ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡಲಸಂಗಮ, ಬನಶಂಕರಿ: ದರ್ಶನಕ್ಕೆ ಮುಕ್ತ

Last Updated 4 ಜುಲೈ 2021, 13:14 IST
ಅಕ್ಷರ ಗಾತ್ರ

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಬಸವಣ್ಣನ ಐಕ್ಯಮಂಟಪ, ಸಂಗಮೇಶ್ವರ ದೇವಾಲಯ ಹಾಗೂ ಬಾದಾಮಿ ಬಳಿಯ ಬನಶಂಕರಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಜುಲೈ 5ರಿಂದ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದೆ.

ಕೂಡಲಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಬೀಳಗಿ ತಾಲ್ಲೂಕಿನ ಚಿಕ್ಕಸಂಗಮದ ಸಂಗಮೇಶ್ವರ ದೇವಾಲಯ, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ಬಸವೇಶ್ವರ ದೇವಾಲಯ, ಬಸವ ಸ್ಮಾರಕ, ಇಂಗಳೇಶ್ವರದ ಮಾದಲಾಂಬಿಕೆ ಸ್ಮಾರಕ, ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿಯ ನೀಲಾಂಬಿಕೆ ಐಕ್ಯ ಸ್ಥಳ, ಬೆಳಗಾವಿ ಜಿಲ್ಲೆ ಎಂ.ಕೆ. ಹುಬ್ಬಳ್ಳಿಯ ಗಂಗಾಬಿಕೆ ಐಕ್ಯಸ್ಥಳಗಳು ಭಕ್ತರ ದರ್ಶನಕ್ಕೆ ಮುಕ್ತವಾಗಲಿವೆ.

ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಯ ಪ್ರಕಾರಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಈ ಎಲ್ಲ ಶ್ರದ್ಧಾ ಕೇಂದ್ರಗಳು ತೆರೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT