<p>ಕೆರೂರ: ಪಟ್ಟಣದಲ್ಲಿ ಭಾನುವಾರ ಸಂಜೆ ಆಲಿಕಲ್ಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.</p>.<p>ಕಳೆದ ಒಂದು ವಾರದಿಂದ ಬಿಸಿಲ ಸೆಕೆಯಿಂದ ಬೆಂದಿದ್ದ ಜನರಿಗೆ ಖುಷಿಯಾಯಿತು. ಮಳೆ ರಭಸಕ್ಕೆ ರಸ್ತೆ ಮೇಲೆ ಚರಂಡಿ ನೀರು ತುಂಬಿ ಹರಿದವು.</p>.<p>ಬಿರುಸಿನ ಗಾಳಿ ಬೀಸಿದ ಪರಿಣಾಮ ಯಂಕಂಚಿ, ಮತ್ತಕಟ್ಟಿ ಗ್ರಾಮದ ರಸ್ತೆಗಳಲ್ಲಿ ಗಿಡಗಳು ನೆಲಕ್ಕುರುಳಿ, ವಾಹನ ಸಂಚಾರದಲ್ಲಿ ಕೆಲ ಹೊತ್ತು ತೊಂದರೆ ಉಂಟಾಯಿತು.</p>.<p>ಭಾರಿ ಗಾಳಿ ಹಾಗೂ ಮಳೆಯಿಂದ ಪಟ್ಟಣದಲ್ಲಿ ಕೆಲಕಾಲ ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p>ಹುನಗುಂದ ವರದಿ: ನಗರವು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗು, ಸಿಡಿಲುಗಳ ಆರ್ಭಟದೊಂದಿಗೆ ತುಂತುರು ಮಳೆ ಆಗಿದೆ.</p>.<p>ಮಧ್ಯಾಹ್ನದಿಂದ ಬಿಸಿಲಿನ ತಾಪದ ಜೊತಗೆ ಸೆಕೆಯೂ ಹೆಚ್ಚಾಗಿತ್ತು. ಗಾಳಿ ರಭಸಕ್ಕೆ ಕೆಲವು ಕಡೆ ಮರದ ಟೊಂಗೆಗಳು ನೆಲಕ್ಕುರುಳಿವೆ.</p>.<p>ನಗರದ ಹೊರ ವಲಯದಲ್ಲಿರುವ ಕೈಗಾರಿಕೆ ಪ್ರದೇಶ ಹಾಗೂ ಘಟ್ಟಿಗನೂರು ಗ್ರಾಮಗಳಲ್ಲಿ ತಲಾ ಎರಡು ಕಂಬಗಳು ಧರೆಗೆ ಉರುಳಿವೆ. ಕೆಲವು ಗ್ರಾಮಗಳಲ್ಲಿ ಸುಮಾರು ಎರಡು ಗಂಟೆ ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-199718553</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ಪಟ್ಟಣದಲ್ಲಿ ಭಾನುವಾರ ಸಂಜೆ ಆಲಿಕಲ್ಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.</p>.<p>ಕಳೆದ ಒಂದು ವಾರದಿಂದ ಬಿಸಿಲ ಸೆಕೆಯಿಂದ ಬೆಂದಿದ್ದ ಜನರಿಗೆ ಖುಷಿಯಾಯಿತು. ಮಳೆ ರಭಸಕ್ಕೆ ರಸ್ತೆ ಮೇಲೆ ಚರಂಡಿ ನೀರು ತುಂಬಿ ಹರಿದವು.</p>.<p>ಬಿರುಸಿನ ಗಾಳಿ ಬೀಸಿದ ಪರಿಣಾಮ ಯಂಕಂಚಿ, ಮತ್ತಕಟ್ಟಿ ಗ್ರಾಮದ ರಸ್ತೆಗಳಲ್ಲಿ ಗಿಡಗಳು ನೆಲಕ್ಕುರುಳಿ, ವಾಹನ ಸಂಚಾರದಲ್ಲಿ ಕೆಲ ಹೊತ್ತು ತೊಂದರೆ ಉಂಟಾಯಿತು.</p>.<p>ಭಾರಿ ಗಾಳಿ ಹಾಗೂ ಮಳೆಯಿಂದ ಪಟ್ಟಣದಲ್ಲಿ ಕೆಲಕಾಲ ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p>ಹುನಗುಂದ ವರದಿ: ನಗರವು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗು, ಸಿಡಿಲುಗಳ ಆರ್ಭಟದೊಂದಿಗೆ ತುಂತುರು ಮಳೆ ಆಗಿದೆ.</p>.<p>ಮಧ್ಯಾಹ್ನದಿಂದ ಬಿಸಿಲಿನ ತಾಪದ ಜೊತಗೆ ಸೆಕೆಯೂ ಹೆಚ್ಚಾಗಿತ್ತು. ಗಾಳಿ ರಭಸಕ್ಕೆ ಕೆಲವು ಕಡೆ ಮರದ ಟೊಂಗೆಗಳು ನೆಲಕ್ಕುರುಳಿವೆ.</p>.<p>ನಗರದ ಹೊರ ವಲಯದಲ್ಲಿರುವ ಕೈಗಾರಿಕೆ ಪ್ರದೇಶ ಹಾಗೂ ಘಟ್ಟಿಗನೂರು ಗ್ರಾಮಗಳಲ್ಲಿ ತಲಾ ಎರಡು ಕಂಬಗಳು ಧರೆಗೆ ಉರುಳಿವೆ. ಕೆಲವು ಗ್ರಾಮಗಳಲ್ಲಿ ಸುಮಾರು ಎರಡು ಗಂಟೆ ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-199718553</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>