<p><strong>ಬಾಗಲಕೋಟೆ:</strong> ’ಬಜೆಟ್ ಅಧಿವೇಶನದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸುವುದಾಗಿ ಸರ್ಕಾರ ಹೇಳಿತ್ತು. ಈಗ ಮಾತು ತಪ್ಪಿದೆ. ಹೀಗಾಗಿ ಗುರುವಾರದಿಂದ ಅನಿರ್ದಿಷ್ಟ ಅವಧಿಗೆ ಧರಣಿ ಸತ್ಯಾಗ್ರಹ ಅರಂಭಿಸಿದ್ದೇನೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಕೂಡಲಸಂಗಮದ ಐಕ್ಯಮಂಟಪದ ಎದುರು ಧರಣಿ ಆರಂಭಿಸಿರುವ ಅವರು, ಅದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ಡಿಸೆಂಬರ್ 12ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆದ ಸಮಾಜದ ಶಾಸಕರು ಹಾಗೂ ಸಚಿವರ ದುಂಡು ಮೇಜಿನ ಸಭೆಯಲ್ಲಿ ಮೀಸಲಾತಿ ಕೊಡುವುದಾಗಿ ಬಸವರಾಜ ಬೊಮ್ಮಾಯಿ ಮಾತು ಕೊಟ್ಟಿದ್ದರು. ಅದನ್ನು ತಪ್ಪಿದ್ದಾರೆ. ಅಲ್ಲಿಯೇ ಘೋಷಿಸಿದ್ದಂತೆ ಇಂದು ಹೋರಾಟ ಆರಂಭಿಸಿದ್ದೇನೆ ಎಂದರು.</p>.<p>ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು. ಆಯಾ ತಾಲ್ಲೂಕು ಕೇಂದ್ರದಲ್ಲಿ ಸಮಾಜದವರು ಧರಣಿ ಸತ್ಯಾಗ್ರಹ ಅರಂಭಿಸಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.</p>.<p>ಬಸವರಾಜ ಬೊಮ್ಮಾಯಿ ಅವರ ಮೇಲೆ ಬಹಳಷ್ಟು ನಂಬಿಕೆ ಇಟ್ಟಿದ್ದೆವು. ಇನ್ನೂ ಅವರ ಮೇಲೆ ವಿಶ್ವಾಸವಿದೆ. ಶಿಗ್ಗಾವಿಯಲ್ಲಿ ಅವರು ಮೂರು ಬಾರಿ ಶಾಸಕರಾಗಲು ಪಂಚಮಸಾಲಿ ಸಮಾಜದ ಪ್ರೀತಿಯೂ ಕಾರಣವಾಗಿದೆ. ಆದರೆ ವಿಳಂಬ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದರು.</p>.<p>ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡದಂತೆ ಯಾರಾದರೂ ಒತ್ತಡ ಹಾಕಿದ್ದಾರೆಯೇ? ಅದರಿಂದ ಅವರಿಗೆ ರಾಜಕೀಯವಾಗಿ ಹಿನ್ನಡೆ ಆಗಲಿದೆಯೇ? ಎಂಬುದನ್ನು ಬಸವರಾಜ ಬೊಮ್ಮಾಯಿ ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.</p>.<p>ಸಂಗಮನಾಥ ದೇವಾಲಯದ ಮುಖ್ಯಸ್ಥರು ಸ್ವತಃ ಮುಖ್ಯಮಂತ್ರಿ ಆಗಿರುವುದರಿಂದ ಅವರ ಗಮನ ಸೆಳೆಯಲು ಅಲ್ಲಿಯೇ ಧರಣಿ ನಡೆಸುತ್ತಿರುವುದಾಗಿ ಸ್ವಾಮೀಜಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ’ಬಜೆಟ್ ಅಧಿವೇಶನದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸುವುದಾಗಿ ಸರ್ಕಾರ ಹೇಳಿತ್ತು. ಈಗ ಮಾತು ತಪ್ಪಿದೆ. ಹೀಗಾಗಿ ಗುರುವಾರದಿಂದ ಅನಿರ್ದಿಷ್ಟ ಅವಧಿಗೆ ಧರಣಿ ಸತ್ಯಾಗ್ರಹ ಅರಂಭಿಸಿದ್ದೇನೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಕೂಡಲಸಂಗಮದ ಐಕ್ಯಮಂಟಪದ ಎದುರು ಧರಣಿ ಆರಂಭಿಸಿರುವ ಅವರು, ಅದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ಡಿಸೆಂಬರ್ 12ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಡೆದ ಸಮಾಜದ ಶಾಸಕರು ಹಾಗೂ ಸಚಿವರ ದುಂಡು ಮೇಜಿನ ಸಭೆಯಲ್ಲಿ ಮೀಸಲಾತಿ ಕೊಡುವುದಾಗಿ ಬಸವರಾಜ ಬೊಮ್ಮಾಯಿ ಮಾತು ಕೊಟ್ಟಿದ್ದರು. ಅದನ್ನು ತಪ್ಪಿದ್ದಾರೆ. ಅಲ್ಲಿಯೇ ಘೋಷಿಸಿದ್ದಂತೆ ಇಂದು ಹೋರಾಟ ಆರಂಭಿಸಿದ್ದೇನೆ ಎಂದರು.</p>.<p>ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು. ಆಯಾ ತಾಲ್ಲೂಕು ಕೇಂದ್ರದಲ್ಲಿ ಸಮಾಜದವರು ಧರಣಿ ಸತ್ಯಾಗ್ರಹ ಅರಂಭಿಸಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.</p>.<p>ಬಸವರಾಜ ಬೊಮ್ಮಾಯಿ ಅವರ ಮೇಲೆ ಬಹಳಷ್ಟು ನಂಬಿಕೆ ಇಟ್ಟಿದ್ದೆವು. ಇನ್ನೂ ಅವರ ಮೇಲೆ ವಿಶ್ವಾಸವಿದೆ. ಶಿಗ್ಗಾವಿಯಲ್ಲಿ ಅವರು ಮೂರು ಬಾರಿ ಶಾಸಕರಾಗಲು ಪಂಚಮಸಾಲಿ ಸಮಾಜದ ಪ್ರೀತಿಯೂ ಕಾರಣವಾಗಿದೆ. ಆದರೆ ವಿಳಂಬ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದರು.</p>.<p>ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡದಂತೆ ಯಾರಾದರೂ ಒತ್ತಡ ಹಾಕಿದ್ದಾರೆಯೇ? ಅದರಿಂದ ಅವರಿಗೆ ರಾಜಕೀಯವಾಗಿ ಹಿನ್ನಡೆ ಆಗಲಿದೆಯೇ? ಎಂಬುದನ್ನು ಬಸವರಾಜ ಬೊಮ್ಮಾಯಿ ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.</p>.<p>ಸಂಗಮನಾಥ ದೇವಾಲಯದ ಮುಖ್ಯಸ್ಥರು ಸ್ವತಃ ಮುಖ್ಯಮಂತ್ರಿ ಆಗಿರುವುದರಿಂದ ಅವರ ಗಮನ ಸೆಳೆಯಲು ಅಲ್ಲಿಯೇ ಧರಣಿ ನಡೆಸುತ್ತಿರುವುದಾಗಿ ಸ್ವಾಮೀಜಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>