ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಬೀಳಲಿದೆ: ಮುರುಗೇಶ್ ನಿರಾಣಿ

Published 26 ನವೆಂಬರ್ 2023, 16:21 IST
Last Updated 26 ನವೆಂಬರ್ 2023, 16:21 IST
ಅಕ್ಷರ ಗಾತ್ರ

ಬಾಗಲಕೋಟೆ: ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾದ ಆರು ತಿಂಗಳಲ್ಲಿಯೇ ಕಾಂಗ್ರೆಸ್‌ ಶಾಸಕರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವರು ಮುಖ್ಯಮಂತ್ರಿ ಅವರ ನಿಲುವು ವಿರೋಧಿಸುತ್ತಿದ್ದಾರೆ. ನೂರಕ್ಕೂ ಹೆಚ್ಚು ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂಬ ಅಸಮಾಧಾನವಿದೆ. ಅದು ಯಾವಾಗ ಸ್ಫೋಟವಾಗುತ್ತದೆಯೋ ಗೊತ್ತಿಲ್ಲ ಎಂದರು.

ತನಿಖೆಯಲ್ಲಿ ಸಿಕ್ಕಿ ಬೀಳಬಹುದು ಎಂಬ ಆತಂಕದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧದ ಪ್ರಕರಣದ ತನಿಖೆ ನೀಡಿದ್ದನ್ನು ವಾಪಸ್ ಪಡೆಯಲಾಗಿದೆ. ಇದರಿಂದ ಸಿದ್ದರಾಮಯ್ಯ ಬಗ್ಗೆ ಇದ್ದ ಗೌರವ ಕಡಿಮೆಯಾಗಿದೆ. ಸರ್ಕಾರ ಡಿ.ಕೆ. ಶಿವಕುಮಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT