<p><strong>ಕೆರೂರ</strong>: ಕಳೆದ ಮೂರು–ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಹಾನಿಯಾದ ಪ್ರದೇಶಗಳಿಗೆ ಸೋಮವಾರ ಪಟ್ಟಣ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ವೀಕ್ಷಿಸಿದರು.</p>.<p>ಪಟ್ಟಣದಲ್ಲಿ ನಿರಂತರವಾಗಿ ಸುರಿದ ಮಳೆಗೆ 14 ಮನೆಗಳು ಕುಸಿತಗೊಂಡಿವೆ. ಕೆಲವು ಮನೆಗಳು ಬೀಳುವ ಅಪಾಯದ ಸ್ಥಿತಿಯಲ್ಲಿವೆ. ಇನ್ನುಳಿದ ಕೆಲವು ಮನೆಗಳು ಸೋರುತ್ತಿರುವುದರಿಂದ ದೈನಂದಿನ ಜೀವನ ನಡೆಸಲು ಕುಟುಂಬಗಳು ಪರದಾಡುವಂತಾಗಿದೆ.</p>.<p>ನಿರಂತರ ಮಳೆಯಾಗಿ ಮನೆಗಳು ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೂ ತೊಂದರೆ ಉಂಟಾಗಿದೆ.</p>.<p>ಸ್ಥಳೀಯ ಹೊಸಪೇಟಿ ಬಡಾವಣೆ, ಕಿಲ್ಲಾ ಪೇಟೆ, ಖಾಜಿ ಓಣಿ, ಹಳಪೇಟೆ ಬಡಾವಣೆಗಳಲ್ಲಿ ಹಾನಿಯಾಗಿರುವ ಮನೆಗಳಿಗೆ ಪಟ್ಟಣ ಪಂಚಾಯಿತಿ ಎಂಜಿನಿಯರ್ ಎಂ.ಐ. ಹೊಸಮನಿ, ಉಪತಹಶೀಲ್ದಾರ್ ವೀರೇಶ ಬಡಿಗೇರ, ಕಂದಾಯ ನಿರೀಕ್ಷಕ ಆನಂದ ಭಾವಿಮಠ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ನಮ್ಮದು ನೇಕಾರಿಕೆ ಕುಟುಂಬ. ಬಿಡುವಿಲ್ಲದೆ ಮಳೆ ಸುರಿದಿದ್ದರಿಂದ ಮನೆಯ ಮೆಲ್ಚಾವಣಿ ಕುಸಿದಿದೆ. ಕೈಮಗ್ಗದ ಸಾಮಗ್ರಿಗಳು ಎಲ್ಲವೂ ಹಾನಿಯಾಗಿವೆ. ಬೇರೆ ಏನಾದರು ಮಾಡೋಣ ಅಂದರೆ ಮನೆಯು ಸೋರುತ್ತಿದೆ. ತುಂಬಾ ತೊಂದರೆಯಾಗಿದೆ’ ಎಂದು ಹೇಮಾವತಿ ತಂಬೂರಿ ಅಧಿಕಾರಿಗಳ ಬಳಿ ಅಳಲು ತೋಡಿಕೊಂಡರು.</p>.<p>ಹಾನಿಯಾದ ಪ್ರದೇಶಗಳನ್ನು ಪರಿಶೀಲನೆ ಮಾಡಿದ ಅಧಿಕಾರಿಗಳು, ‘ಮನೆಗಳು ಹಾನಿಯಾದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು, ಸರ್ಕಾರದ ನಿಯಮಾನುಸಾರ ಹಾನಿಯಾದ ಮನೆಗಳಿಗೆ ಪರಿಹಾರ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಇನ್ನೂ ಮಳೆಯಾಗುವ ಸಾಧ್ಯತೆ ಇದ್ದು, ಅಪಾಯದಲ್ಲಿರುವ ಮನೆಗಳ ಕುಟುಂಬಸ್ಥರು ಮುಂಜಾಗ್ರತಾ ಕ್ರಮವಾಗಿ ಬೇರೆ ಕಡೆ ಸ್ಥಳಾಂತರಗೊಳ್ಳಬೇಕು’ ಎಂದು ಅಧಿಕಾರಿಗಳು ಸೂಚಿಸಿದರು.</p>.<p>ಕೆರೂರ ಗ್ರಾಮ ಆಡಳಿತ ಅಧಿಕಾರಿ ಇಕ್ಬಾಲ್ ಮುಲ್ಲಾ, ಗ್ರಾಮ ಸಹಾಯಕ ಪ್ರದೀಪ ತುಳಸಿಗೇರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ</strong>: ಕಳೆದ ಮೂರು–ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಹಾನಿಯಾದ ಪ್ರದೇಶಗಳಿಗೆ ಸೋಮವಾರ ಪಟ್ಟಣ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ವೀಕ್ಷಿಸಿದರು.</p>.<p>ಪಟ್ಟಣದಲ್ಲಿ ನಿರಂತರವಾಗಿ ಸುರಿದ ಮಳೆಗೆ 14 ಮನೆಗಳು ಕುಸಿತಗೊಂಡಿವೆ. ಕೆಲವು ಮನೆಗಳು ಬೀಳುವ ಅಪಾಯದ ಸ್ಥಿತಿಯಲ್ಲಿವೆ. ಇನ್ನುಳಿದ ಕೆಲವು ಮನೆಗಳು ಸೋರುತ್ತಿರುವುದರಿಂದ ದೈನಂದಿನ ಜೀವನ ನಡೆಸಲು ಕುಟುಂಬಗಳು ಪರದಾಡುವಂತಾಗಿದೆ.</p>.<p>ನಿರಂತರ ಮಳೆಯಾಗಿ ಮನೆಗಳು ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೂ ತೊಂದರೆ ಉಂಟಾಗಿದೆ.</p>.<p>ಸ್ಥಳೀಯ ಹೊಸಪೇಟಿ ಬಡಾವಣೆ, ಕಿಲ್ಲಾ ಪೇಟೆ, ಖಾಜಿ ಓಣಿ, ಹಳಪೇಟೆ ಬಡಾವಣೆಗಳಲ್ಲಿ ಹಾನಿಯಾಗಿರುವ ಮನೆಗಳಿಗೆ ಪಟ್ಟಣ ಪಂಚಾಯಿತಿ ಎಂಜಿನಿಯರ್ ಎಂ.ಐ. ಹೊಸಮನಿ, ಉಪತಹಶೀಲ್ದಾರ್ ವೀರೇಶ ಬಡಿಗೇರ, ಕಂದಾಯ ನಿರೀಕ್ಷಕ ಆನಂದ ಭಾವಿಮಠ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ನಮ್ಮದು ನೇಕಾರಿಕೆ ಕುಟುಂಬ. ಬಿಡುವಿಲ್ಲದೆ ಮಳೆ ಸುರಿದಿದ್ದರಿಂದ ಮನೆಯ ಮೆಲ್ಚಾವಣಿ ಕುಸಿದಿದೆ. ಕೈಮಗ್ಗದ ಸಾಮಗ್ರಿಗಳು ಎಲ್ಲವೂ ಹಾನಿಯಾಗಿವೆ. ಬೇರೆ ಏನಾದರು ಮಾಡೋಣ ಅಂದರೆ ಮನೆಯು ಸೋರುತ್ತಿದೆ. ತುಂಬಾ ತೊಂದರೆಯಾಗಿದೆ’ ಎಂದು ಹೇಮಾವತಿ ತಂಬೂರಿ ಅಧಿಕಾರಿಗಳ ಬಳಿ ಅಳಲು ತೋಡಿಕೊಂಡರು.</p>.<p>ಹಾನಿಯಾದ ಪ್ರದೇಶಗಳನ್ನು ಪರಿಶೀಲನೆ ಮಾಡಿದ ಅಧಿಕಾರಿಗಳು, ‘ಮನೆಗಳು ಹಾನಿಯಾದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು, ಸರ್ಕಾರದ ನಿಯಮಾನುಸಾರ ಹಾನಿಯಾದ ಮನೆಗಳಿಗೆ ಪರಿಹಾರ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಇನ್ನೂ ಮಳೆಯಾಗುವ ಸಾಧ್ಯತೆ ಇದ್ದು, ಅಪಾಯದಲ್ಲಿರುವ ಮನೆಗಳ ಕುಟುಂಬಸ್ಥರು ಮುಂಜಾಗ್ರತಾ ಕ್ರಮವಾಗಿ ಬೇರೆ ಕಡೆ ಸ್ಥಳಾಂತರಗೊಳ್ಳಬೇಕು’ ಎಂದು ಅಧಿಕಾರಿಗಳು ಸೂಚಿಸಿದರು.</p>.<p>ಕೆರೂರ ಗ್ರಾಮ ಆಡಳಿತ ಅಧಿಕಾರಿ ಇಕ್ಬಾಲ್ ಮುಲ್ಲಾ, ಗ್ರಾಮ ಸಹಾಯಕ ಪ್ರದೀಪ ತುಳಸಿಗೇರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>