<p><strong>ಕೊಲ್ಹಾರ</strong>: ಬಂಕ್ಗಳಲ್ಲಿ ಪೆಟ್ರೋಲ್-ಡೀಸೆಲ್ ಸಂಗ್ರಹ ಇದ್ದರೂ ಸಾರ್ವಜನಿಕರಿಗೆ ವಿತರಿಸದೆ ತೊಂದರೆ ನೀಡುತ್ತಿರುವ ಮಾಲೀಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಬುಧವಾರ ಆಕ್ರೋಶ ಹೊರಹಾಕಿದರು.</p>.<p>‘ತಾಲ್ಲೂಕಿನಲ್ಲಿ ಕೆಲವು ಬಂಕ್ಗಳಲ್ಲಿ ಇಂಥ ತೊಂದರೆ ಆಗುತ್ತಿದೆ. ಸಾಕಷ್ಟು ವಾಹನಗಳು ಇಂಧನ ಕಾಲಿಯಾಗಿ ರಸ್ತೆಯಲ್ಲೇ ನಿಲ್ಲುತ್ತಿವೆ’ ಎಂದು ದೂರಿದ್ದಾರೆ.</p>.<p>ಬಂಕ್ಗಳ ಮುಂದೆ ಗ್ರಾಹಕರು ಸಾಲಿನಲ್ಲಿ ನಿಲ್ಲುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ಕ್ಯಾನ್ಗಳಲ್ಲೂ ತುಂಬಿಸಿಕೊಂಡು ಹೋಗುತ್ತಿರುವುದು ಕಂಡುಬಂತು.</p>.<p>‘ಸತ್ಯವರ್ಧನ ಕಿಸಾನ್ ಸೇವಾ ಕೇಂದ್ರ ಇಂಡಿಯನ್ ಪೆಟ್ರೋಲ್ ಬಂಕ್ನಲ್ಲಿ ಇಂಧನ ದಾಸ್ತಾನು ಇದ್ದರೂ ಇಲ್ಲ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ. ಸಾರ್ವಜನಿಕರು ಗಲಾಟೆ ಮಾಡಿದ ಬಳಿಕ ಪೊಲೀಸರು ಬಂದು ವಿಚಾರಣೆ ನಡೆಸಿದ್ದಾರೆ. ಆಗ ಇಂಧನ ಇರುವುದು ತಿಳಿದುಬಂದಿದೆ. ಬಳಿಕ ವಾಹನಗಳಿಗೆ ಇಂಧನ ಭರಿಸಲು ಸೂಚಿಸಿದ್ದಾರೆ’ ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ ಆರೋಪಿಸಿದ್ದಾರೆ.</p>.<p>‘ಪಟ್ಟಣ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 52ಕ್ಕೆ ಹೊಂದಿಕೊಂಡಿರುವ ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಇದ್ದರೂ ಸುಳ್ಳು ಹೇಳುತ್ತಿರುವ ಬಂಕ್ ಮಾಲೀಕರು ಆತಂಕ ಸೃಷ್ಟಿಸುತ್ತಿದ್ದಾರೆ’ ಎಂದು ಪುಂಡಲೀಕ ಬಾಟಿ ಆಕ್ರೋಶ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-26-1070175260</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ಬಂಕ್ಗಳಲ್ಲಿ ಪೆಟ್ರೋಲ್-ಡೀಸೆಲ್ ಸಂಗ್ರಹ ಇದ್ದರೂ ಸಾರ್ವಜನಿಕರಿಗೆ ವಿತರಿಸದೆ ತೊಂದರೆ ನೀಡುತ್ತಿರುವ ಮಾಲೀಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಬುಧವಾರ ಆಕ್ರೋಶ ಹೊರಹಾಕಿದರು.</p>.<p>‘ತಾಲ್ಲೂಕಿನಲ್ಲಿ ಕೆಲವು ಬಂಕ್ಗಳಲ್ಲಿ ಇಂಥ ತೊಂದರೆ ಆಗುತ್ತಿದೆ. ಸಾಕಷ್ಟು ವಾಹನಗಳು ಇಂಧನ ಕಾಲಿಯಾಗಿ ರಸ್ತೆಯಲ್ಲೇ ನಿಲ್ಲುತ್ತಿವೆ’ ಎಂದು ದೂರಿದ್ದಾರೆ.</p>.<p>ಬಂಕ್ಗಳ ಮುಂದೆ ಗ್ರಾಹಕರು ಸಾಲಿನಲ್ಲಿ ನಿಲ್ಲುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ಕ್ಯಾನ್ಗಳಲ್ಲೂ ತುಂಬಿಸಿಕೊಂಡು ಹೋಗುತ್ತಿರುವುದು ಕಂಡುಬಂತು.</p>.<p>‘ಸತ್ಯವರ್ಧನ ಕಿಸಾನ್ ಸೇವಾ ಕೇಂದ್ರ ಇಂಡಿಯನ್ ಪೆಟ್ರೋಲ್ ಬಂಕ್ನಲ್ಲಿ ಇಂಧನ ದಾಸ್ತಾನು ಇದ್ದರೂ ಇಲ್ಲ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ. ಸಾರ್ವಜನಿಕರು ಗಲಾಟೆ ಮಾಡಿದ ಬಳಿಕ ಪೊಲೀಸರು ಬಂದು ವಿಚಾರಣೆ ನಡೆಸಿದ್ದಾರೆ. ಆಗ ಇಂಧನ ಇರುವುದು ತಿಳಿದುಬಂದಿದೆ. ಬಳಿಕ ವಾಹನಗಳಿಗೆ ಇಂಧನ ಭರಿಸಲು ಸೂಚಿಸಿದ್ದಾರೆ’ ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ ಆರೋಪಿಸಿದ್ದಾರೆ.</p>.<p>‘ಪಟ್ಟಣ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 52ಕ್ಕೆ ಹೊಂದಿಕೊಂಡಿರುವ ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಇದ್ದರೂ ಸುಳ್ಳು ಹೇಳುತ್ತಿರುವ ಬಂಕ್ ಮಾಲೀಕರು ಆತಂಕ ಸೃಷ್ಟಿಸುತ್ತಿದ್ದಾರೆ’ ಎಂದು ಪುಂಡಲೀಕ ಬಾಟಿ ಆಕ್ರೋಶ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-26-1070175260</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>