<p>ಬಾಗಲಕೋಟೆ: ‘ಋತುಚಕ್ರದ ಬಗ್ಗೆ ಇರುವ ಮೂಢನಂಬಿಕೆಗಳನ್ನು ಬಿಟ್ಟು ನೈರ್ಮಲ್ಯ ಕಾಪಾಡಿಕೊಳ್ಳಬೇಕು’ ಎಂದು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ದಿವ್ಯಾ ಮಿರ್ಜಿ ಹೇಳಿದರು.</p>.<p>ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಮಹಿಳಾ ಸಬಲೀಕರಣ ಘಟಕ ಮತ್ತು ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ಋತುಚಕ್ರ ನೈರ್ಮಲ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>ಪಶುಪತಿ ಜಿಗಜಿನ್ನಿ ಮಾತನಾಡಿ, ಮಾನಸಿಕ ಒತ್ತಡದದ ಕಾರಣ ಹೆಣ್ಣುಮಕ್ಕಳಲ್ಲಿ ಕಂಡು ಬರುವ ಸ್ಕಿಜೋಫ್ರೀನಿಯಾ ರೋಗದ ಲಕ್ಷಣ ಹಾಗೂ ಪರಿಹಾರಗಳು ಕುರಿತು ಮಾಹಿತಿ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ವಿಜ್ಞಾನ ಯುಗದಲ್ಲಿ ಮಹಿಳೆಯರು ಋತುಚಕ್ರದ ನೈರ್ಮಲ್ಯದ ಬಗೆಗೆ ಅರಿತುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.</p>.<p>ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ್ ನಾಗರಾಳೆ, ಡಾ.ಸುಮಂಗಲಾ ಮೇಟಿ, ಡಾ.ಮೂಬಿನ್ ಬೆಳಗಾಂ, ಡಾ.ಸುಮನ್ ಮುಚಖಂಡಿ, ಪ್ರೊ.ಪರಸಪ್ಪ ತಳವಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಋತುಚಕ್ರದ ಬಗ್ಗೆ ಇರುವ ಮೂಢನಂಬಿಕೆಗಳನ್ನು ಬಿಟ್ಟು ನೈರ್ಮಲ್ಯ ಕಾಪಾಡಿಕೊಳ್ಳಬೇಕು’ ಎಂದು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ದಿವ್ಯಾ ಮಿರ್ಜಿ ಹೇಳಿದರು.</p>.<p>ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಮಹಿಳಾ ಸಬಲೀಕರಣ ಘಟಕ ಮತ್ತು ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ಋತುಚಕ್ರ ನೈರ್ಮಲ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>ಪಶುಪತಿ ಜಿಗಜಿನ್ನಿ ಮಾತನಾಡಿ, ಮಾನಸಿಕ ಒತ್ತಡದದ ಕಾರಣ ಹೆಣ್ಣುಮಕ್ಕಳಲ್ಲಿ ಕಂಡು ಬರುವ ಸ್ಕಿಜೋಫ್ರೀನಿಯಾ ರೋಗದ ಲಕ್ಷಣ ಹಾಗೂ ಪರಿಹಾರಗಳು ಕುರಿತು ಮಾಹಿತಿ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ವಿಜ್ಞಾನ ಯುಗದಲ್ಲಿ ಮಹಿಳೆಯರು ಋತುಚಕ್ರದ ನೈರ್ಮಲ್ಯದ ಬಗೆಗೆ ಅರಿತುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.</p>.<p>ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ್ ನಾಗರಾಳೆ, ಡಾ.ಸುಮಂಗಲಾ ಮೇಟಿ, ಡಾ.ಮೂಬಿನ್ ಬೆಳಗಾಂ, ಡಾ.ಸುಮನ್ ಮುಚಖಂಡಿ, ಪ್ರೊ.ಪರಸಪ್ಪ ತಳವಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>