<p><strong>ಹುಬ್ಬಳ್ಳಿ:</strong> ಬಾಗಲಕೋಟೆ, ಬೆಳಗಾವಿ ಮತ್ತು ಬಳ್ಳಾರಿ ಜಿಲ್ಲೆಯ ವಿವಿಧೆಡೆ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಕಡೆ ಸೇತುವೆಗಳು ಜಲಾವೃತಗೊಂಡಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಕೆಲ ಕಡೆ ದೇಗುಲಗಳು ಮುಳುಗಡೆಯಾಗಿವೆ. ಗ್ರಾಮಗಳಿಗೂ ನೀರು ಆವರಿಸುವ ಆತಂಕ ಎದುರಾಗಿದೆ.</p>.<p>ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ 8 ಬ್ರಿಜ್ ಕಂ ಬ್ಯಾರೇಜ್ಗಳು ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡಿವೆ. ಪ್ರವಾಹ ಹೆಚ್ಚಾದರೆ, ತಾಲ್ಲೂಕಿನ ಮಿರ್ಜಿ, ಮಳಲಿ, ಒಂಟಗೋಡಿ, ಮಾಚಕನೂರ ಮತ್ತಿತರ ಗ್ರಾಮಗಳಿಗೆ ನೀರು ಆವರಿಸುವ ಭೀತಿ ಎದುರಾಗಿದೆ. </p>.<p>ಮಾಚಕನೂರ ಗ್ರಾಮದ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದೆ. ಭಕ್ತರು ನೀರಿನಲ್ಲೇ ದೇವಸ್ಥಾನದವರೆಗೆ ನಡೆದು, ದೇವರ ದರ್ಶನ ಪಡೆದರು. </p>.<p>ರಾಯಬಾಗ ವರದಿ: ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ-ಭಿರಡಿ ಕೂಡುವ ರಸ್ತೆ ಜಲಾವೃತಗೊಂಡಿದೆ. ರಾಯಬಾಗದ ಕುಡಚಿ–ಉಗಾರ ಸೇತುವೆ ಮುಳುಗಿ ಸಂಚಾರ ಸ್ಥಗಿತಗೊಂಡಿದೆ. ಕುಡಚಿ ಪೋಲೀಸರು ಎರಡೂ ಬದಿ ಬ್ಯಾರಿಕೇಡ್ ಅಳವಡಿಸಿದ್ದಾರೆ.</p>.<p>ಕಂಪ್ಲಿ ವರದಿ: ತುಂಗಭದ್ರಾ ನದಿಗೆ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಮೂರು ದಿನದಿಂದ ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. </p>.<p>ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳಿಂದ ನಿತ್ಯ ಗಂಗಾವತಿಗೆ ತೆರಳುವ ವಿವಿಧ ಶಾಲಾಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ತೆರಳುವ ರೋಗಿಗಳಿಗೆ ಸಮಸ್ಯೆಯಾಗಿದೆ.</p>.<p>ಕೋಟೆ ಗಂಗಮ್ಮನ ಕಟ್ಟೆ, ಕೋಟೆ ಮಾಧವ ತೀರ್ಥರ ವೃಂದಾವನ ಮತ್ತು ಕೋಟೆ ಹೊಳೆ ಆಂಜನೇಯ ದೇವಸ್ಥಾನ ಜಲಾವೃತವಾಗಿವೆ. ಕಂಪ್ಲಿ-ಸಿರುಗುಪ್ಪ ಹೆದ್ದಾರಿಯ ನಾರಿಹಳ್ಳ ಸೇತುವೆ ಮುಳುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಬಾಗಲಕೋಟೆ, ಬೆಳಗಾವಿ ಮತ್ತು ಬಳ್ಳಾರಿ ಜಿಲ್ಲೆಯ ವಿವಿಧೆಡೆ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಕಡೆ ಸೇತುವೆಗಳು ಜಲಾವೃತಗೊಂಡಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಕೆಲ ಕಡೆ ದೇಗುಲಗಳು ಮುಳುಗಡೆಯಾಗಿವೆ. ಗ್ರಾಮಗಳಿಗೂ ನೀರು ಆವರಿಸುವ ಆತಂಕ ಎದುರಾಗಿದೆ.</p>.<p>ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ 8 ಬ್ರಿಜ್ ಕಂ ಬ್ಯಾರೇಜ್ಗಳು ಘಟಪ್ರಭಾ ನದಿ ಪ್ರವಾಹದಿಂದ ಜಲಾವೃತಗೊಂಡಿವೆ. ಪ್ರವಾಹ ಹೆಚ್ಚಾದರೆ, ತಾಲ್ಲೂಕಿನ ಮಿರ್ಜಿ, ಮಳಲಿ, ಒಂಟಗೋಡಿ, ಮಾಚಕನೂರ ಮತ್ತಿತರ ಗ್ರಾಮಗಳಿಗೆ ನೀರು ಆವರಿಸುವ ಭೀತಿ ಎದುರಾಗಿದೆ. </p>.<p>ಮಾಚಕನೂರ ಗ್ರಾಮದ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದೆ. ಭಕ್ತರು ನೀರಿನಲ್ಲೇ ದೇವಸ್ಥಾನದವರೆಗೆ ನಡೆದು, ದೇವರ ದರ್ಶನ ಪಡೆದರು. </p>.<p>ರಾಯಬಾಗ ವರದಿ: ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ-ಭಿರಡಿ ಕೂಡುವ ರಸ್ತೆ ಜಲಾವೃತಗೊಂಡಿದೆ. ರಾಯಬಾಗದ ಕುಡಚಿ–ಉಗಾರ ಸೇತುವೆ ಮುಳುಗಿ ಸಂಚಾರ ಸ್ಥಗಿತಗೊಂಡಿದೆ. ಕುಡಚಿ ಪೋಲೀಸರು ಎರಡೂ ಬದಿ ಬ್ಯಾರಿಕೇಡ್ ಅಳವಡಿಸಿದ್ದಾರೆ.</p>.<p>ಕಂಪ್ಲಿ ವರದಿ: ತುಂಗಭದ್ರಾ ನದಿಗೆ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಮೂರು ದಿನದಿಂದ ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. </p>.<p>ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳಿಂದ ನಿತ್ಯ ಗಂಗಾವತಿಗೆ ತೆರಳುವ ವಿವಿಧ ಶಾಲಾಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ತೆರಳುವ ರೋಗಿಗಳಿಗೆ ಸಮಸ್ಯೆಯಾಗಿದೆ.</p>.<p>ಕೋಟೆ ಗಂಗಮ್ಮನ ಕಟ್ಟೆ, ಕೋಟೆ ಮಾಧವ ತೀರ್ಥರ ವೃಂದಾವನ ಮತ್ತು ಕೋಟೆ ಹೊಳೆ ಆಂಜನೇಯ ದೇವಸ್ಥಾನ ಜಲಾವೃತವಾಗಿವೆ. ಕಂಪ್ಲಿ-ಸಿರುಗುಪ್ಪ ಹೆದ್ದಾರಿಯ ನಾರಿಹಳ್ಳ ಸೇತುವೆ ಮುಳುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>