ಮಹಾಲಿಂಗಪುರ: ಪಟ್ಟಣದ ಟೊಣಪಿನಾಥ ದೇವಸ್ಥಾನದಲ್ಲಿ ಅ.8 ರಂದು ಬೆಳಿಗ್ಗೆ 10 ಗಂಟೆಗೆ ಜಮಖಂಡಿ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ.
ಧಾರವಾಡದ ಡಾ.ಮಹೇಶ ಮಾಶಾಳ ಪ್ರತಿನಿಧಿಗಳಿಗೆ ತರಬೇತಿ ನೀಡಲಿದ್ದಾರೆ. ಪ್ರತಿನಿಧಿಗಳ ಪ್ರತಿಭಾವಂತ ಮಕ್ಕಳನ್ನು ಮತ್ತು ವಿಶೇಷ ಸಾಧನೆ ಮಾಡಿದ ಪ್ರತಿನಿಧಿಗಳನ್ನು ಸನ್ಮಾನ ಮಾಡಲಾಗುವುದು. ಜಮಖಂಡಿ ಶಾಖೆಯ ಎಲ್ಲ ಎಲ್ಐಸಿ ಪ್ರತಿನಿಧಿಗಳು ಈ ಸಭೆಗೆ ಹಾಜರಾಗಬೇಕು ಎಂದು ಸಂಘದ ಅಧ್ಯಕ್ಷ ಮಲ್ಲಪ್ಪ ಕುಂಚನೂರ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.