<figcaption>""</figcaption>.<p><strong>ಬಾಗಲಕೋಟೆ:</strong> ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ವಾಯವ್ಯ ಕರ್ನಾಟಕ ರಸ್ತೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.</p>.<p>ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಖಂಡಿ ತಾಲ್ಲೂಕಿನ ಗೋಠೆ ಹಾಗೂ ಕಾಜಿ ಬೀಳಗಿ ಗ್ರಾಮದ ಹಣಮಂತ (21), ರಿಯಾಜ್ (25), ಬಾಲಪ್ಪ (34) ಹಾಗೂ ಸಿದ್ದರಾಯ (34) ಮೃತಪಟ್ಟವರು. ಎಲ್ಲರೂ ಕಾಜಿ ಬೀಳಗಿಯಿಂದ ಧಾರವಾಡಕ್ಕೆ ಹೊರಟಿದ್ದರು. ಬಸ್ ಬೆಳಗಾವಿಯಿಂದ ಮುಧೋಳ ಮಾರ್ಗವಾಗಿ ಕಲಬುರ್ಗಿಗೆ ಹೊರಟಿತ್ತು.</p>.<p>ಕಬ್ಬುಸಾಗಣೆ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ಕಾರು ಎದುರಿಗೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div style="text-align:center"><figcaption><em><strong>ಅಪಘಾತದ ರಭಸಕ್ಕೆ ನಜ್ಜುಗುಜ್ಜಾಗಿರುವ ಕಾರು</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬಾಗಲಕೋಟೆ:</strong> ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ವಾಯವ್ಯ ಕರ್ನಾಟಕ ರಸ್ತೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.</p>.<p>ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಖಂಡಿ ತಾಲ್ಲೂಕಿನ ಗೋಠೆ ಹಾಗೂ ಕಾಜಿ ಬೀಳಗಿ ಗ್ರಾಮದ ಹಣಮಂತ (21), ರಿಯಾಜ್ (25), ಬಾಲಪ್ಪ (34) ಹಾಗೂ ಸಿದ್ದರಾಯ (34) ಮೃತಪಟ್ಟವರು. ಎಲ್ಲರೂ ಕಾಜಿ ಬೀಳಗಿಯಿಂದ ಧಾರವಾಡಕ್ಕೆ ಹೊರಟಿದ್ದರು. ಬಸ್ ಬೆಳಗಾವಿಯಿಂದ ಮುಧೋಳ ಮಾರ್ಗವಾಗಿ ಕಲಬುರ್ಗಿಗೆ ಹೊರಟಿತ್ತು.</p>.<p>ಕಬ್ಬುಸಾಗಣೆ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ಕಾರು ಎದುರಿಗೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div style="text-align:center"><figcaption><em><strong>ಅಪಘಾತದ ರಭಸಕ್ಕೆ ನಜ್ಜುಗುಜ್ಜಾಗಿರುವ ಕಾರು</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>