<p><strong>ಬಾಗಲಕೋಟೆ: </strong>‘2006ರಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಐದು ವರ್ಷ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಉಳಿದ ಅವಧಿಗೆ ಬಿಜೆಪಿಯವರೇ ಅಧಿಕಾರದಲ್ಲಿದ್ದರು. 2006 ರಿಂದಲೇ ಎಲ್ಲವನ್ನೂ ತನಿಖೆ ಮಾಡಿಸಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.</p>.<p>ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಜನರಿಗೆ ಸತ್ಯ ಗೊತ್ತಾಗಲಿ. ಅವರ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ’ ಎಂದರು.</p>.<p>‘ಮೂರು ವರ್ಷಗಳಿಂದ ಅವರದ್ದೇ ಸರ್ಕಾರ ಇದೆ.ಇಷ್ಟು ದಿನ ಏಕೆ ಸುಮ್ಮನಿದ್ದರು? ಶೇ 40ರಷ್ಟು ಕಮಿಷನ್ ಬಗ್ಗೆ ಮಾತನಾಡಲು ಆರಂಭಿಸಿದ ಮೇಲೆ ಹೆದರಿಸಲು ಕಾಂಗ್ರೆಸ್ ಆಡಳಿತಾವಧಿಯ ಬಗ್ಗೆ ಮಾತನಾಡುತ್ತಿದ್ದಾರೆ. ತನಿಖೆ ಮಾಡಬೇಡಿ ಎಂದು ಕೈಹಿಡಿದುಕೊಂಡಿದ್ದೇವೆಯೇ? ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜನರ ಗಮನ ಬೇರೆಡೆ ಸೆಳೆಯಲು ಅರ್ಕಾವತಿ, ಸೋಲಾರ್ ಹಗರಣ ಬಯಲಿಗೆ ಎಳೆಯುತ್ತೇವೆ ಎಂದು ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಮಾತು ನಿಲ್ಲಿಸಿ. ಮೊದಲು ತನಿಖೆ ಮಾಡಿಸಲಿ’ ಎಂದರು.</p>.<p>‘ಜನರು ಪ್ರವಾಹದಿಂದ ಸಾಯುತ್ತಿದ್ದಾರೆ. ಸಂಕಷ್ಟ ಎದುರಿಸುತ್ತಿದ್ದಾರೆ. ಬಿಜೆಪಿ ಸಚಿವರು ನೃತ್ಯ ಮಾಡುತ್ತಿದ್ದಾರೆ. ಇವರಿಗೆ ಮಾನ, ಮರ್ಯಾದೆ ಇದೆಯೇನ್ರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>‘2006ರಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಐದು ವರ್ಷ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಉಳಿದ ಅವಧಿಗೆ ಬಿಜೆಪಿಯವರೇ ಅಧಿಕಾರದಲ್ಲಿದ್ದರು. 2006 ರಿಂದಲೇ ಎಲ್ಲವನ್ನೂ ತನಿಖೆ ಮಾಡಿಸಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.</p>.<p>ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಜನರಿಗೆ ಸತ್ಯ ಗೊತ್ತಾಗಲಿ. ಅವರ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ’ ಎಂದರು.</p>.<p>‘ಮೂರು ವರ್ಷಗಳಿಂದ ಅವರದ್ದೇ ಸರ್ಕಾರ ಇದೆ.ಇಷ್ಟು ದಿನ ಏಕೆ ಸುಮ್ಮನಿದ್ದರು? ಶೇ 40ರಷ್ಟು ಕಮಿಷನ್ ಬಗ್ಗೆ ಮಾತನಾಡಲು ಆರಂಭಿಸಿದ ಮೇಲೆ ಹೆದರಿಸಲು ಕಾಂಗ್ರೆಸ್ ಆಡಳಿತಾವಧಿಯ ಬಗ್ಗೆ ಮಾತನಾಡುತ್ತಿದ್ದಾರೆ. ತನಿಖೆ ಮಾಡಬೇಡಿ ಎಂದು ಕೈಹಿಡಿದುಕೊಂಡಿದ್ದೇವೆಯೇ? ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜನರ ಗಮನ ಬೇರೆಡೆ ಸೆಳೆಯಲು ಅರ್ಕಾವತಿ, ಸೋಲಾರ್ ಹಗರಣ ಬಯಲಿಗೆ ಎಳೆಯುತ್ತೇವೆ ಎಂದು ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಮಾತು ನಿಲ್ಲಿಸಿ. ಮೊದಲು ತನಿಖೆ ಮಾಡಿಸಲಿ’ ಎಂದರು.</p>.<p>‘ಜನರು ಪ್ರವಾಹದಿಂದ ಸಾಯುತ್ತಿದ್ದಾರೆ. ಸಂಕಷ್ಟ ಎದುರಿಸುತ್ತಿದ್ದಾರೆ. ಬಿಜೆಪಿ ಸಚಿವರು ನೃತ್ಯ ಮಾಡುತ್ತಿದ್ದಾರೆ. ಇವರಿಗೆ ಮಾನ, ಮರ್ಯಾದೆ ಇದೆಯೇನ್ರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>