<p><strong>ಜಮಖಂಡಿ</strong>: ಜಮಖಂಡಿ ಸಮೀಪದ ಬಂಡಿಗಣಿ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಶ್ರೀಗಳು (76) ನಿಧನರಾಗಿದ್ದಾರೆ.</p><p>ಬೆಳಗಾವಿ ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.</p><p>ಮೃತ ಶ್ರೀಗಳು ಮೂಲ ಅಥಣಿ ತಾಲ್ಲೂಕಿನ ಸವದಿ ಗ್ರಾಮದವರು. ತಮ್ಮ 18ನೇ ವಯಸ್ಸಿನಲ್ಲಿ ಬಂಡಿಗಣಿಗೆ ಬಂದು ಬಸವೇಶ್ವರ ಪೂಜೆ ಮಾಡುತ್ತಾ ಅಲ್ಲಿಯೇ ನೆಲೆಸಿದರು.</p><p>ಪಂಢರಪುರ, ತಿರುಪತಿ, ಶ್ರೀಶೈಲ, ಕೊಲ್ಲಾಪುರ ಸೇರಿದಂತೆ ರಾಜ್ಯ ಹಾಗೂ ಅಂತರರಾಜ್ಯದ ಪ್ರಮುಖ ಸ್ಥಳಗಳಲ್ಲಿ ಅನ್ನಪ್ರಸಾದ ಮಾಡುತ್ತಾ ಅನ್ನದಾನೇಶ್ವರ ಎಂಬ ಬಿರುದು ಪಡೆದಿದ್ದರು.</p><p>ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ, ತ್ರಿವಿಧ ದಾಸೋಹ ಪ್ರಶಸ್ತಿ, ಆಪತ್ಭಾಂದವ ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರೆತಿವೆ.</p><p>ಮಠದ ಆವರಣದಲ್ಲಿ ಶನಿವಾರ ಬೆಳಿಗ್ಗೆ 5 ಗಂಟೆಯಿಂದ ಸಂಜೆ 4 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಂಜೆ 5ಕ್ಕೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>ಉತ್ತರಕರ್ನಾಟಕ ಭಾಗದಲ್ಲಿ ಅಪಾರ ಭಕ್ತರನ್ನು ಹೊಂದಿದ್ದು, ಅಂತ್ಯ ಸಂಸ್ಕಾರಕ್ಕೆ ಅಪಾರ ಭಕ್ತರು ಬರುವ ನೀರಿಕ್ಷೆ ಇರುವದರಿಂದ ಪೊಲೀಸ್ ರು ಸೂಕ್ತ ಬಂದೋಬಸ್ತಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: ಜಮಖಂಡಿ ಸಮೀಪದ ಬಂಡಿಗಣಿ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಶ್ರೀಗಳು (76) ನಿಧನರಾಗಿದ್ದಾರೆ.</p><p>ಬೆಳಗಾವಿ ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.</p><p>ಮೃತ ಶ್ರೀಗಳು ಮೂಲ ಅಥಣಿ ತಾಲ್ಲೂಕಿನ ಸವದಿ ಗ್ರಾಮದವರು. ತಮ್ಮ 18ನೇ ವಯಸ್ಸಿನಲ್ಲಿ ಬಂಡಿಗಣಿಗೆ ಬಂದು ಬಸವೇಶ್ವರ ಪೂಜೆ ಮಾಡುತ್ತಾ ಅಲ್ಲಿಯೇ ನೆಲೆಸಿದರು.</p><p>ಪಂಢರಪುರ, ತಿರುಪತಿ, ಶ್ರೀಶೈಲ, ಕೊಲ್ಲಾಪುರ ಸೇರಿದಂತೆ ರಾಜ್ಯ ಹಾಗೂ ಅಂತರರಾಜ್ಯದ ಪ್ರಮುಖ ಸ್ಥಳಗಳಲ್ಲಿ ಅನ್ನಪ್ರಸಾದ ಮಾಡುತ್ತಾ ಅನ್ನದಾನೇಶ್ವರ ಎಂಬ ಬಿರುದು ಪಡೆದಿದ್ದರು.</p><p>ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ, ತ್ರಿವಿಧ ದಾಸೋಹ ಪ್ರಶಸ್ತಿ, ಆಪತ್ಭಾಂದವ ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರೆತಿವೆ.</p><p>ಮಠದ ಆವರಣದಲ್ಲಿ ಶನಿವಾರ ಬೆಳಿಗ್ಗೆ 5 ಗಂಟೆಯಿಂದ ಸಂಜೆ 4 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಂಜೆ 5ಕ್ಕೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p><p>ಉತ್ತರಕರ್ನಾಟಕ ಭಾಗದಲ್ಲಿ ಅಪಾರ ಭಕ್ತರನ್ನು ಹೊಂದಿದ್ದು, ಅಂತ್ಯ ಸಂಸ್ಕಾರಕ್ಕೆ ಅಪಾರ ಭಕ್ತರು ಬರುವ ನೀರಿಕ್ಷೆ ಇರುವದರಿಂದ ಪೊಲೀಸ್ ರು ಸೂಕ್ತ ಬಂದೋಬಸ್ತಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>