<p><strong>ಬಾಗಲಕೋಟೆ:</strong> ನಗರ, ಬಾದಾಮಿ, ರಬಕವಿ–ಬನಹಟ್ಟಿ, ಕೆರೂರು, ಹುನಗುಂದ, ಬೀಳಗಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಜೋರಾದ ಮಳೆಯಾಗಿದೆ. ಬಾದಾಮಿ, ಬಾಗಲಕೋಟೆ ಸೇರಿದಂತೆ ವಿವಿಧೆಡೆ ಗುರುವಾರವೂ ಮಳೆಯಾಗಿದೆ.</p>.<p>ಸಂಜೆ ಆರಂಭವಾದ ಮಳೆಯೂ ಮಧ್ಯರಾತ್ರಿಯವರೆಗೂ ಧಾರಾಕಾರವಾಗಿ ಸುರಿಯಿತು. ಬೆಳಿಗ್ಗೆ ಸೆಕೆಯಿತ್ತು. ಮಧ್ಯಾಹ್ನದ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಮಳೆಯಾಯಿತು. ಸಂಜೆಯ ವೇಳೆಗೆ ಜಿಲ್ಲೆಯ ಬಹುತೇಕ ಕಡೆ ಮಳೆ ಸುರಿಯಿತು.</p>.<p>ಬಾಗಲಕೋಟೆ ತಾಲ್ಲೂಕಿನ ಸಿಕ್ಕೇರಿ ಗ್ರಾಮದ ಕೆಲವು ಹೊಲಗಳಲ್ಲಿ ಬೆಳೆದ ಈರುಳ್ಳಿ ಬೆಳೆ ನೀರಿನಲ್ಲಿ ನಿಂತಿದೆ. ಮಳೆಯಿಂದ ಬೆಳೆ ಹಾಳಾಗುವ ಭೀತಿ ಎದುರಾಗಿದೆ.</p>.<p>ಬಾದಾಮಿ ಸುತ್ತ–ಮುತ್ತಲ ಪ್ರದೇಶದಲ್ಲಿ ಗುರುವಾರ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಮುತ್ತಲಗೇರಿಯ ಮುದಿಯಪ್ಪ ಮೇಗೂರು ಎಂಬುವವರ ಎರಡು ಎತ್ತುಗಳು ಸಾವನ್ನಪ್ಪಿವೆ.</p>.<p>ಅಗಸ್ತ್ಯತೀರ್ಥ ಹೊಂಡ ತುಂಬಿ ಹರಿಯುತ್ತಿರುವುದರಿಂದ ಬಾದಾಮಿಯ ಕೆಲವು ಪ್ರದೇಶಗಳಲ್ಲಿ ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಜನರು ಅದರಲ್ಲೇ ಸಂಚರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರ, ಬಾದಾಮಿ, ರಬಕವಿ–ಬನಹಟ್ಟಿ, ಕೆರೂರು, ಹುನಗುಂದ, ಬೀಳಗಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಜೋರಾದ ಮಳೆಯಾಗಿದೆ. ಬಾದಾಮಿ, ಬಾಗಲಕೋಟೆ ಸೇರಿದಂತೆ ವಿವಿಧೆಡೆ ಗುರುವಾರವೂ ಮಳೆಯಾಗಿದೆ.</p>.<p>ಸಂಜೆ ಆರಂಭವಾದ ಮಳೆಯೂ ಮಧ್ಯರಾತ್ರಿಯವರೆಗೂ ಧಾರಾಕಾರವಾಗಿ ಸುರಿಯಿತು. ಬೆಳಿಗ್ಗೆ ಸೆಕೆಯಿತ್ತು. ಮಧ್ಯಾಹ್ನದ ವೇಳೆಗೆ ಮೋಡ ಕವಿದು ಅಲ್ಲಲ್ಲಿ ಮಳೆಯಾಯಿತು. ಸಂಜೆಯ ವೇಳೆಗೆ ಜಿಲ್ಲೆಯ ಬಹುತೇಕ ಕಡೆ ಮಳೆ ಸುರಿಯಿತು.</p>.<p>ಬಾಗಲಕೋಟೆ ತಾಲ್ಲೂಕಿನ ಸಿಕ್ಕೇರಿ ಗ್ರಾಮದ ಕೆಲವು ಹೊಲಗಳಲ್ಲಿ ಬೆಳೆದ ಈರುಳ್ಳಿ ಬೆಳೆ ನೀರಿನಲ್ಲಿ ನಿಂತಿದೆ. ಮಳೆಯಿಂದ ಬೆಳೆ ಹಾಳಾಗುವ ಭೀತಿ ಎದುರಾಗಿದೆ.</p>.<p>ಬಾದಾಮಿ ಸುತ್ತ–ಮುತ್ತಲ ಪ್ರದೇಶದಲ್ಲಿ ಗುರುವಾರ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಮುತ್ತಲಗೇರಿಯ ಮುದಿಯಪ್ಪ ಮೇಗೂರು ಎಂಬುವವರ ಎರಡು ಎತ್ತುಗಳು ಸಾವನ್ನಪ್ಪಿವೆ.</p>.<p>ಅಗಸ್ತ್ಯತೀರ್ಥ ಹೊಂಡ ತುಂಬಿ ಹರಿಯುತ್ತಿರುವುದರಿಂದ ಬಾದಾಮಿಯ ಕೆಲವು ಪ್ರದೇಶಗಳಲ್ಲಿ ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಜನರು ಅದರಲ್ಲೇ ಸಂಚರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>