‘ರಾಜ್ಯದಲ್ಲಿನ ಸಂಕಷ್ಟ ಪರಿಸ್ಥಿತಿಯ ಬಗ್ಗೆ ಕೇಂದ್ರದೊಂದಿಗೂ ನಿರಂತರ ಸಂಪರ್ಕ ಇಟ್ಟುಕೊಂಡಿರುವೆ. ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರಿಗೆ ಇಲ್ಲಿನ ಪರಿಸ್ಥಿತಿ ಮನವರಿಕೆ ಮಾಡಿಕೊಡುತ್ತಿರುವೆ. ಎಲ್ಲ ರೀತಿಯ ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ‘ ಎಂದು ಹೇಳಿದ ‘ಯಡಿಯೂರಪ್ಪ, ನಾನು ಏಕಾಂಗಿ ಅಲ್ಲ. ಹಾಗೆ ಅನ್ನಿಸುತ್ತಿಲ್ಲ‘ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.