<p><strong>ಕೆರೂರ</strong>: ಚಿಂಚಲಕಟ್ಟಿ ಗ್ರಾಮದ ಮಾಜಿ ಸೈನಿಕ ಹಾಗೂ ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ ಹಣಮಂತ ಸಿದ್ದಪ್ಪ ಮೈಲಾರಿ (38) ಅವರ ಅಂತ್ಯಕ್ರಿಯೆ ಬುಧವಾರ ಸ್ವ- ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.</p>.<p>ಮೃತ ಮಾಜಿ ಸೈನಿಕ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಮಂಗಳವಾರ ಹೃದಯಾಘಾತದಿಂದ ನಿಧನರಾದರು.</p>.<p>ಮೃತರು ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ 4 ವರ್ಷಗಳ ಹಿಂದೆ ಪೋಲೀಸ್ ಇಲಾಖೆ ಸೇರ್ಪಡೆಗೊಂಡು ಸೇವೆ ಸಲ್ಲಿಸುತ್ತಿದ್ದರು,ಮೃತರ ಪಾರ್ಥೀವ ಶರೀರವು ಬೆಂಗಳೂರಿನಿಂದ ಕೆರೂರ ಪಟ್ಟಣಕ್ಕೆ ಬುಧವಾರ ಆಗಮಿಸಿತು.</p>.<p>ಮೃತ ಮಾಜಿ ಸೈನಿಕನ ಪಾರ್ಥೀವ ಶರೀರವನ್ನು ಕಂಡು ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದಣ ಮುಗಿಲು ಮುಟ್ಟಿತು. ಪಟ್ಟಣದ ಎಪಿಎಮ್ ಸಿ ಮಾರುಕಟ್ಟೆಯಿಂದ ಚಿಂಚಲಕಟ್ಟಿ ಗ್ರಾಮದವರೆಗೆ ಪಾರ್ಥೀವ ಮೆರವಣಿಗೆ ನಡೆಯಿತು,ಮೆರವಣಿಗೆಗೂ ಮುನ್ನ ಮಾಜಿ ಸೈನಿಕರ ಸಂಘದವರು ಅಗಲಿದ ಮಾಜಿ ಸೈನಿಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಮೃತರಿಗೆ ಪತ್ನಿ ಮೈನಾವತಿ,ಮಗ ಅಕ್ಷಯ,ಮಗಳು ಅಮೃತಾ ಸೇರಿದಂತೆ ಅಪಾರ ಬಂದುಬಳಗ ಅಗಲಿದ್ದಾರೆ. ಅಂತ್ಯಕ್ರಿಯೆಯಲ್ಲಿ ಮಾಜಿ ಸೈನಿಕರು,ಅಧಿಕಾರಿಗಳು, ಪೋಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ</strong>: ಚಿಂಚಲಕಟ್ಟಿ ಗ್ರಾಮದ ಮಾಜಿ ಸೈನಿಕ ಹಾಗೂ ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ ಹಣಮಂತ ಸಿದ್ದಪ್ಪ ಮೈಲಾರಿ (38) ಅವರ ಅಂತ್ಯಕ್ರಿಯೆ ಬುಧವಾರ ಸ್ವ- ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.</p>.<p>ಮೃತ ಮಾಜಿ ಸೈನಿಕ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಮಂಗಳವಾರ ಹೃದಯಾಘಾತದಿಂದ ನಿಧನರಾದರು.</p>.<p>ಮೃತರು ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ 4 ವರ್ಷಗಳ ಹಿಂದೆ ಪೋಲೀಸ್ ಇಲಾಖೆ ಸೇರ್ಪಡೆಗೊಂಡು ಸೇವೆ ಸಲ್ಲಿಸುತ್ತಿದ್ದರು,ಮೃತರ ಪಾರ್ಥೀವ ಶರೀರವು ಬೆಂಗಳೂರಿನಿಂದ ಕೆರೂರ ಪಟ್ಟಣಕ್ಕೆ ಬುಧವಾರ ಆಗಮಿಸಿತು.</p>.<p>ಮೃತ ಮಾಜಿ ಸೈನಿಕನ ಪಾರ್ಥೀವ ಶರೀರವನ್ನು ಕಂಡು ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದಣ ಮುಗಿಲು ಮುಟ್ಟಿತು. ಪಟ್ಟಣದ ಎಪಿಎಮ್ ಸಿ ಮಾರುಕಟ್ಟೆಯಿಂದ ಚಿಂಚಲಕಟ್ಟಿ ಗ್ರಾಮದವರೆಗೆ ಪಾರ್ಥೀವ ಮೆರವಣಿಗೆ ನಡೆಯಿತು,ಮೆರವಣಿಗೆಗೂ ಮುನ್ನ ಮಾಜಿ ಸೈನಿಕರ ಸಂಘದವರು ಅಗಲಿದ ಮಾಜಿ ಸೈನಿಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಮೃತರಿಗೆ ಪತ್ನಿ ಮೈನಾವತಿ,ಮಗ ಅಕ್ಷಯ,ಮಗಳು ಅಮೃತಾ ಸೇರಿದಂತೆ ಅಪಾರ ಬಂದುಬಳಗ ಅಗಲಿದ್ದಾರೆ. ಅಂತ್ಯಕ್ರಿಯೆಯಲ್ಲಿ ಮಾಜಿ ಸೈನಿಕರು,ಅಧಿಕಾರಿಗಳು, ಪೋಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>