<p><strong>ಕೆರೂರ:</strong> ಪಟ್ಟಣದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆ, ಗೂಡಂಗಡಿಗಳನ್ನು ಶನಿವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜೆಸಿಬಿ ಯಂತ್ರದಿಂದ ತೆರವುಗೊಳಿಸಿದರು. ಈ ಮೂಲಕ ಬಹುದಿನಗಳಿಂದ ನನೆಗುದಿಗೆ ಬಿದಿದ್ದ ರಸ್ತೆ ವಿಸ್ತರಣೆ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಚಾಲನೆ ನೀಡಿದರು. </p>.<p>ಅಂಬೇಡ್ಕರ್ ವೃತ್ತದಿಂದ ಕೆರೆಗೆ, ಬಸ್ ನಿಲ್ದಾಣದಿಂದ ರಾಚೋಟೇಶ್ವರ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಕೈಗೊಂಡ ಹಿನ್ನೆಲೆಯಲ್ಲಿ ರಸ್ತೆಯ ಎರಡೂ ಬದಿ ಒತ್ತುವರಿ ಮಾಡಿಕೊಂಡ ಕಟ್ಟಡಗಳನ್ನು ತೆರವುಗೊಳಿಸಲಾಯಿತು.</p>.<p>ದಿನೇದಿನೇ ಬೆಳೆಯುತ್ತಿರುವ ಪಟ್ಟಣದಲ್ಲಿ ಸಮರ್ಪಕ ರಸ್ತೆಗಳಿಲ್ಲದ ಕಾರಣ ಜನರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಅದಕ್ಕಾಗಿ ರಸ್ತೆ ವಿಸ್ತರಿಸಲು ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿತು. ಈ ಹಿನ್ನೆಲೆಯಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲಾಯಿತು. ತೆರವು ಕಾರ್ಯಾಚರಣೆ ವೇಳೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ಉಂಟಾಯಿತು. </p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮಾತನಾಡಿ, ಸಾರ್ವಜನಿಕ ಸಂಚಾರಕ್ಕೆ ಸುಸಜ್ಜಿತ ರಸ್ತೆ ನಿರ್ಮಿಸುವ ಸಲುವಾಗಿ ಎರಡು ಮುಖ್ಯ ರಸ್ತೆಗಳ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಪಟ್ಟಣದ ಅಭಿವೃದ್ಧಿಗೆ ಜನರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.</p>.<p>ಮುಂಜಾಗ್ರತಾ ಕ್ರಮವಾಗಿ ಪಿಎಸ್ಐ ಭೀಮಪ್ಪ ರಭಕವಿ ನೇತೃತ್ವದಲ್ಲಿ ಡಿಎಆರ್ ತುಕಡಿಯೊಂದಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು. ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಎಂ.ಐ ಹೊಸಮನಿ, ರಮೇಶ ಕಡ್ಲಿಮಟ್ಟಿ, ಮಾಂತೇಶ ಅಣ್ಣೆನ್ನವರ, ಸಂಗಮೇಶ ಮಾದರ, ಅಶ್ವಥ ರಂಗನಗೌಡ್ರ ಹಾಗೂ ಪೌರಕಾರ್ಮಿಕ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ:</strong> ಪಟ್ಟಣದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆ, ಗೂಡಂಗಡಿಗಳನ್ನು ಶನಿವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜೆಸಿಬಿ ಯಂತ್ರದಿಂದ ತೆರವುಗೊಳಿಸಿದರು. ಈ ಮೂಲಕ ಬಹುದಿನಗಳಿಂದ ನನೆಗುದಿಗೆ ಬಿದಿದ್ದ ರಸ್ತೆ ವಿಸ್ತರಣೆ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಚಾಲನೆ ನೀಡಿದರು. </p>.<p>ಅಂಬೇಡ್ಕರ್ ವೃತ್ತದಿಂದ ಕೆರೆಗೆ, ಬಸ್ ನಿಲ್ದಾಣದಿಂದ ರಾಚೋಟೇಶ್ವರ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಕೈಗೊಂಡ ಹಿನ್ನೆಲೆಯಲ್ಲಿ ರಸ್ತೆಯ ಎರಡೂ ಬದಿ ಒತ್ತುವರಿ ಮಾಡಿಕೊಂಡ ಕಟ್ಟಡಗಳನ್ನು ತೆರವುಗೊಳಿಸಲಾಯಿತು.</p>.<p>ದಿನೇದಿನೇ ಬೆಳೆಯುತ್ತಿರುವ ಪಟ್ಟಣದಲ್ಲಿ ಸಮರ್ಪಕ ರಸ್ತೆಗಳಿಲ್ಲದ ಕಾರಣ ಜನರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಅದಕ್ಕಾಗಿ ರಸ್ತೆ ವಿಸ್ತರಿಸಲು ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿತು. ಈ ಹಿನ್ನೆಲೆಯಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲಾಯಿತು. ತೆರವು ಕಾರ್ಯಾಚರಣೆ ವೇಳೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ಉಂಟಾಯಿತು. </p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮಾತನಾಡಿ, ಸಾರ್ವಜನಿಕ ಸಂಚಾರಕ್ಕೆ ಸುಸಜ್ಜಿತ ರಸ್ತೆ ನಿರ್ಮಿಸುವ ಸಲುವಾಗಿ ಎರಡು ಮುಖ್ಯ ರಸ್ತೆಗಳ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಪಟ್ಟಣದ ಅಭಿವೃದ್ಧಿಗೆ ಜನರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.</p>.<p>ಮುಂಜಾಗ್ರತಾ ಕ್ರಮವಾಗಿ ಪಿಎಸ್ಐ ಭೀಮಪ್ಪ ರಭಕವಿ ನೇತೃತ್ವದಲ್ಲಿ ಡಿಎಆರ್ ತುಕಡಿಯೊಂದಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು. ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಎಂ.ಐ ಹೊಸಮನಿ, ರಮೇಶ ಕಡ್ಲಿಮಟ್ಟಿ, ಮಾಂತೇಶ ಅಣ್ಣೆನ್ನವರ, ಸಂಗಮೇಶ ಮಾದರ, ಅಶ್ವಥ ರಂಗನಗೌಡ್ರ ಹಾಗೂ ಪೌರಕಾರ್ಮಿಕ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>