<p><strong>ಕೂಡಲಸಂಗಮ</strong> : ಸುಂದರ ಬದುಕಿಗೆ ಶಿಕ್ಷಣ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ, ಸಂಸ್ಕಾರ ಪಡೆಯುವುದರ ಮೂಲಕ ಸುಂದರ ಬದುಕು ನಿರ್ಮಿಸಿಕೊಳ್ಳಬೇಕು ಎಂದು ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಎಸ್.ಆರ್.ಮನಹಳ್ಳಿ ಹೇಳಿದರು.</p>.<p>ಸೋಮವಾರ ಕೂಡಲಸಂಗಮದ ಸಂಗಮೇಶ್ವರ ಪದವಿ ಪೂರ್ವ ಕಾಲೇಜುನಲ್ಲಿ ನಡೆದ ಬೀಳೂರು ಗುರುಬಸವ ಸ್ವಾಮೀಜಿಯವರ ಶ್ರಾವಣ ಮಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬೀಳೂರು ಗುರುಬಸವ ಸ್ವಾಮೀಜಿ ಉತ್ಸವ ಸಮಿತಿ ಸದಸ್ಯ ಗಂಗಾಧರ ನರೆಗಲ್ಲ ಮುಖ್ಯ ಅತಿಥಿಯಾಗಿದ್ದರು. ಸಂಸ್ಕೃತ ಪಾಠ ಶಾಲೆಯಿಂದ ಆರಂಭವಾದ ಬಸವೇಶ್ವರ ವಿದ್ಯಾವರ್ಧಕ ಸಂಘ ಇಂದು ಶಿಕ್ಷಣ ಕ್ಷೇತ್ರದ ಎಲ್ಲ ಕೋರ್ಸಗಳನ್ನು ಹೊಂದಿದೆ. 170 ಅಂಗಸಂಸ್ಥೆಗಳನ್ನು ರಾಜ್ಯದಾದ್ಯಂತ ಹೊಂದಿದ್ದು, ಪ್ರತಿ ವರ್ಷ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅಧ್ಯಯನ ಮಾಡುವರು 6 ರಿಂದ 7ಸಾವಿರ ಶಿಕ್ಷಕರು ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೀರಣ್ಣ ಚರಂತಿಮಠ ಅವರ ಶಿಸ್ತುಬದ್ದ ಆಡಳಿತದಿಂದ ಬಸವೇಶ್ವರ ವಿದ್ಯಾವರ್ಧಕ ಸಂಘ ಹೆಮ್ಮರವಾಗಿ ಬೆಳೆದಿದೆ. ರಾಜ್ಯದಲ್ಲಿಯೇ ಹೆಸರು ಪಡೆದ ಸಂಘ ಇದಾಗಿದ್ದು, ಶತಮಾನೋತ್ಸವವನ್ನು ಆಚರಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದೆ ಎಂದರು.</p>.<p>ಬಸವೇಶ್ವರ ವಿದ್ಯಾವರ್ಧಕ ಸಂಘದ ಅಕ್ಷರ ದಾಸೋಹ ವ್ಯವಸ್ಥಾಪಕ ಎಸ್.ಎಸ್.ಹುದ್ದಾರ, ನಿವೃತ್ತ ಮುಖ್ಯೋಪಾಧ್ಯಾಯ ಡಿ.ವಿ.ಶಿಕ್ಕೇರಿ, ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಿ.ಆರ್.ಚೌಗಲೆ, ಸಂಗಮೇಶ್ವರ ಪ್ರೌಢ ಶಾಲೆಯ ಮುಖ್ಯಗುರು ಎ.ವಾಯ್.ಕೊಪ್ಪದ, ಸಂಗಮೇಶ್ವರ ಪ್ರಾಥಮಿಕ ಶಾಲೆಯ ಮುಖ್ಯಗುರು ಜಿ.ಬಿ.ಬಡಿಗೇರ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ</strong> : ಸುಂದರ ಬದುಕಿಗೆ ಶಿಕ್ಷಣ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣ, ಸಂಸ್ಕಾರ ಪಡೆಯುವುದರ ಮೂಲಕ ಸುಂದರ ಬದುಕು ನಿರ್ಮಿಸಿಕೊಳ್ಳಬೇಕು ಎಂದು ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಎಸ್.ಆರ್.ಮನಹಳ್ಳಿ ಹೇಳಿದರು.</p>.<p>ಸೋಮವಾರ ಕೂಡಲಸಂಗಮದ ಸಂಗಮೇಶ್ವರ ಪದವಿ ಪೂರ್ವ ಕಾಲೇಜುನಲ್ಲಿ ನಡೆದ ಬೀಳೂರು ಗುರುಬಸವ ಸ್ವಾಮೀಜಿಯವರ ಶ್ರಾವಣ ಮಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬೀಳೂರು ಗುರುಬಸವ ಸ್ವಾಮೀಜಿ ಉತ್ಸವ ಸಮಿತಿ ಸದಸ್ಯ ಗಂಗಾಧರ ನರೆಗಲ್ಲ ಮುಖ್ಯ ಅತಿಥಿಯಾಗಿದ್ದರು. ಸಂಸ್ಕೃತ ಪಾಠ ಶಾಲೆಯಿಂದ ಆರಂಭವಾದ ಬಸವೇಶ್ವರ ವಿದ್ಯಾವರ್ಧಕ ಸಂಘ ಇಂದು ಶಿಕ್ಷಣ ಕ್ಷೇತ್ರದ ಎಲ್ಲ ಕೋರ್ಸಗಳನ್ನು ಹೊಂದಿದೆ. 170 ಅಂಗಸಂಸ್ಥೆಗಳನ್ನು ರಾಜ್ಯದಾದ್ಯಂತ ಹೊಂದಿದ್ದು, ಪ್ರತಿ ವರ್ಷ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅಧ್ಯಯನ ಮಾಡುವರು 6 ರಿಂದ 7ಸಾವಿರ ಶಿಕ್ಷಕರು ಸಂಘದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೀರಣ್ಣ ಚರಂತಿಮಠ ಅವರ ಶಿಸ್ತುಬದ್ದ ಆಡಳಿತದಿಂದ ಬಸವೇಶ್ವರ ವಿದ್ಯಾವರ್ಧಕ ಸಂಘ ಹೆಮ್ಮರವಾಗಿ ಬೆಳೆದಿದೆ. ರಾಜ್ಯದಲ್ಲಿಯೇ ಹೆಸರು ಪಡೆದ ಸಂಘ ಇದಾಗಿದ್ದು, ಶತಮಾನೋತ್ಸವವನ್ನು ಆಚರಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದೆ ಎಂದರು.</p>.<p>ಬಸವೇಶ್ವರ ವಿದ್ಯಾವರ್ಧಕ ಸಂಘದ ಅಕ್ಷರ ದಾಸೋಹ ವ್ಯವಸ್ಥಾಪಕ ಎಸ್.ಎಸ್.ಹುದ್ದಾರ, ನಿವೃತ್ತ ಮುಖ್ಯೋಪಾಧ್ಯಾಯ ಡಿ.ವಿ.ಶಿಕ್ಕೇರಿ, ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಿ.ಆರ್.ಚೌಗಲೆ, ಸಂಗಮೇಶ್ವರ ಪ್ರೌಢ ಶಾಲೆಯ ಮುಖ್ಯಗುರು ಎ.ವಾಯ್.ಕೊಪ್ಪದ, ಸಂಗಮೇಶ್ವರ ಪ್ರಾಥಮಿಕ ಶಾಲೆಯ ಮುಖ್ಯಗುರು ಜಿ.ಬಿ.ಬಡಿಗೇರ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>