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.</p> .ಶಿವಮೊಗ್ಗ | ಬಿಜೆಪಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತ: ಸಂಸದ ಬಿ.ವೈ.ರಾಘವೇಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>