ಯತ್ನಾಳ ಕುಮ್ಮಕ್ಕು ಇಲ್ಲ: ‘ಪಾದಯಾತ್ರೆಯ ಹಿಂದೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕುಮ್ಮಕ್ಕು ಇದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಅವರು ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿರಲಿಲ್ಲ. ಪಾದಯಾತ್ರೆಗೆ ಪಕ್ಷಾತೀತವಾಗಿ ಸಮಾಜದ ಹಾಲಿ– ಮಾಜಿ ಶಾಸಕರ ಬೆಂಬಲ ಇದೆ. ಯತ್ನಾಳ ಅವರೇ ಗುರುವಾರ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಸ್ವಾಮೀಜಿ ಉತ್ತರಿಸಿದರು.