<p><strong>ಬೀಳಗಿ:</strong> ತಾಲ್ಲೂಕಿನ ಬಾಡಗಂಡಿ ಎಸ್.ಆರ್. ಪಾಟೀಲ ಆಸ್ಪತ್ರೆಯಲ್ಲಿ ಗದಗ ಜಿಲ್ಲೆಯ ಸುಮಿತ್ರಾ ಪಟ್ಟಣದ(68) ಅವರ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯು ಡಾ.ರಾಘವೇಂದ್ರ ಬಡಿಗೇರ ನೇತೃತ್ವದ ತಂಡದಿಂದ ಯಶಸ್ವಿಯಾಗಿ ನೆರವೇರಿದೆ ಎಂದು ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಎಸ್. ಆರ್. ಪಾಟೀಲ ಹೇಳಿದರು.</p>.<p>ಬಾಡಗಂಡಿ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಿತ್ರಾ ಅವರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಮಾಡಲಾಗಿದ್ದು, ಇನ್ನು ಮುಂದೆ ಯಶಸ್ವಿನಿ ಕಾರ್ಡ್ ಹೊಂದಿದ ಪ್ರತಿಯೊಬ್ಬರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಯಶಸ್ವಿನಿ ಕಾರ್ಡ್ ಹೊಂದಿರದವರು ಬಡ ರೋಗಿಗಳು ಕೇವಲ ₹1.30 ಲಕ್ಷ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಎಸ್. ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎನ್. ಪಾಟೀಲ ಮಾತನಾಡಿ, ‘ಈಗಾಗಲೇ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯವಿದ್ದು, ವಾರದೊಳಗಾಗಿ ಎಂಆರ್ಐ ಸ್ಕ್ಯಾನ್ ಪ್ರಾರಂಭವಾಗಲಿದೆ’ ಎಂದು ಹೇಳಿದರು.</p>.<p>ಮಹಾವಿದ್ಯಾಲಯದ ಡೀನ್ ಧರ್ಮರಾಯ ಇಂಗಳೆ ಮಾತನಾಡಿ, ‘ಸೆ.21ರಂದು ತಾಲ್ಲೂಕಿನ ಸುನಗ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಶಿಬಿರದಲ್ಲಿ ಬಿಪಿ, ಶುಗರ್, ಕಿವಿ, ಮೂಗು, ಗಂಟಲು ಹಾಗೂ ಚಿಕ್ಕಮಕ್ಕಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. </p>.<p>ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ವಿಜಯಾನಂದ ಹಳ್ಳಿ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ,ರಾಘವೇಂದ್ರ ಬಡಿಗೇರ, ಅಶೋಕ ದಾದಮಿ, ಗೌರ್ನಿಂಗ್ ಕೌನ್ಸಿಲ್ನ ಸದಸ್ಯೆ ಅನುಷಾ ನಾಡಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ:</strong> ತಾಲ್ಲೂಕಿನ ಬಾಡಗಂಡಿ ಎಸ್.ಆರ್. ಪಾಟೀಲ ಆಸ್ಪತ್ರೆಯಲ್ಲಿ ಗದಗ ಜಿಲ್ಲೆಯ ಸುಮಿತ್ರಾ ಪಟ್ಟಣದ(68) ಅವರ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯು ಡಾ.ರಾಘವೇಂದ್ರ ಬಡಿಗೇರ ನೇತೃತ್ವದ ತಂಡದಿಂದ ಯಶಸ್ವಿಯಾಗಿ ನೆರವೇರಿದೆ ಎಂದು ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಎಸ್. ಆರ್. ಪಾಟೀಲ ಹೇಳಿದರು.</p>.<p>ಬಾಡಗಂಡಿ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಿತ್ರಾ ಅವರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಮಾಡಲಾಗಿದ್ದು, ಇನ್ನು ಮುಂದೆ ಯಶಸ್ವಿನಿ ಕಾರ್ಡ್ ಹೊಂದಿದ ಪ್ರತಿಯೊಬ್ಬರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಯಶಸ್ವಿನಿ ಕಾರ್ಡ್ ಹೊಂದಿರದವರು ಬಡ ರೋಗಿಗಳು ಕೇವಲ ₹1.30 ಲಕ್ಷ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಎಸ್. ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎನ್. ಪಾಟೀಲ ಮಾತನಾಡಿ, ‘ಈಗಾಗಲೇ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯವಿದ್ದು, ವಾರದೊಳಗಾಗಿ ಎಂಆರ್ಐ ಸ್ಕ್ಯಾನ್ ಪ್ರಾರಂಭವಾಗಲಿದೆ’ ಎಂದು ಹೇಳಿದರು.</p>.<p>ಮಹಾವಿದ್ಯಾಲಯದ ಡೀನ್ ಧರ್ಮರಾಯ ಇಂಗಳೆ ಮಾತನಾಡಿ, ‘ಸೆ.21ರಂದು ತಾಲ್ಲೂಕಿನ ಸುನಗ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಶಿಬಿರದಲ್ಲಿ ಬಿಪಿ, ಶುಗರ್, ಕಿವಿ, ಮೂಗು, ಗಂಟಲು ಹಾಗೂ ಚಿಕ್ಕಮಕ್ಕಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. </p>.<p>ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ವಿಜಯಾನಂದ ಹಳ್ಳಿ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ,ರಾಘವೇಂದ್ರ ಬಡಿಗೇರ, ಅಶೋಕ ದಾದಮಿ, ಗೌರ್ನಿಂಗ್ ಕೌನ್ಸಿಲ್ನ ಸದಸ್ಯೆ ಅನುಷಾ ನಾಡಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>