ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಧರ್ಮ; ರಾಜಕೀಯವಾಗಿ ಚರ್ಚೆ ಮಾಡಲ್ಲ: ಎಂ.ಬಿ.ಪಾಟೀಲ

ಕೂಡಲಸಂಗಮ: ಬಸವಣ್ಣನ ಐಕ್ಯಮಂಟಪಕ್ಕೆ ಶಾಸಕ ಎಂ.ಬಿ.ಪಾಟೀಲ ಭೇಟಿ
Last Updated 3 ಮೇ 2022, 19:31 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಲಿಂಗಾಯತ ಸ್ವತಂತ್ರ ಧರ್ಮದ ವಿಚಾರ, ಅದು ನಮ್ಮ ಅಸ್ಮಿತೆ. ನಾವು ಅದನ್ನ ರಾಜಕೀಯವಾಗಿ ಚರ್ಚೆ ಮಾಡಲು ಹೋಗುವುದಿಲ್ಲ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಂ.ಬಿ.ಪಾಟೀಲ ಹೇಳಿದರು.

ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಕೂಡಲಸಂಗಮದ ಐಕ್ಯಸ್ಥಳಕ್ಕೆ ಭೇಟಿ ನೀಡಿ, ಸಂಗಮನಾಥನ ದರ್ಶನ ಪಡೆದ ಅವರು, ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಲಿಂಗಾಯತ ಸ್ವತಂತ್ರ ಧರ್ಮದ ವಿಚಾರದಲ್ಲಿ ಕಳೆದ ಬಾರಿ ಚುನಾವಣೆ ನಡೆದಾಗ ಅನೇಕ‌ ಗೊಂದಲಗಳನ್ನು ಸೃಷ್ಟಿ ಮಾಡಿದ್ದರು. ಸದ್ಯ ನಾವು ಯಾವ ಗೊಂದಲಕ್ಕೂ ಬೀಳೋಕೆ ಹೋಗಲ್ಲ. ಆ ಬಗ್ಗೆ ನಾನು ಯಾವುದೇ ಹೇಳಿಕೆ ಕೊಡಲ್ಲ’ ಎಂದರು. ‘ಚುನಾವಣೆಯ ನಂತರ ಎಲ್ಲರೂ ಕುಳಿತುಕೊಂಡು ಸಮಾಜಕ್ಕೆ ಏನು ಒಳ್ಳೆಯ ದಾಗುತ್ತೊ ಆ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಚುನಾವಣೆ ನಂತರ ಐದು ವರ್ಷ ಇರುತ್ತದೆ, ಆಗ ಚರ್ಚೆ ಆಗಲಿದೆ’ ಎಂದು ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT