ಶಿರಾ ಉಪಚುನಾವಣೆ ಪ್ರಚಾರದ ವೇಳೆ ನಳಿನ್ ಕುಮಾರ ಕಟೀಲ್, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅದು ಖಂಡನೀಯ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ-ಜಾತಿ ಹಾಗೂ ಸಮಾಜಗಳ ನಡುವೆ ಬೆಂಕಿ ಹಚ್ಚುತ್ತಿರುವ ನಳಿನ್ ಕುಮಾರ ಕಟೀಲ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆದು ಬುದ್ಧಿ ಹೇಳಲಿ. ಇಲ್ಲದಿದ್ದರೆ ನಮ್ಮ ಸಮಾಜದಿಂದ ಬಿಜೆಪಿಯವರಿಗೆ ಬುದ್ಧಿವಾದ ಹೇಳುವ ದಿನಗಳು ಬರಲಿವೆ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.