<p><strong>ಬಾಗಲಕೋಟೆ: </strong>ಗದಗ ಜಿಲ್ಲೆಯ ಸಿ.ಸಿ. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಸಮಸ್ಯೆಗಳನ್ನು ಹೇಳಿಕೊಳ್ಳಲು, ಮನವಿ ನೀಡಲು ಅವರನ್ನು ಎಲ್ಲಿ ಭೇಟಿಯಾಗಬೇಕು ಎಂಬ ಪ್ರಶ್ನೆ ಜಿಲ್ಲೆಯ ಸಾರ್ವಜನಿಕರು, ಸಂಘಟನೆಗಳವರನ್ನು ಕಾಡುತ್ತಿದೆ.</p>.<p>ಸಚಿವ ಸಿ.ಸಿ. ಪಾಟೀಲ ಅವರು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಏಳೆಂಟು ತಿಂಗಳೇ ಕಳೆದಿವೆ. ಆದರೆ, ಉಸ್ತುವಾರಿ ಸಚಿವರ ಕಚೇರಿ ಬಾಗಲಕೋಟೆಯಲ್ಲಿ ಆರಂಭಿಸಿಲ್ಲ. ಹೀಗಾಗಿ ಅವರಿಗೆ ಮನವಿ ಕೊಡಲು, ಭೇಟಿಯಾಗಲು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಎದುರಾಗಿದೆ.</p>.<p>ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಗೋವಿಂದ ಕಾರಜೋಳ ಅವರು ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ಕಚೇರಿ ಹೊಂದಿದ್ದರು. ಕಾರಜೋಳ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಅವರ ಹೆಸರಿನ ಫಲಕ ತೆಗೆಯಲಾಗಿದ್ದು, ಕಚೇರಿಗೆ ಬೀಗ ಜಡಿಯಲಾಗಿದೆ.</p>.<p>ಜಿಲ್ಲಾಡಳಿತ ಭವನದಲ್ಲಿದ್ದ ಉಸ್ತುವಾರಿ ಸಚಿವರ ಕಚೇರಿಗೆ ಆಗಾಗ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿದ್ದರು. ಸಾರ್ವಜನಿಕರೂ ಭೇಟಿ ನೀಡಿ ಮನವಿ ಸಲ್ಲಿಸುತ್ತಿದ್ದು. ಅವರಿಲ್ಲದಿದ್ದರೂ, ಅಲ್ಲಿ ಸಿಬ್ಬಂದಿ ಇರುತ್ತಿದ್ದರು. ಅವರಿಗೆ ಮನವಿ ನೀಡಿದರೂ, ಅದು ನಂತರ ಸಚಿವರ ಗಮನಕ್ಕೆ ಬರುತ್ತಿತ್ತು.</p>.<p>ಸಚಿವ ಸಿ.ಸಿ. ಪಾಟೀಲ ಅವರು ಸಭೆ, ಸಮಾರಂಭಗಳಿದ್ದಾಗ ಮಾತ್ರ ಜಿಲ್ಲೆಗೆ ಬರುತ್ತಾರೆ. ಆಗ ಅವರ ಸುತ್ತಲೂ ಜನಪ್ರತಿನಿಧಿಗಳು, ಅಧಿಕಾರಿಗಳು, ಪಕ್ಷದ ಮುಖಂಡರೇ ಸುತ್ತಿಕೊಂಡಿರುತ್ತಾರೆ. ಜನ ಸಾಮಾನ್ಯರ ಭೇಟಿ ಸಾಧ್ಯವಾಗುವುದೇ ಇಲ್ಲ ಎನ್ನುವುದು ಸಾರ್ವಜನಿಕರ ದೂರು.</p>.<p>ಬಿಜೆಪಿ ಸರ್ಕಾರದಲ್ಲಿ ಒಂದು ಜಿಲ್ಲೆಯ ಸಚಿವರನ್ನು, ಇನ್ನೊಂದು ಜಿಲ್ಲೆಗೆ ಸಚಿವರನ್ನಾಗಿ ಮಾಡಲಾಗಿದೆ. ಆದರೆ, ಅವರು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಕ್ಕಿಂತ ಸಭೆ, ಸಮಾರಂಭಗಳಿಗೆ ಸೀಮಿತರಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತವೆ.</p>.<p>‘ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಬೇಕಾಗುತ್ತದೆ. ಅದಕ್ಕಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ. ಆದರೆ, ಅವರ ಕಚೇರಿ ಇಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಜನಸಾಮಾನ್ಯರಿಗೆ ಗದಗ, ಬೆಂಗಳೂರಿಗೆ ಹೋಗಲು ಸಾಧ್ಯವೇ ಎಂದು ಪ್ರಶ್ನಿಸುತ್ತಾರೆ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಬದ್ನೂರ.</p>.<p>*<br />ಬಾಗಲಕೋಟೆ ಜಿಲ್ಲೆ ನಿರ್ಲಕ್ಷಕ್ಕೆ ಒಳಗಾಗಿದೆ. ಸಚಿವರು ಕಚೇರಿ ತೆರೆಯದಿರುವುದು ಸರಿಯಲ್ಲ. ಜಿಲ್ಲೆಯ ಕೆಲ ಜನಪ್ರತಿನಿಧಿಗಳು ಇದಕ್ಕೆ ಅವಕಾಶ ನೀಡುವುದಿಲ್ಲ.<br /><em><strong>-ರಮೇಶ ಬದ್ನೂರ, ಅಧ್ಯಕ್ಷ, ಜಿಲ್ಲಾ ಘಟಕ, ಎಎಪಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಗದಗ ಜಿಲ್ಲೆಯ ಸಿ.ಸಿ. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಸಮಸ್ಯೆಗಳನ್ನು ಹೇಳಿಕೊಳ್ಳಲು, ಮನವಿ ನೀಡಲು ಅವರನ್ನು ಎಲ್ಲಿ ಭೇಟಿಯಾಗಬೇಕು ಎಂಬ ಪ್ರಶ್ನೆ ಜಿಲ್ಲೆಯ ಸಾರ್ವಜನಿಕರು, ಸಂಘಟನೆಗಳವರನ್ನು ಕಾಡುತ್ತಿದೆ.</p>.<p>ಸಚಿವ ಸಿ.ಸಿ. ಪಾಟೀಲ ಅವರು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಏಳೆಂಟು ತಿಂಗಳೇ ಕಳೆದಿವೆ. ಆದರೆ, ಉಸ್ತುವಾರಿ ಸಚಿವರ ಕಚೇರಿ ಬಾಗಲಕೋಟೆಯಲ್ಲಿ ಆರಂಭಿಸಿಲ್ಲ. ಹೀಗಾಗಿ ಅವರಿಗೆ ಮನವಿ ಕೊಡಲು, ಭೇಟಿಯಾಗಲು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಎದುರಾಗಿದೆ.</p>.<p>ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಗೋವಿಂದ ಕಾರಜೋಳ ಅವರು ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ಕಚೇರಿ ಹೊಂದಿದ್ದರು. ಕಾರಜೋಳ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಅವರ ಹೆಸರಿನ ಫಲಕ ತೆಗೆಯಲಾಗಿದ್ದು, ಕಚೇರಿಗೆ ಬೀಗ ಜಡಿಯಲಾಗಿದೆ.</p>.<p>ಜಿಲ್ಲಾಡಳಿತ ಭವನದಲ್ಲಿದ್ದ ಉಸ್ತುವಾರಿ ಸಚಿವರ ಕಚೇರಿಗೆ ಆಗಾಗ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿದ್ದರು. ಸಾರ್ವಜನಿಕರೂ ಭೇಟಿ ನೀಡಿ ಮನವಿ ಸಲ್ಲಿಸುತ್ತಿದ್ದು. ಅವರಿಲ್ಲದಿದ್ದರೂ, ಅಲ್ಲಿ ಸಿಬ್ಬಂದಿ ಇರುತ್ತಿದ್ದರು. ಅವರಿಗೆ ಮನವಿ ನೀಡಿದರೂ, ಅದು ನಂತರ ಸಚಿವರ ಗಮನಕ್ಕೆ ಬರುತ್ತಿತ್ತು.</p>.<p>ಸಚಿವ ಸಿ.ಸಿ. ಪಾಟೀಲ ಅವರು ಸಭೆ, ಸಮಾರಂಭಗಳಿದ್ದಾಗ ಮಾತ್ರ ಜಿಲ್ಲೆಗೆ ಬರುತ್ತಾರೆ. ಆಗ ಅವರ ಸುತ್ತಲೂ ಜನಪ್ರತಿನಿಧಿಗಳು, ಅಧಿಕಾರಿಗಳು, ಪಕ್ಷದ ಮುಖಂಡರೇ ಸುತ್ತಿಕೊಂಡಿರುತ್ತಾರೆ. ಜನ ಸಾಮಾನ್ಯರ ಭೇಟಿ ಸಾಧ್ಯವಾಗುವುದೇ ಇಲ್ಲ ಎನ್ನುವುದು ಸಾರ್ವಜನಿಕರ ದೂರು.</p>.<p>ಬಿಜೆಪಿ ಸರ್ಕಾರದಲ್ಲಿ ಒಂದು ಜಿಲ್ಲೆಯ ಸಚಿವರನ್ನು, ಇನ್ನೊಂದು ಜಿಲ್ಲೆಗೆ ಸಚಿವರನ್ನಾಗಿ ಮಾಡಲಾಗಿದೆ. ಆದರೆ, ಅವರು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಕ್ಕಿಂತ ಸಭೆ, ಸಮಾರಂಭಗಳಿಗೆ ಸೀಮಿತರಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತವೆ.</p>.<p>‘ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಬೇಕಾಗುತ್ತದೆ. ಅದಕ್ಕಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ. ಆದರೆ, ಅವರ ಕಚೇರಿ ಇಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಜನಸಾಮಾನ್ಯರಿಗೆ ಗದಗ, ಬೆಂಗಳೂರಿಗೆ ಹೋಗಲು ಸಾಧ್ಯವೇ ಎಂದು ಪ್ರಶ್ನಿಸುತ್ತಾರೆ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಬದ್ನೂರ.</p>.<p>*<br />ಬಾಗಲಕೋಟೆ ಜಿಲ್ಲೆ ನಿರ್ಲಕ್ಷಕ್ಕೆ ಒಳಗಾಗಿದೆ. ಸಚಿವರು ಕಚೇರಿ ತೆರೆಯದಿರುವುದು ಸರಿಯಲ್ಲ. ಜಿಲ್ಲೆಯ ಕೆಲ ಜನಪ್ರತಿನಿಧಿಗಳು ಇದಕ್ಕೆ ಅವಕಾಶ ನೀಡುವುದಿಲ್ಲ.<br /><em><strong>-ರಮೇಶ ಬದ್ನೂರ, ಅಧ್ಯಕ್ಷ, ಜಿಲ್ಲಾ ಘಟಕ, ಎಎಪಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>