ಘಟಪ್ರಭಾ ನದಿಯ ಪ್ರವಾಹದಿಂದ ಕಂಗೆಟ್ಟಿರುವ ಜೀರಗಾಳ ಗ್ರಾಮಸ್ಥರಿಗೆ ಸರಿಯಾದ ಪರಿಹಾರ ನೀಡಿಲ್ಲ. ಬೆಳೆಗಳಿಗೆ ಹಾನಿ ಆಗಿದ್ದು, ಪೀಕು ಇಲ್ಲದೇ ಜೀವನ ನಡೆಸಲು ದುಸ್ತರವಾಗಿದೆ. ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಥಳಕ್ಕೆ ಬಂದು ಸೂಕ್ತ ಭರವಸೆ ನೀಡುವವರೆಗೂ ಹೋರಾಟ ಹಿಂದಕ್ಕೆ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.