ಬೆಂಗಳೂರು: ಇದೇ 12ರಂದು ಬಿಜೆಪಿ ಮತ್ತು ಎನ್ಡಿಎ ಸಂಸದರು ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ಧೋರಣೆ ವಿರೋಧಿಸಿ ದೇಶಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ ತಿಳಿಸಿದರು.
ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಂಸತ್ ಅಧಿವೇಶನ ಹಾಳಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಅವರ ಅಸಹಿಷ್ಣುತೆ ಕಾರಣ ಎಂದರು.
ಇದೇ 14 ರಿಂದ ಮೇ 5 ರವರೆಗೆ ಅಂಬೇಡ್ಕರ್ ಜಯಂತಿ ಅಂಗವಾಗಿ ದೇಶದಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು ಹಳ್ಳಿಗಳಿಗೆ ಭೇಟಿ ನೀಡಿ ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಲಿದ್ದಾರೆ ಎಂದರು.