ಬಸವರಾಜ ಎಲೆಕ್ಟ್ರಿಶಿಯನ್, ಗೀತಾ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅನಾರೋಗ್ಯದ ಮಧ್ಯೆಯೂ ಮಗಳು ಈ ಸಾಧನೆ ಮಾಡಿರುವುದು ಕುಟುಂಬದಲ್ಲಿ ಸಂಭ್ರಮ ಮೂಡಿಸಿದೆ. ಸೋಮವಾರ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಮಗಳಿಗೆ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು. ದುರ್ಗಾದೇವಿ ಶಾಲೆಯ ಶಿಕ್ಷಕರು ಮನೆಗೆ ತೆರಳಿ ಗಂಗಮ್ಮನಿಗೆ ಅಭಿನಂದನೆ ಸಲ್ಲಿಸಿದರು.