<p><strong>ಕೆರೂರ:</strong> ‘ವಿಜಯಪುರ- ಬಾಗಲಕೋಟೆ ಜಿಲ್ಲೆಗಳ ಹಾಲು ಒಕ್ಕೂಟವನ್ನು ಪ್ರತ್ಯೇಕಗೊಳಿಸುವ ಕುರಿತು ಅವಳಿ ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದ ಬಳಿಕ ತಿರ್ಮಾನಿಸಲಾಗುವುದು’ ಎಂದು ಒಕ್ಕೂಟದ ನೂತನ ಅಧ್ಯಕ್ಷ ಈರಣ್ಣ ಕರಿಗೌಡರ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಎಲ್ಲಾ ಸಾಮರ್ಥ್ಯವಿದ್ದರೂ, ಇಚ್ಛಾಶಕ್ತಿ ಕೊರತೆ ಹಾಗೂ ಕೆಲವು ತಾಂತ್ರಿಕ ತೊಂದರೆಗಳ ಕಾರಣದಿಂದ ಪ್ರತ್ಯೇಕತೆ ವಿಷಯ ಇತ್ಯರ್ಥಗೊಂಡಿಲ್ಲ’ ಎಂದರು.</p>.<p>‘ಸುಮಾರು 490ಕ್ಕೂ ಅಧಿಕ ಸಂಘಗಳಿಂದ ನಿತ್ಯ 1.20 ಲಕ್ಷ ಲೀ ಉತ್ಪಾದನೆ, 80 ಸಾವಿರ ಲೀಟರ್ ಹಾಲು ಮಾರಾಟವಾಗುತ್ತಿದೆ. ನೂತನ ಮಹಿಳಾ ಹಾಲು ಸಂಘ ಸ್ಥಾಪನೆಗೆ ₹6 ಲಕ್ಷ ಸಹಾಯಧನ ನೀಡಲಾಗುತ್ತಿದೆ. ನಿತ್ಯ 50 ಲೀಟರ್ಗೂ ಹೆಚ್ಚು ಹಾಲು ಉತ್ಪಾದಿಸುವ ಆಸಕ್ತ ಮಹಿಳೆಯರು ಇದರ ಪ್ರಯೋಜನೆ ಪಡೆಯಬಹುದು. ಗ್ರಾಮಸಭೆ ಬಳಿಕ ಹೊಸ ಸಂಘ ಸ್ಥಾಪನೆಗೆ ಅನುಮತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p><strong>ಪನ್ನೀರು ಉತ್ಪಾದನೆಗೆ ಆದ್ಯತೆ: </strong>‘ಉಳಿದ ಹಾಲಿನಿಂದ ಪನ್ನೀರು ಉತ್ಪಾದನೆಯು ಅತ್ಯಧಿಕ ಲಾಭ ನಿಡುತ್ತಿದ್ದು, ನಂದಿನಿ ಉತ್ಪನ್ನಗಳಿಗೆ ಎಲ್ಲೆಡೆ ಬೇಡಿಕೆ ಹೆಚ್ಚಿದೆ. ಈ ಉತ್ಪನ್ನಗಳು ಜನರ ಮನ ಗೆದ್ದಿದ್ದು ಅಷ್ಟೇ ವಿಶ್ವಾಸಗಳಿಸಿದೆ’ ಎಂದರು.</p>.<p>ಅವಳಿ ಜಿಲ್ಲಾ ಹಾಲು ಒಕ್ಕೂಟ ಲಾಭ ಹೆಚ್ಚಿಸಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗುವುದು, ರೈತರಿಗೆ ನೆರವಾಗಲು ಮತ್ತಷ್ಟು ಶ್ರಮಿಸಲಾಗುವುದು ಎಂದರು.</p>.<div><blockquote>ಬಾಗಲಕೋಟೆಯಲ್ಲಿ 12 ಕೊಟಿಗೂ ಅಧಿಕ ವೆಚ್ಚದಲ್ಲಿ ನೂತನ ಡೈರಿ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಶೀಘ್ರದಲ್ಲೆ ಉದ್ಘಾಟನೆ ಮಾಡಲಾಗುವುದು </blockquote><span class="attribution">-ಈರಣ್ಣ ಕರಿಗೌಡರ, ಅಧ್ಯಕ್ಷ ಜಿಲ್ಲಾ ಹಾಲು ಒಕ್ಕೂಟ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ:</strong> ‘ವಿಜಯಪುರ- ಬಾಗಲಕೋಟೆ ಜಿಲ್ಲೆಗಳ ಹಾಲು ಒಕ್ಕೂಟವನ್ನು ಪ್ರತ್ಯೇಕಗೊಳಿಸುವ ಕುರಿತು ಅವಳಿ ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದ ಬಳಿಕ ತಿರ್ಮಾನಿಸಲಾಗುವುದು’ ಎಂದು ಒಕ್ಕೂಟದ ನೂತನ ಅಧ್ಯಕ್ಷ ಈರಣ್ಣ ಕರಿಗೌಡರ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಎಲ್ಲಾ ಸಾಮರ್ಥ್ಯವಿದ್ದರೂ, ಇಚ್ಛಾಶಕ್ತಿ ಕೊರತೆ ಹಾಗೂ ಕೆಲವು ತಾಂತ್ರಿಕ ತೊಂದರೆಗಳ ಕಾರಣದಿಂದ ಪ್ರತ್ಯೇಕತೆ ವಿಷಯ ಇತ್ಯರ್ಥಗೊಂಡಿಲ್ಲ’ ಎಂದರು.</p>.<p>‘ಸುಮಾರು 490ಕ್ಕೂ ಅಧಿಕ ಸಂಘಗಳಿಂದ ನಿತ್ಯ 1.20 ಲಕ್ಷ ಲೀ ಉತ್ಪಾದನೆ, 80 ಸಾವಿರ ಲೀಟರ್ ಹಾಲು ಮಾರಾಟವಾಗುತ್ತಿದೆ. ನೂತನ ಮಹಿಳಾ ಹಾಲು ಸಂಘ ಸ್ಥಾಪನೆಗೆ ₹6 ಲಕ್ಷ ಸಹಾಯಧನ ನೀಡಲಾಗುತ್ತಿದೆ. ನಿತ್ಯ 50 ಲೀಟರ್ಗೂ ಹೆಚ್ಚು ಹಾಲು ಉತ್ಪಾದಿಸುವ ಆಸಕ್ತ ಮಹಿಳೆಯರು ಇದರ ಪ್ರಯೋಜನೆ ಪಡೆಯಬಹುದು. ಗ್ರಾಮಸಭೆ ಬಳಿಕ ಹೊಸ ಸಂಘ ಸ್ಥಾಪನೆಗೆ ಅನುಮತಿ ನೀಡಲಾಗುವುದು’ ಎಂದು ತಿಳಿಸಿದರು.</p>.<p><strong>ಪನ್ನೀರು ಉತ್ಪಾದನೆಗೆ ಆದ್ಯತೆ: </strong>‘ಉಳಿದ ಹಾಲಿನಿಂದ ಪನ್ನೀರು ಉತ್ಪಾದನೆಯು ಅತ್ಯಧಿಕ ಲಾಭ ನಿಡುತ್ತಿದ್ದು, ನಂದಿನಿ ಉತ್ಪನ್ನಗಳಿಗೆ ಎಲ್ಲೆಡೆ ಬೇಡಿಕೆ ಹೆಚ್ಚಿದೆ. ಈ ಉತ್ಪನ್ನಗಳು ಜನರ ಮನ ಗೆದ್ದಿದ್ದು ಅಷ್ಟೇ ವಿಶ್ವಾಸಗಳಿಸಿದೆ’ ಎಂದರು.</p>.<p>ಅವಳಿ ಜಿಲ್ಲಾ ಹಾಲು ಒಕ್ಕೂಟ ಲಾಭ ಹೆಚ್ಚಿಸಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗುವುದು, ರೈತರಿಗೆ ನೆರವಾಗಲು ಮತ್ತಷ್ಟು ಶ್ರಮಿಸಲಾಗುವುದು ಎಂದರು.</p>.<div><blockquote>ಬಾಗಲಕೋಟೆಯಲ್ಲಿ 12 ಕೊಟಿಗೂ ಅಧಿಕ ವೆಚ್ಚದಲ್ಲಿ ನೂತನ ಡೈರಿ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಶೀಘ್ರದಲ್ಲೆ ಉದ್ಘಾಟನೆ ಮಾಡಲಾಗುವುದು </blockquote><span class="attribution">-ಈರಣ್ಣ ಕರಿಗೌಡರ, ಅಧ್ಯಕ್ಷ ಜಿಲ್ಲಾ ಹಾಲು ಒಕ್ಕೂಟ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>