<p><strong>ಲೋಕಾಪುರ:</strong> ವೇಮನರ ತತ್ವ, ಸಿದ್ಧಾಂತಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.</p>.<p>ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಧಾನ ಹಾಗೂ ಹೇಮ ವೇಮ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ರಚನಾತ್ಮಕ ಕೆಲಸಗಳನ್ನು ಮಾಡುವುದರಿಂದ ಒಳ್ಳೆ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಚನ ಮತ್ತು ಬದುಕನ್ನು ನಾಡಿಗೆ ತಿಳಿಸುವ ಕಾರ್ಯ ನಡೆಯಬೇಕು. ಸಮುದಾಯಗಳ ಮಧ್ಯೆ ಸಮನ್ವಯ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.</p>.<p>ಸಮುದಾಯ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡುವುದಾಗಿ ಸಚಿವ ತಿಮ್ಮಾಪೂರ ಭರವಸೆ ನೀಡಿದರು.</p>.<p>ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಮುದಾಯ ಭವನವನ್ನು ಸದುಪಯೋಗಪಡಿಕೊಳ್ಳಬೇಕು ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಬಿ.ಆರ್.ಯಾವಗಲ್, ಆರ್.ವಿ.ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಎಸ್.ತಳೇವಾಡ, ಸತೀಶ ಬಂಡಿವಡ್ಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೋಕಾಪುರ:</strong> ವೇಮನರ ತತ್ವ, ಸಿದ್ಧಾಂತಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.</p>.<p>ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಧಾನ ಹಾಗೂ ಹೇಮ ವೇಮ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ರಚನಾತ್ಮಕ ಕೆಲಸಗಳನ್ನು ಮಾಡುವುದರಿಂದ ಒಳ್ಳೆ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಚನ ಮತ್ತು ಬದುಕನ್ನು ನಾಡಿಗೆ ತಿಳಿಸುವ ಕಾರ್ಯ ನಡೆಯಬೇಕು. ಸಮುದಾಯಗಳ ಮಧ್ಯೆ ಸಮನ್ವಯ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.</p>.<p>ಸಮುದಾಯ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡುವುದಾಗಿ ಸಚಿವ ತಿಮ್ಮಾಪೂರ ಭರವಸೆ ನೀಡಿದರು.</p>.<p>ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಮುದಾಯ ಭವನವನ್ನು ಸದುಪಯೋಗಪಡಿಕೊಳ್ಳಬೇಕು ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಬಿ.ಆರ್.ಯಾವಗಲ್, ಆರ್.ವಿ.ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಎಸ್.ತಳೇವಾಡ, ಸತೀಶ ಬಂಡಿವಡ್ಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>