ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಾನಂದ ಕಾಶಪ್ಪನವರ ನಿವಾಸಕ್ಕೆ ತಡರಾತ್ರಿ ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿ

Last Updated 22 ಆಗಸ್ಟ್ 2021, 2:13 IST
ಅಕ್ಷರ ಗಾತ್ರ

ಬಾಗಲಕೋಟೆ:ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ತಡರಾತ್ರಿ ಇಳಕಲ್ ನಗರದಲ್ಲಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಮನೆಗೆ ಭೇಟಿ ನೀಡಿದ್ದರು.

ಅಲ್ಲಿ ಅಲ್ಪೋಪಹಾರ ಸೇವಿಸಿದ ನಂತರ ಕೆಲಹೊತ್ತು ವಿಜಯಾನಂದ ಅವರೊಂದಿಗೆ ಚರ್ಚಿಸಿದರು. ವಿಜಯಾನಂದ ಪತ್ನಿ ವೀಣಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ವಿಜಯಾನಂದ ಕಾಶಪ್ಪನವರ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ.

ಅದಕ್ಕೂ ಮುನ್ನ ಮುಧೋಳ ತಾಲ್ಲೂಕಿನ ಲೋಕಾಪೂರದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ, ಕೋವಿಡ್‌ನಿಂದ ಇತ್ತೀಚೆಗೆ ಸಾವಿಗೀಡಾದ ಮಹಾಂತೇಶ ಉದಪುಡಿ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT