<p><strong>ಹುನಗುಂದ</strong>: ‘ಸೆಷನ್ ಟ್ರಯಲ್ ಎನ್ನುವುದು ಕರ್ನಾಟಕದಲ್ಲಿ ಈಗ ಅರ್ಥ ಕಳೆದುಕೊಂಡಿದೆ. ನ್ಯಾಯಾಲಯಗಳಲ್ಲಿ ಇಂದು ತ್ವರಿತವಾಗಿ ಪ್ರಕರಣಗಳು ಇತ್ಯರ್ಥ ಆಗುತ್ತಿಲ್ಲ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಬೇಸರ ವ್ಯಕ್ತಪಡಿಸಿದರು.</p>.<p>ಶನಿವಾರ ಬಿ.ವಿ.ದೇಶಪಾಂಡೆ ಅಸೋಸಿಯೇಟ್ಸ್, ವಕೀಲರ ಸಂಘ, ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಿ.ವಿ.ಚರಂತಿಮಠ ರೂರಲ್ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ವಕೀಲ ಬಿ. ವಿ.ದೇಶಪಾಂಡೆ ಅವರ 15ನೇ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪೊಲೀಸರ ನಿಷ್ಕ್ರಿಯತೆ, ಪ್ರಾಸಿಕ್ಯೂಟರ್ ಇಲ್ಲದಿರುವುದು ಸೇರಿದಂತೆ ಹಲವು ಕಾರಣಗಳಿಂದ ಪ್ರಕರಣಗಳು ನಿಧಾನಗತಿಯಲ್ಲಿ ಇತ್ಯರ್ಥ ಆಗುತ್ತಿವೆ’ ಎಂದರು.</p>.<p>ನಂತರ ಸೆಷನ್ ಟ್ರಯಲ್ ಮತ್ತು ವೈದ್ಯಕೀಯ ನ್ಯಾಯಶಾಸ್ತ್ರ ಕುರಿತು ಅವರು ಉಪನ್ಯಾಸ ನೀಡಿದರು.</p>.<p>ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ ಮಾತನಾಡಿ, ‘ಬಿ. ವಿ.ದೇಶಪಾಂಡೆ ಅವರ ನ್ಯಾಯನಿಷ್ಠೆ, ಮಾನವೀಯತೆ ಇತರಿಗೆ ಮಾದರಿ’ ಎಂದರು.</p>.<p>ವಕೀಲ ವಿ.ಬಿ.ವೆಂಕಟೇಶ ಪ್ರಾಸ್ತಾವಿಕ ಮಾತನಾಡಿದರು.</p>.<p>ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ನ್ಯಾಯಾಲಯದ ನ್ಯಾಯಾಧೀಶ ಜಿ.ಎ.ಮೂಲಿಮನಿ ಹಾಗೂ ಹುನಗುಂದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ದೇಶಪಾಂಡೆ, ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ ಮಾತನಾಡಿದರು.</p>.<p>35ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಹಿರಿಯ ವಕೀಲರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರನ್ನು ಸನ್ಮಾನಿಸಲಾಯಿತು.</p>.<p>ಇಳಕಲ್ ವಕೀಲರ ಸಂಘದ ಅಧ್ಯಕ್ಷ ಎಂ.ಎಸ್.ಹೊಸೂರ, ಕೆ.ವಿ.ಕೆರೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ‘ಸೆಷನ್ ಟ್ರಯಲ್ ಎನ್ನುವುದು ಕರ್ನಾಟಕದಲ್ಲಿ ಈಗ ಅರ್ಥ ಕಳೆದುಕೊಂಡಿದೆ. ನ್ಯಾಯಾಲಯಗಳಲ್ಲಿ ಇಂದು ತ್ವರಿತವಾಗಿ ಪ್ರಕರಣಗಳು ಇತ್ಯರ್ಥ ಆಗುತ್ತಿಲ್ಲ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಬೇಸರ ವ್ಯಕ್ತಪಡಿಸಿದರು.</p>.<p>ಶನಿವಾರ ಬಿ.ವಿ.ದೇಶಪಾಂಡೆ ಅಸೋಸಿಯೇಟ್ಸ್, ವಕೀಲರ ಸಂಘ, ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಿ.ವಿ.ಚರಂತಿಮಠ ರೂರಲ್ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ವಕೀಲ ಬಿ. ವಿ.ದೇಶಪಾಂಡೆ ಅವರ 15ನೇ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪೊಲೀಸರ ನಿಷ್ಕ್ರಿಯತೆ, ಪ್ರಾಸಿಕ್ಯೂಟರ್ ಇಲ್ಲದಿರುವುದು ಸೇರಿದಂತೆ ಹಲವು ಕಾರಣಗಳಿಂದ ಪ್ರಕರಣಗಳು ನಿಧಾನಗತಿಯಲ್ಲಿ ಇತ್ಯರ್ಥ ಆಗುತ್ತಿವೆ’ ಎಂದರು.</p>.<p>ನಂತರ ಸೆಷನ್ ಟ್ರಯಲ್ ಮತ್ತು ವೈದ್ಯಕೀಯ ನ್ಯಾಯಶಾಸ್ತ್ರ ಕುರಿತು ಅವರು ಉಪನ್ಯಾಸ ನೀಡಿದರು.</p>.<p>ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ ಮಾತನಾಡಿ, ‘ಬಿ. ವಿ.ದೇಶಪಾಂಡೆ ಅವರ ನ್ಯಾಯನಿಷ್ಠೆ, ಮಾನವೀಯತೆ ಇತರಿಗೆ ಮಾದರಿ’ ಎಂದರು.</p>.<p>ವಕೀಲ ವಿ.ಬಿ.ವೆಂಕಟೇಶ ಪ್ರಾಸ್ತಾವಿಕ ಮಾತನಾಡಿದರು.</p>.<p>ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ನ್ಯಾಯಾಲಯದ ನ್ಯಾಯಾಧೀಶ ಜಿ.ಎ.ಮೂಲಿಮನಿ ಹಾಗೂ ಹುನಗುಂದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ದೇಶಪಾಂಡೆ, ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ ಮಾತನಾಡಿದರು.</p>.<p>35ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಹಿರಿಯ ವಕೀಲರು ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರನ್ನು ಸನ್ಮಾನಿಸಲಾಯಿತು.</p>.<p>ಇಳಕಲ್ ವಕೀಲರ ಸಂಘದ ಅಧ್ಯಕ್ಷ ಎಂ.ಎಸ್.ಹೊಸೂರ, ಕೆ.ವಿ.ಕೆರೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>