‘ಈಗಿನ ಪರಿಸ್ಥಿತಿ ಅವಲೋಕಿಸಿದರೆ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದವರು ಮತ್ತೆ ಬದುಕು ಕಟ್ಟಿಕೊಳ್ಳುವುದು ಅಸಾಧ್ಯದ ಮಾತು. ಹಾಗಾಗಿ ಅವರಿಗೆ ಸರ್ಕಾರದಿಂದ ಎಲ್ಲ ರೀತಿ ನೆರವು ಅಗತ್ಯವಿದೆ ಎಂದು ಹೇಳಿದ ಅವರು, ಕೃಷ್ಣಾ ಕೊಳ್ಳದಲ್ಲಿ ಅಧ್ಯಯನ ನಡೆಸಿ ಹಳ್ಳಿಗಳ ಪುನರ್ಸೃಷ್ಟಿಯ ಜೊತೆಗೆ ಇಂತಹ ಅವಘಡಗಳು ಮತ್ತೆ ಮತ್ತೆ ಮರುಕಳಿಸದಂತೆ ಶಾಶ್ವತ ಯೋಜನೆ ರೂಪಿಸಲು ಸರ್ಕಾರ ಮುಂದಾಗಬೇಕು‘ ಎಂದು ಆಗ್ರಹಿಸಿದರು.