ಬಾಗಲಕೋಟೆ ಜಿಲ್ಲೆಯ ಸಾವಳಗಿಯಲ್ಲಿ ಗ್ರಾಮಸ್ಥರೊಂದಿಗೆ ಚರ್ಚಿಸುತ್ತಿರುವ ಡಾ.ಪ್ರಕಾಶ ಪರಪ್ಪ
ಚಿತ್ರದುರ್ಗ ಕ್ಷೇತ್ರ ಮೀಸಲು ಕ್ಷೇತ್ರ ಆಗಿರುವ ಕಾರಣ ಬೇರೆಡೆ ಸ್ಪರ್ಧಿಸಬೇಕು. ಇಲ್ಲಿ ವೈದ್ಯ ಸ್ನೇಹಿತರು ಸಂಬಂಧಿಗಳು ಇರುವ ಕಾರಣ ಈ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ. ಪಕ್ಷದ ವರಿಷ್ಠರ ಸೂಚನೆಯೂ ಇದೆ
ಡಾ.ಪ್ರಕಾಶ ಜೆ ಪರಪ್ಪ ಬಿಜೆಪಿ ನಾಯಕ ಎಂಪಿ ಚಾಯ್ ಪ್ರಕಾಶ ಪರಪ್ಪ ಮುಂಬೈ
ಮತ್ತೊಮ್ಮೆ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. ಪಕ್ಷದ ಹೈಕಮಾಂಡ್ ಅವಕಾಶ ನೀಡಲಿದೆ ಎಂಬ ನಿರೀಕ್ಷೆ ಇದೆ.
ಪಿ.ಸಿ. ಗದ್ದಿಗೌಡರ ಸಂಸದ
ಗದ್ದಿಗೌಡರಿಗೆ ಸ್ವಪಕ್ಷೀಯರ ಸವಾಲು
ಸತತ ನಾಲ್ಕು ಬಾರಿ ಗೆದ್ದಿರುವ ಸಂಸದ ಪಿ.ಸಿ.ಗದ್ದಿಗೌಡರಿಗೆ ಮೊದಲ ಬಾರಿಗೆ ಸ್ವಪಕ್ಷೀಯರಿಂದ ಪೈಪೋಟಿ ಎದುರಾಗಿದೆ. 1957 ರಿಂದ 1999ರ ಲೋಕಸಭಾ ಚುನಾವಣೆವರೆಗೆ ಬಿಜೆಪಿ ಗೆಲುವು ಗೆದ್ದಿರಲಿಲ್ಲ. 2004ರಲ್ಲಿ ಮೊದಲ ಬಾರಿಗೆ ಗೆಲುವು ದಾಖಲಿಸಿದ ಪಿ.ಸಿ. ಗದ್ದಿಗೌಡರ ಅವರು ಸೋಲಿನ ಕಹಿ ಉಂಡಿಲ್ಲ. ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಆಗುವರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾರಿಗೆ ಟಿಕೆಟ್ ಸಿಕ್ಕರೂ ಅವರನ್ನು ಗೆಲ್ಲಿಸುತ್ತೇವೆ’ ಎಂದು ಬಿಜೆಪಿ ಜಿಲ್ಲಾ ನಾಯಕರು ಹೇಳುತ್ತಾರೆ.