<p><strong>ಬಾಗಲಕೋಟೆ:</strong> ರಾಜ್ಯದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯನ್ನು ಸೋಮವಾರ ಎಲ್ಲೆಡೆ ಆಚರಿಸಲಾಗಿದೆ. ಆದರೆ, ಬಸವಣ್ಣವರ ವಿದ್ಯಾಕಾಶಿ, ಐಕ್ಯಸ್ಥಳ ಕೂಡಲಸಂಗಮದ ಅಭಿವೃದ್ಧಿ ಮಾತ್ರ ಮಂದಗತಿಯಲ್ಲಿ ಸಾಗಿದೆ.</p>.<p>2018ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ₹139 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ಸರಿಯಾದ ಯೋಜನೆ ಇಲ್ಲದ್ದರಿಂದ ಹಲವು ಅಭಿವೃದ್ಧಿ ಕಾರ್ಯಗಳು ಇಂದಿಗೂ ಪೂರ್ಣಗೊಂಡಿಲ್ಲ. ದೆಹಲಿಯ ಅಕ್ಷರಧಾಮ ಮಾದರಿಯ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ಕಾಮಗಾರಿ ಹಲವು ವರ್ಷಗಳಿಂದ ನಡೆದಿದ್ದರೂ ಪೂರ್ಣಗೊಂಡಿಲ್ಲ.</p>.<p>ಆಧುನಿಕ ತಂತ್ರಜ್ಞಾನದ ಮೂಲಕ ಬಸವಾದಿ ಶರಣರ ವಿಚಾರಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತಲುಪಿಸಬೇಕು ಎಂಬ ಉದ್ದೇಶದಿಂದ 1998ರಲ್ಲಿ ₹15.5 ಕೋಟಿ ವೆಚ್ಚದಲ್ಲಿ ಬಸವ ಅಂತರರಾಷ್ಟ್ರೀಯ ಕೇಂದ್ರದ ಕಾಮಗಾರಿ ಆರಂಭಗೊಂಡಿತು. ಕುಂಟುತ್ತಾ ಸಾಗಿದ ಕಾಮಗಾರಿ ಎಂಟು ವರ್ಷಗಳ ನಂತರ, 2006ರಲ್ಲಿ ಮುಕ್ತಾಯಗೊಂಡಿತು. ಏಳು ಅಂತಸ್ತಿನ ಈ ಕಟ್ಟಡದಲ್ಲಿ ಏನು ಮಾಡಬೇಕು ಎಂಬುದಕ್ಕೆ ಸಮಿತಿ ರಚಿಸಲಾಯಿತು. ಆ ಸಮಿತಿಯು 2011ರಲ್ಲಿ ವರದಿ ನೀಡಿದೆ. ಆದರೆ, ಅನುಷ್ಠಾನವಾಗಿಲ್ಲ.</p>.<p>2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರ್ಕಾರ ಬಸವ ಅಂತರರಾಷ್ಟ್ರೀಯ ಕೇಂದ್ರದ ಯೋಜನೆ ಹಳೆಯದಾಗಿದೆ ಎಂದು ದೆಹಲಿ ಅಕ್ಷರಧಾಮ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಹೊಸ ಯೋಜನೆ ಸಿದ್ಧಪಡಿಸಿತು. ಅಧಿಕಾರದ ಕೊನೆವರೆಗೂ ಸುಮ್ಮನಿದ್ದು 2018ರಲ್ಲಿ ₹139 ಕೋಟಿ ಅನುದಾನ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>₹15.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಏಳು ಅಂತಸ್ತಿನ ಬೃಹತ್ ಬಸವ ಅಂತರರಾಷ್ಟ್ರೀಯ ಕೇಂದ್ರ ಇಂದಿನವರೆಗೆ ಬಳಕೆಯಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊನೆ ಗಳಿಗೆಯಲ್ಲಿ ಇದರ ಉದ್ಘಾಟನೆ ಮಾಡಲು ಮುಂದಾಗಿತ್ತು. ₹1.80 ಕೋಟಿ ವೆಚ್ಚದಲ್ಲಿ ಬಿಳಿ ಬಣ್ಣ ಬಳಿದು, ವಿವಿಧ ಕಾಮಗಾರಿ ಮಾಡಲಾಯಿತು. ಆದರೂ, ಉದ್ಘಾಟನೆಯಾಗಲಿಲ್ಲ. ಎರಡೂವರೆ ವರ್ಷದಿಂದ ಬೀಗ ಜಡಿಯಲಾಗಿದೆ.</p>.<p><strong>ಅನುಷ್ಠಾನ ಸಮಿತಿ ಸಭೆಗೆ ಸೀಮಿತ</strong></p><p>ಕಾಮಗಾರಿ ಮಂದಗತಿಯಲ್ಲಿ ನಡೆದಿರುವುದನ್ನು ಗಮನಿಸಿ, ಬೇಗನೆ ಪೂರ್ಣಗೊಳಿಸುವ ಸಲುವಾಗಿ ಅನುಷ್ಠಾನ ಸಮಿತಿ ರಚಿಸಲಾಗಿದೆ. ಅನುಷ್ಠಾನ ಸಮಿತಿಯ ಸಭೆಗಳು ನಡೆದಿವೆಯಾದರೂ, ಕಾಮಗಾರಿ ಪೂರ್ಣಗೊಂಡಿಲ್ಲ. </p><p>ಕಲ್ಯಾಣ ಮಂಟಪ ನಿರ್ಮಾಣ, ಬಸವಣ್ಣ ಹಾಗೂ ಶರಣರ ಜೀವನ ಸಾರಲು ಮಿನಿ ಥಿಯೇಟರ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಅವುಗಳ ನಿರ್ಮಾಣ ಆರಂಭವಾಗಿಲ್ಲ.</p><p><strong>ಸ್ನಾನಘಟ್ಟ ನನೆಗುದಿಗೆ: </strong>ನಾಡಿನ ವಿವಿಧ ಭಾಗಗಳಿಂದ ನಿತ್ಯ ಕೂಡಲಸಂಗಮಕ್ಕೆ ಅಪಾರ ಭಕ್ತರು ಬರುತ್ತಾರೆ. ಅವರ ಅನುಕೂಲಕ್ಕಾಗಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ಸ್ನಾನ ಘಟ್ಟ ಮತ್ತು ಬಟ್ಟೆ ಬದಲಾಯಿಸುವ ಕೊಠಡಿಗಳ ನಿರ್ಮಾಣಕ್ಕೆ 2018ರಲ್ಲಿ ಚಾಲನೆ ನೀಡಲಾಯಿತು. ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. </p>.<p><strong>ನಿರ್ಮಾಣವಾಗದ ಶರಣ ಗ್ರಾಮ</strong></p><p>ಬಸವಾದಿ ಶರಣರ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ 2018ರಲ್ಲಿ ಶರಣ ಗ್ರಾಮ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಅದಕ್ಕಾಗಿ ₹5.38 ಕೋಟಿ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು.</p><p>20 ಎಕರೆ ಪ್ರದೇಶದಲ್ಲಿ ಬಸವಣ್ಣನವರ ಸಮಕಾಲೀನ 770 ಶರಣರ ಮೂರ್ತಿಗಳನ್ನು ನಿರ್ಮಿಸಿ ಅವರ ಬದುಕು, ಸಂದೇಶಗಳನ್ನು ಪ್ರವಾಸಿಗರಿಗೆ ಪರಿಚಯಿಸುವ ಉದ್ದೇಶ ಹೊಂದಲಾಗಿತ್ತು. ಆದರೆ, ಕಾಮಗಾರಿ ಆರಂಭಗೊಂಡೇ ಇಲ್ಲ.</p>.<div><blockquote>ಕೂಡಲಸಂಗಮ ಅಭಿವೃದ್ಧಿ ಆಗಬೇಕೆಂಬ ಬಸವ ಭಕ್ತರ ಬಹುವರ್ಷಗಳ ಬೇಡಿಕೆ ನನೆಗುದಿಗೆ ಬಿದ್ದಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು. </blockquote><span class="attribution">-ಮಹದೇಶ್ವರ ಸ್ವಾಮೀಜಿ, ಬಸವಧರ್ಮ ಪೀಠ, ಕೂಡಲಸಂಗಮ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ರಾಜ್ಯದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯನ್ನು ಸೋಮವಾರ ಎಲ್ಲೆಡೆ ಆಚರಿಸಲಾಗಿದೆ. ಆದರೆ, ಬಸವಣ್ಣವರ ವಿದ್ಯಾಕಾಶಿ, ಐಕ್ಯಸ್ಥಳ ಕೂಡಲಸಂಗಮದ ಅಭಿವೃದ್ಧಿ ಮಾತ್ರ ಮಂದಗತಿಯಲ್ಲಿ ಸಾಗಿದೆ.</p>.<p>2018ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ₹139 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ಸರಿಯಾದ ಯೋಜನೆ ಇಲ್ಲದ್ದರಿಂದ ಹಲವು ಅಭಿವೃದ್ಧಿ ಕಾರ್ಯಗಳು ಇಂದಿಗೂ ಪೂರ್ಣಗೊಂಡಿಲ್ಲ. ದೆಹಲಿಯ ಅಕ್ಷರಧಾಮ ಮಾದರಿಯ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ಕಾಮಗಾರಿ ಹಲವು ವರ್ಷಗಳಿಂದ ನಡೆದಿದ್ದರೂ ಪೂರ್ಣಗೊಂಡಿಲ್ಲ.</p>.<p>ಆಧುನಿಕ ತಂತ್ರಜ್ಞಾನದ ಮೂಲಕ ಬಸವಾದಿ ಶರಣರ ವಿಚಾರಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತಲುಪಿಸಬೇಕು ಎಂಬ ಉದ್ದೇಶದಿಂದ 1998ರಲ್ಲಿ ₹15.5 ಕೋಟಿ ವೆಚ್ಚದಲ್ಲಿ ಬಸವ ಅಂತರರಾಷ್ಟ್ರೀಯ ಕೇಂದ್ರದ ಕಾಮಗಾರಿ ಆರಂಭಗೊಂಡಿತು. ಕುಂಟುತ್ತಾ ಸಾಗಿದ ಕಾಮಗಾರಿ ಎಂಟು ವರ್ಷಗಳ ನಂತರ, 2006ರಲ್ಲಿ ಮುಕ್ತಾಯಗೊಂಡಿತು. ಏಳು ಅಂತಸ್ತಿನ ಈ ಕಟ್ಟಡದಲ್ಲಿ ಏನು ಮಾಡಬೇಕು ಎಂಬುದಕ್ಕೆ ಸಮಿತಿ ರಚಿಸಲಾಯಿತು. ಆ ಸಮಿತಿಯು 2011ರಲ್ಲಿ ವರದಿ ನೀಡಿದೆ. ಆದರೆ, ಅನುಷ್ಠಾನವಾಗಿಲ್ಲ.</p>.<p>2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ಸರ್ಕಾರ ಬಸವ ಅಂತರರಾಷ್ಟ್ರೀಯ ಕೇಂದ್ರದ ಯೋಜನೆ ಹಳೆಯದಾಗಿದೆ ಎಂದು ದೆಹಲಿ ಅಕ್ಷರಧಾಮ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಹೊಸ ಯೋಜನೆ ಸಿದ್ಧಪಡಿಸಿತು. ಅಧಿಕಾರದ ಕೊನೆವರೆಗೂ ಸುಮ್ಮನಿದ್ದು 2018ರಲ್ಲಿ ₹139 ಕೋಟಿ ಅನುದಾನ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>₹15.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಏಳು ಅಂತಸ್ತಿನ ಬೃಹತ್ ಬಸವ ಅಂತರರಾಷ್ಟ್ರೀಯ ಕೇಂದ್ರ ಇಂದಿನವರೆಗೆ ಬಳಕೆಯಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊನೆ ಗಳಿಗೆಯಲ್ಲಿ ಇದರ ಉದ್ಘಾಟನೆ ಮಾಡಲು ಮುಂದಾಗಿತ್ತು. ₹1.80 ಕೋಟಿ ವೆಚ್ಚದಲ್ಲಿ ಬಿಳಿ ಬಣ್ಣ ಬಳಿದು, ವಿವಿಧ ಕಾಮಗಾರಿ ಮಾಡಲಾಯಿತು. ಆದರೂ, ಉದ್ಘಾಟನೆಯಾಗಲಿಲ್ಲ. ಎರಡೂವರೆ ವರ್ಷದಿಂದ ಬೀಗ ಜಡಿಯಲಾಗಿದೆ.</p>.<p><strong>ಅನುಷ್ಠಾನ ಸಮಿತಿ ಸಭೆಗೆ ಸೀಮಿತ</strong></p><p>ಕಾಮಗಾರಿ ಮಂದಗತಿಯಲ್ಲಿ ನಡೆದಿರುವುದನ್ನು ಗಮನಿಸಿ, ಬೇಗನೆ ಪೂರ್ಣಗೊಳಿಸುವ ಸಲುವಾಗಿ ಅನುಷ್ಠಾನ ಸಮಿತಿ ರಚಿಸಲಾಗಿದೆ. ಅನುಷ್ಠಾನ ಸಮಿತಿಯ ಸಭೆಗಳು ನಡೆದಿವೆಯಾದರೂ, ಕಾಮಗಾರಿ ಪೂರ್ಣಗೊಂಡಿಲ್ಲ. </p><p>ಕಲ್ಯಾಣ ಮಂಟಪ ನಿರ್ಮಾಣ, ಬಸವಣ್ಣ ಹಾಗೂ ಶರಣರ ಜೀವನ ಸಾರಲು ಮಿನಿ ಥಿಯೇಟರ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಅವುಗಳ ನಿರ್ಮಾಣ ಆರಂಭವಾಗಿಲ್ಲ.</p><p><strong>ಸ್ನಾನಘಟ್ಟ ನನೆಗುದಿಗೆ: </strong>ನಾಡಿನ ವಿವಿಧ ಭಾಗಗಳಿಂದ ನಿತ್ಯ ಕೂಡಲಸಂಗಮಕ್ಕೆ ಅಪಾರ ಭಕ್ತರು ಬರುತ್ತಾರೆ. ಅವರ ಅನುಕೂಲಕ್ಕಾಗಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ಸ್ನಾನ ಘಟ್ಟ ಮತ್ತು ಬಟ್ಟೆ ಬದಲಾಯಿಸುವ ಕೊಠಡಿಗಳ ನಿರ್ಮಾಣಕ್ಕೆ 2018ರಲ್ಲಿ ಚಾಲನೆ ನೀಡಲಾಯಿತು. ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. </p>.<p><strong>ನಿರ್ಮಾಣವಾಗದ ಶರಣ ಗ್ರಾಮ</strong></p><p>ಬಸವಾದಿ ಶರಣರ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ 2018ರಲ್ಲಿ ಶರಣ ಗ್ರಾಮ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಅದಕ್ಕಾಗಿ ₹5.38 ಕೋಟಿ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು.</p><p>20 ಎಕರೆ ಪ್ರದೇಶದಲ್ಲಿ ಬಸವಣ್ಣನವರ ಸಮಕಾಲೀನ 770 ಶರಣರ ಮೂರ್ತಿಗಳನ್ನು ನಿರ್ಮಿಸಿ ಅವರ ಬದುಕು, ಸಂದೇಶಗಳನ್ನು ಪ್ರವಾಸಿಗರಿಗೆ ಪರಿಚಯಿಸುವ ಉದ್ದೇಶ ಹೊಂದಲಾಗಿತ್ತು. ಆದರೆ, ಕಾಮಗಾರಿ ಆರಂಭಗೊಂಡೇ ಇಲ್ಲ.</p>.<div><blockquote>ಕೂಡಲಸಂಗಮ ಅಭಿವೃದ್ಧಿ ಆಗಬೇಕೆಂಬ ಬಸವ ಭಕ್ತರ ಬಹುವರ್ಷಗಳ ಬೇಡಿಕೆ ನನೆಗುದಿಗೆ ಬಿದ್ದಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು. </blockquote><span class="attribution">-ಮಹದೇಶ್ವರ ಸ್ವಾಮೀಜಿ, ಬಸವಧರ್ಮ ಪೀಠ, ಕೂಡಲಸಂಗಮ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>