<p><strong>ಕೂಡಲಸಂಗಮ</strong>: ಕೂಡಲಸಂಗಮ ಪುನರ್ ವಸತಿ ಕೇಂದ್ರದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ ವಸತಿ ನಿಲಯ ಮಾದರಿ 4ರ ಮಕ್ಕಳ ಸಂಖ್ಯೆ ಹೆಚ್ಚಿಸಬೇಕು ಎಂಬುದು ಕೂಡಲಸಂಗಮ ಸುತ್ತಮುತ್ತಲಿನ ಗ್ರಾಮದ ಜನರು ಆಗ್ರಹ.</p>.<p>ಕೂಡಲಸಂಗಮ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ ವಸತಿ ನಿಲಯ ಮಾದರಿ 4ರಲ್ಲಿ 200 ವಿದ್ಯಾರ್ಥಿನಿಯರು ಇರಲು ವ್ಯವಸ್ಥೆ ಇದೆ. ಸದ್ಯ 100 ವಿದ್ಯಾರ್ಥಿನಿಯರು ಇದ್ದು, ಇನ್ನು 50 ಸಂಖ್ಯೆ ಹೆಚ್ಚಿಸಿದರೆ ಯಾವುದೇ ತೊಂದರೆ ಆಗುವುದಿಲ್ಲ.</p>.<p>ಪ್ರೌಢ ಶಾಲಾ ಶಿಕ್ಷಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ವಂಚಿತರಾಗಬಾರದು ಎಂದು ಸರ್ಕಾರ ಈ ವಸತಿ ನಿಲಯ ಆರಂಭಿಸಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಈ ವಸತಿ ನಿಲಯದಲ್ಲಿ ಇದ್ದು ಶಿಕ್ಷಣ ಪಡೆಯುತ್ತಿದ್ದಾರೆ. ಪ್ರತಿ ತರಗತಿಗೆ 50 ವಿದ್ಯಾರ್ಥಿನಿಯರಂತೆ 9, 10ನೇ ತರಗತಿಯ 100 ವಿದ್ಯಾರ್ಥಿನಿಯರು ವಸತಿ ನಿಲಯದಲ್ಲಿ ಇದ್ದು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.</p>.<p>ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯಲ್ಲಿ 8ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿನಿಯರು ಈ ವಸತಿ ನಿಲಯದಲ್ಲಿ ಪ್ರವೇಶ ಪಡೆಯುತ್ತಾರೆ. ಪ್ರತಿ ವರ್ಷ 30 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಈ ವಸತಿ ನಿಲಯದಲ್ಲಿ ನೇರ ಪ್ರವೇಶ ಪಡೆಯುತ್ತಿದ್ದರು. ಉಳಿದ 20 ಸ್ಥಾನಗಳಿಗೆ 200 ರಿಂದ 300 ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸುತ್ತಿದ್ದರು. ಅದರಲ್ಲಿ 20 ವಿದ್ಯಾರ್ಥಿನಿಯರು ಆಯ್ಕೆಯಾಗುತ್ತಿದ್ದರು.</p>.<p>ಕಳೆದ ವರ್ಷ ಕಸ್ತೂರಿಬಾ ಗಾಂಧಿ ಬಾಲಿಕಾ ವಸತಿ ಶಾಲೆ ಮಾದರಿ 1ರಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಿದ ಪರಿಣಾಮ ಈ ವರ್ಷ 8ನೇ ತರಗತಿಯನ್ನು 50 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಮಾದರಿ 4ರ ವಸತಿ ನಿಲಯಕ್ಕೆ ನೇರ ಪ್ರವೇಶ ಪಡೆಯುವರು. 9ನೇ ತರಗತಿಗೆ ಎಲ್ಲ 50 ನೇರ ಪ್ರವೇಶ ದೊರಕಿರುವುದರಿಂದ ಉಳಿದ ವಿದ್ಯಾರ್ಥಿನಿಯರಿಗೆ ಪ್ರವೇಶ ದೊರಯುತ್ತಿಲ್ಲ.</p>.<p>ಕೂಡಲಸಂಗಮ ಸುತ್ತಮುತ್ತಲಿನ 30ಕ್ಕೂ ಅಧಿಕ ಗ್ರಾಮದ ಬಡಕುಟುಂಬಗಳು ತಮ್ಮ ಹೆಣ್ಣು ಮಕ್ಕಳಿಗೆ ಈ ವಸತಿ ನಿಲಯಕ್ಕೆ ಸೇರಲು ಬಯಸಿದ್ದಾರೆ. ಆದರೆ ಪ್ರವೇಶ ಪಡೆಯಲು ಸೀಟ್ಗಳು ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಪ್ರವೇಶಗಳಿಗೆ ಬೇಡಿಕೆ ಹೆಚ್ಚಿದ್ದು ಸರ್ಕಾರ ಈ ವಸತಿ ನಿಲಯಕ್ಕೆ 50 ಸೀಟ್ ಹೆಚ್ಚಳ ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-1698782846</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ</strong>: ಕೂಡಲಸಂಗಮ ಪುನರ್ ವಸತಿ ಕೇಂದ್ರದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ ವಸತಿ ನಿಲಯ ಮಾದರಿ 4ರ ಮಕ್ಕಳ ಸಂಖ್ಯೆ ಹೆಚ್ಚಿಸಬೇಕು ಎಂಬುದು ಕೂಡಲಸಂಗಮ ಸುತ್ತಮುತ್ತಲಿನ ಗ್ರಾಮದ ಜನರು ಆಗ್ರಹ.</p>.<p>ಕೂಡಲಸಂಗಮ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ ವಸತಿ ನಿಲಯ ಮಾದರಿ 4ರಲ್ಲಿ 200 ವಿದ್ಯಾರ್ಥಿನಿಯರು ಇರಲು ವ್ಯವಸ್ಥೆ ಇದೆ. ಸದ್ಯ 100 ವಿದ್ಯಾರ್ಥಿನಿಯರು ಇದ್ದು, ಇನ್ನು 50 ಸಂಖ್ಯೆ ಹೆಚ್ಚಿಸಿದರೆ ಯಾವುದೇ ತೊಂದರೆ ಆಗುವುದಿಲ್ಲ.</p>.<p>ಪ್ರೌಢ ಶಾಲಾ ಶಿಕ್ಷಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ವಂಚಿತರಾಗಬಾರದು ಎಂದು ಸರ್ಕಾರ ಈ ವಸತಿ ನಿಲಯ ಆರಂಭಿಸಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಈ ವಸತಿ ನಿಲಯದಲ್ಲಿ ಇದ್ದು ಶಿಕ್ಷಣ ಪಡೆಯುತ್ತಿದ್ದಾರೆ. ಪ್ರತಿ ತರಗತಿಗೆ 50 ವಿದ್ಯಾರ್ಥಿನಿಯರಂತೆ 9, 10ನೇ ತರಗತಿಯ 100 ವಿದ್ಯಾರ್ಥಿನಿಯರು ವಸತಿ ನಿಲಯದಲ್ಲಿ ಇದ್ದು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.</p>.<p>ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯಲ್ಲಿ 8ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿನಿಯರು ಈ ವಸತಿ ನಿಲಯದಲ್ಲಿ ಪ್ರವೇಶ ಪಡೆಯುತ್ತಾರೆ. ಪ್ರತಿ ವರ್ಷ 30 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಈ ವಸತಿ ನಿಲಯದಲ್ಲಿ ನೇರ ಪ್ರವೇಶ ಪಡೆಯುತ್ತಿದ್ದರು. ಉಳಿದ 20 ಸ್ಥಾನಗಳಿಗೆ 200 ರಿಂದ 300 ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸುತ್ತಿದ್ದರು. ಅದರಲ್ಲಿ 20 ವಿದ್ಯಾರ್ಥಿನಿಯರು ಆಯ್ಕೆಯಾಗುತ್ತಿದ್ದರು.</p>.<p>ಕಳೆದ ವರ್ಷ ಕಸ್ತೂರಿಬಾ ಗಾಂಧಿ ಬಾಲಿಕಾ ವಸತಿ ಶಾಲೆ ಮಾದರಿ 1ರಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಿದ ಪರಿಣಾಮ ಈ ವರ್ಷ 8ನೇ ತರಗತಿಯನ್ನು 50 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಮಾದರಿ 4ರ ವಸತಿ ನಿಲಯಕ್ಕೆ ನೇರ ಪ್ರವೇಶ ಪಡೆಯುವರು. 9ನೇ ತರಗತಿಗೆ ಎಲ್ಲ 50 ನೇರ ಪ್ರವೇಶ ದೊರಕಿರುವುದರಿಂದ ಉಳಿದ ವಿದ್ಯಾರ್ಥಿನಿಯರಿಗೆ ಪ್ರವೇಶ ದೊರಯುತ್ತಿಲ್ಲ.</p>.<p>ಕೂಡಲಸಂಗಮ ಸುತ್ತಮುತ್ತಲಿನ 30ಕ್ಕೂ ಅಧಿಕ ಗ್ರಾಮದ ಬಡಕುಟುಂಬಗಳು ತಮ್ಮ ಹೆಣ್ಣು ಮಕ್ಕಳಿಗೆ ಈ ವಸತಿ ನಿಲಯಕ್ಕೆ ಸೇರಲು ಬಯಸಿದ್ದಾರೆ. ಆದರೆ ಪ್ರವೇಶ ಪಡೆಯಲು ಸೀಟ್ಗಳು ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಪ್ರವೇಶಗಳಿಗೆ ಬೇಡಿಕೆ ಹೆಚ್ಚಿದ್ದು ಸರ್ಕಾರ ಈ ವಸತಿ ನಿಲಯಕ್ಕೆ 50 ಸೀಟ್ ಹೆಚ್ಚಳ ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-1698782846</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>