<p><strong>ಬಾಗಲಕೋಟೆ</strong>: ‘ಇನ್ನೆರಡು ತಿಂಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖಚಹರೆ ಆಧಾರಿತ (ಫೇಸ್ ಐಡೆಂಟಿಫಿಕೇಷನ್) ಹಾಜರಾತಿ ಮತ್ತು ‘ನೀತಿ ವಿಜ್ಞಾನ’ ಪಠ್ಯ ಕಲಿಕೆ ಆರಂಭಿಸಲಾಗುವುದು’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>‘ನೈತಿಕ ಶಿಕ್ಷಣದ ಕೊರತೆಯಿಂದ ಮಕ್ಕಳಿಗೆ ಹಲವು ಸಮಸ್ಯೆ ಕಾಡುತ್ತಿವೆ. ಬಾಲ ಗರ್ಭಿಣಿಯರ ಸಂಖ್ಯೆ ತಡೆಯೊಡ್ಡುವುದೂ ಸೇರಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ‘ನೀತಿ ವಿಜ್ಞಾನ’ ಪಠ್ಯ ಕಲಿಸಲಾಗುವುದು’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸೇರಿ 22 ಸದಸ್ಯರಿಂದ ನೀತಿ ಶಿಕ್ಷಣ ಕುರಿತು ಅಭಿಪ್ರಾಯ ಪಡೆಯಲಾಗಿದೆ. ಹಿಂದೆ ಇದ್ದಂತೆ ನೀತಿ ಶಿಕ್ಷಣ ಬೋಧನೆ ಮತ್ತೆ ಆರಂಭವಾಗಲಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿಯಾದ ಕೂಡಲೇ 16,500 ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಇನ್ನೆರಡು ತಿಂಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖಚಹರೆ ಆಧಾರಿತ (ಫೇಸ್ ಐಡೆಂಟಿಫಿಕೇಷನ್) ಹಾಜರಾತಿ ಮತ್ತು ‘ನೀತಿ ವಿಜ್ಞಾನ’ ಪಠ್ಯ ಕಲಿಕೆ ಆರಂಭಿಸಲಾಗುವುದು’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>‘ನೈತಿಕ ಶಿಕ್ಷಣದ ಕೊರತೆಯಿಂದ ಮಕ್ಕಳಿಗೆ ಹಲವು ಸಮಸ್ಯೆ ಕಾಡುತ್ತಿವೆ. ಬಾಲ ಗರ್ಭಿಣಿಯರ ಸಂಖ್ಯೆ ತಡೆಯೊಡ್ಡುವುದೂ ಸೇರಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ‘ನೀತಿ ವಿಜ್ಞಾನ’ ಪಠ್ಯ ಕಲಿಸಲಾಗುವುದು’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸೇರಿ 22 ಸದಸ್ಯರಿಂದ ನೀತಿ ಶಿಕ್ಷಣ ಕುರಿತು ಅಭಿಪ್ರಾಯ ಪಡೆಯಲಾಗಿದೆ. ಹಿಂದೆ ಇದ್ದಂತೆ ನೀತಿ ಶಿಕ್ಷಣ ಬೋಧನೆ ಮತ್ತೆ ಆರಂಭವಾಗಲಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿಯಾದ ಕೂಡಲೇ 16,500 ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>