<p><strong>ಬಾಗಲಕೋಟೆ: </strong>ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕೊನೆಯ ದಿನ ಉಸಿರಾಟದ ತೊಂದರೆಗೀಡಾಗಿ ಪರೀಕ್ಷಾ ಕೊಠಡಿಯಿಂದ ಆಸ್ಪತ್ರೆಗೆ ತೆರಳಿದ್ದ ವಿದ್ಯಾರ್ಥಿನಿ ಗಂಗಮ್ಮ ಹುಡೇದ 625ಕ್ಕೆ 625 ಅಂಕ ಪಡೆದಿದ್ದಾರೆ.</p>.<p>ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ ಗ್ರಾಮದ ಬಸವರಾಜ ಹಾಗೂ ಗೀತಾ ದಂಪತಿ ಪುತ್ರಿ ಗಂಗಮ್ಮ ಹುಡೇದ ಅಲ್ಲಿನ ದುರ್ಗಾದೇವಿ ಖಾಸಗಿ ಶಾಲೆಯ ವಿದ್ಯಾರ್ಥಿನಿ.</p>.<p>ಬಸವರಾಜ ಎಲೆಕ್ಟ್ರಿಶಿಯನ್, ಗೀತಾ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅನಾರೋಗ್ಯದ ಮಧ್ಯೆಯೂ ಮಗಳು ಈ ಸಾಧನೆ ಮಾಡಿರುವುದು ಕುಟುಂಬದಲ್ಲಿ ಸಂಭ್ರಮ ಮೂಡಿಸಿದೆ. ಸೋಮವಾರ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಮಗಳಿಗೆ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು. ದುರ್ಗಾದೇವಿ ಶಾಲೆಯ ಶಿಕ್ಷಕರು ಮನೆಗೆ ತೆರಳಿ ಗಂಗಮ್ಮನಿಗೆ ಅಭಿನಂದನೆ ಸಲ್ಲಿಸಿದರು.</p>.<p>'ಪರೀಕ್ಷೆ ದಿನ ಮಗಳಿಗೆ ಅನಾರೋಗ್ಯ ಕಾಡಿತ್ತು. ರಕ್ತದಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆ ಆಗಿತ್ತು. ನಂತರ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದಿದ್ದಳು. ಈಗಲೂ ಪೂರ್ಣ ಗುಣಮುಖಳಾಗಿಲ್ಲ' ಎಂದು ಪೋಷಕರು ತಿಳಿಸಿದರು.</p>.<p>'ದಿನಕ್ಕೆ ಮೂರ್ನಾಲ್ಕು ಗಂಟೆ ಓದುತ್ತಿದ್ದೆನು. ಅಪ್ಪ-ಅಮ್ಮ ಹಾಗೂ ಶಾಲೆಯಲ್ಲಿ ಶಿಕ್ಷಕರು ಹೆಚ್ಚಿನ ಪ್ರೋತ್ಸಾಹ ನೀಡಿದರು. 625 ಅಂಕ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ನಾನು ಚಾರ್ಟರ್ಡ್ ಅಕೌಂಟೆಂಟ್ ಆಗಬೇಕು ಎಂಬುದು ಪೋಷಕರ ಆಶಯ. ಅದನ್ನು ಈಡೇರಿಸಲು ಪ್ರಯತ್ನಿಸುವೆ' ಎಂದು ಗಂಗಮ್ಮ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕೊನೆಯ ದಿನ ಉಸಿರಾಟದ ತೊಂದರೆಗೀಡಾಗಿ ಪರೀಕ್ಷಾ ಕೊಠಡಿಯಿಂದ ಆಸ್ಪತ್ರೆಗೆ ತೆರಳಿದ್ದ ವಿದ್ಯಾರ್ಥಿನಿ ಗಂಗಮ್ಮ ಹುಡೇದ 625ಕ್ಕೆ 625 ಅಂಕ ಪಡೆದಿದ್ದಾರೆ.</p>.<p>ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ ಗ್ರಾಮದ ಬಸವರಾಜ ಹಾಗೂ ಗೀತಾ ದಂಪತಿ ಪುತ್ರಿ ಗಂಗಮ್ಮ ಹುಡೇದ ಅಲ್ಲಿನ ದುರ್ಗಾದೇವಿ ಖಾಸಗಿ ಶಾಲೆಯ ವಿದ್ಯಾರ್ಥಿನಿ.</p>.<p>ಬಸವರಾಜ ಎಲೆಕ್ಟ್ರಿಶಿಯನ್, ಗೀತಾ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅನಾರೋಗ್ಯದ ಮಧ್ಯೆಯೂ ಮಗಳು ಈ ಸಾಧನೆ ಮಾಡಿರುವುದು ಕುಟುಂಬದಲ್ಲಿ ಸಂಭ್ರಮ ಮೂಡಿಸಿದೆ. ಸೋಮವಾರ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಮಗಳಿಗೆ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು. ದುರ್ಗಾದೇವಿ ಶಾಲೆಯ ಶಿಕ್ಷಕರು ಮನೆಗೆ ತೆರಳಿ ಗಂಗಮ್ಮನಿಗೆ ಅಭಿನಂದನೆ ಸಲ್ಲಿಸಿದರು.</p>.<p>'ಪರೀಕ್ಷೆ ದಿನ ಮಗಳಿಗೆ ಅನಾರೋಗ್ಯ ಕಾಡಿತ್ತು. ರಕ್ತದಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆ ಆಗಿತ್ತು. ನಂತರ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದಿದ್ದಳು. ಈಗಲೂ ಪೂರ್ಣ ಗುಣಮುಖಳಾಗಿಲ್ಲ' ಎಂದು ಪೋಷಕರು ತಿಳಿಸಿದರು.</p>.<p>'ದಿನಕ್ಕೆ ಮೂರ್ನಾಲ್ಕು ಗಂಟೆ ಓದುತ್ತಿದ್ದೆನು. ಅಪ್ಪ-ಅಮ್ಮ ಹಾಗೂ ಶಾಲೆಯಲ್ಲಿ ಶಿಕ್ಷಕರು ಹೆಚ್ಚಿನ ಪ್ರೋತ್ಸಾಹ ನೀಡಿದರು. 625 ಅಂಕ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ನಾನು ಚಾರ್ಟರ್ಡ್ ಅಕೌಂಟೆಂಟ್ ಆಗಬೇಕು ಎಂಬುದು ಪೋಷಕರ ಆಶಯ. ಅದನ್ನು ಈಡೇರಿಸಲು ಪ್ರಯತ್ನಿಸುವೆ' ಎಂದು ಗಂಗಮ್ಮ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>