<p><strong>ಬಾಗಲಕೋಟೆ</strong>: ವಿವಿಧ ರೈಲುಗಳ ಮಾರ್ಗ ವಿಸ್ತರಣೆ, ಹೊಸ ಮಾರ್ಗಗಳ ನಿರ್ಮಾಣ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ಮನವಿ ಸಲ್ಲಿಸಿದ್ದಾರೆ.</p>.<p>ಕುಡಚಿ-ಬಾಗಲಕೋಟೆ ರೈಲು ಮಾರ್ಗವನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಬಸವ ಎಕ್ಸ್ಪ್ರೆಸ್ ಅನ್ನು ಲೋಕಾಪುರದವರೆಗೆ ವಿಸ್ತರಿಸಿ, ವ್ಯಾಪಾರ ಅಭಿವೃದ್ಧಿ, ಹತ್ತಿರದ ಪ್ರದೇಶಗಳ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು. ಈ ಪ್ರದೇಶದಲ್ಲಿ ಸಕ್ಕರೆ ಹಾಗೂ ಸಿಮೆಂಟ್ ಕೈಗಾರಿಕೆಗಳಿದ್ದು, ಅವುಗಳ ಸರಕು ಸಾಗಣೆಗೆ ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ.</p>.<p>ವಿಜಯಪುರ-ತಿರುಪತಿ ದೈನಂದಿನ ಎಕ್ಸ್ಪ್ರೆಸ್ ರೈಲು ಆರಂಭಿಸಬೇಕು ಆ ಮೂಲಕ ವಿಜಯಪುರ, ಬಾಗಲಕೋಟೆ ಜಿಲ್ಲೆಯ ಲಕ್ಷಾಂತರ ಜನರ ಆಧ್ಯಾತ್ಮಿಕ ಕೇಂದ್ರಕ್ಕೆ ಭೇಟಿ ನೀಡಲು ಅನುಕೂಲ ಕಲ್ಪಿಸಬೇಕು ಎಂದು ಕೋರಿದರು.</p>.<p>ಪ್ರಸ್ತಾವಿತ ಲೋಕಾಪುರ-ಧಾರವಾಡ ಮಾರ್ಗಕ್ಕೆ ಅನುಮೋದನೆ ನೀಡಬೇಕು. ಮುಂಬರುವ ರೈಲ್ವೆ ಬಜೆಟ್ನಲ್ಲಿ ಸೇರಿಸಬೇಕು. ಪಂಢರಪುರ -ಬೆಂಗಳೂರು ಗೋಲ್ಗುಂಬಜ್ ಎಕ್ಸ್ಪ್ರೆಸ್ ರೈಲಿನ ವೇಗ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.</p>.<p>ಹುಬ್ಬಳ್ಳಿ-ಹಜರತ್ ನಿಜಾಮುದ್ದೀನ್ ರೈಲಿನ ವೇಗ ಹೆಚ್ಚಿಸಬೇಕು. ವಾರದಲ್ಲಿ ಐದು ದಿನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಈ ಸೇವೆಗಳು ಪ್ರಾದೇಶಿಕ ಅಭಿವೃದ್ಧಿ ವೇಗವನ್ನು ಹೆಚ್ಚಿಸುತ್ತವೆ. ಅಸ್ತಿತ್ವದಲ್ಲಿರುವ ಮಾರ್ಗಗಳ ಸಂಚಾರ ದಟ್ಟಣೆ ಕಡಿಮೆ ಮಾಡುತ್ತವೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವಿವಿಧ ರೈಲುಗಳ ಮಾರ್ಗ ವಿಸ್ತರಣೆ, ಹೊಸ ಮಾರ್ಗಗಳ ನಿರ್ಮಾಣ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ಮನವಿ ಸಲ್ಲಿಸಿದ್ದಾರೆ.</p>.<p>ಕುಡಚಿ-ಬಾಗಲಕೋಟೆ ರೈಲು ಮಾರ್ಗವನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಬಸವ ಎಕ್ಸ್ಪ್ರೆಸ್ ಅನ್ನು ಲೋಕಾಪುರದವರೆಗೆ ವಿಸ್ತರಿಸಿ, ವ್ಯಾಪಾರ ಅಭಿವೃದ್ಧಿ, ಹತ್ತಿರದ ಪ್ರದೇಶಗಳ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು. ಈ ಪ್ರದೇಶದಲ್ಲಿ ಸಕ್ಕರೆ ಹಾಗೂ ಸಿಮೆಂಟ್ ಕೈಗಾರಿಕೆಗಳಿದ್ದು, ಅವುಗಳ ಸರಕು ಸಾಗಣೆಗೆ ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ.</p>.<p>ವಿಜಯಪುರ-ತಿರುಪತಿ ದೈನಂದಿನ ಎಕ್ಸ್ಪ್ರೆಸ್ ರೈಲು ಆರಂಭಿಸಬೇಕು ಆ ಮೂಲಕ ವಿಜಯಪುರ, ಬಾಗಲಕೋಟೆ ಜಿಲ್ಲೆಯ ಲಕ್ಷಾಂತರ ಜನರ ಆಧ್ಯಾತ್ಮಿಕ ಕೇಂದ್ರಕ್ಕೆ ಭೇಟಿ ನೀಡಲು ಅನುಕೂಲ ಕಲ್ಪಿಸಬೇಕು ಎಂದು ಕೋರಿದರು.</p>.<p>ಪ್ರಸ್ತಾವಿತ ಲೋಕಾಪುರ-ಧಾರವಾಡ ಮಾರ್ಗಕ್ಕೆ ಅನುಮೋದನೆ ನೀಡಬೇಕು. ಮುಂಬರುವ ರೈಲ್ವೆ ಬಜೆಟ್ನಲ್ಲಿ ಸೇರಿಸಬೇಕು. ಪಂಢರಪುರ -ಬೆಂಗಳೂರು ಗೋಲ್ಗುಂಬಜ್ ಎಕ್ಸ್ಪ್ರೆಸ್ ರೈಲಿನ ವೇಗ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.</p>.<p>ಹುಬ್ಬಳ್ಳಿ-ಹಜರತ್ ನಿಜಾಮುದ್ದೀನ್ ರೈಲಿನ ವೇಗ ಹೆಚ್ಚಿಸಬೇಕು. ವಾರದಲ್ಲಿ ಐದು ದಿನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಈ ಸೇವೆಗಳು ಪ್ರಾದೇಶಿಕ ಅಭಿವೃದ್ಧಿ ವೇಗವನ್ನು ಹೆಚ್ಚಿಸುತ್ತವೆ. ಅಸ್ತಿತ್ವದಲ್ಲಿರುವ ಮಾರ್ಗಗಳ ಸಂಚಾರ ದಟ್ಟಣೆ ಕಡಿಮೆ ಮಾಡುತ್ತವೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>