<p>ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ನಡೆಯು ತ್ತಿರುವ ಅನಿರ್ದಿಷ್ಟ ಮುಷ್ಕರ 1500 ದಿನ ಪೂರೈಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.</p>.<p>ಮುಷ್ಕರ ನಿರತ ವೇದಿಕೆಯಿಂದ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ಸಮಿತಿ ಸದಸ್ಯರು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕು ಕೇಂದ್ರ ಆಗುವವರೆಗೂ ಹೋರಾಟ ನಿಲ್ಲದು ಎಂದು ಘೋಷಣೆ ಕೂಗಿದರು. ನಂತರ ತಹಶೀಲ್ದಾರ್ ಗಿರೀಶ ಸ್ವಾದಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.</p>.<p>ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಮಾತನಾಡಿ, ‘ತಾಲ್ಲೂಕು ಕೇಂದ್ರವಾಗಲು ಮಹಾಲಿಂಗಪುರ ಯೋಗ್ಯವಾಗಿದೆ ಎಂದು 16 ಗ್ರಾಮಗಳನ್ನು ಒಳಗೊಂಡ ನಕಾಶೆ ಹಾಗೂ ವರದಿಯನ್ನು ತಯಾರಿಸಿ ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿಗಳು ಸಲ್ಲಿಸಿದ್ದಾರೆ.</p>.<p>ಕಂದಾಯ ಇಲಾಖೆಯಿಂದ ಸಚಿವ ಸಂಪುಟಕ್ಕೆ ವರದಿ ಹೋಗಿ ಅನುಮತಿ ಪಡೆದು ತಾಲ್ಲೂಕು ಘೋಷಣೆ ಕಾರ್ಯ ಬಾಕಿ ಇದೆ. ಹೀಗಾಗಿ, ಕೂಡಲೇ ತಾಲ್ಲೂಕು ಕೇಂದ್ರವನ್ನಾಗಿ ಮಹಾಲಿಂಗಪುರವನ್ನು ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ಗಂಗಾಧರ ಮೇಟಿ, ಅರ್ಜುನ ಹಲಗಿಗೌಡರ ಮುಂತಾದವರು ಮಾತನಾಡಿದರು.</p>.<p>ನಿಂಗಪ್ಪ ಬಾಳಿಕಾಯಿ, ಪರಪ್ಪ ಬ್ಯಾಕೋಡ, ದುಂಡಪ್ಪ ಜಾಧವ, ಚನ್ನು ದೇಸಾಯಿ, ಹಣಮಂತ ಜಮಾದಾರ, ದುಂಡಪ್ಪ ಇಟ್ನಾಳ, ಸಿದ್ದು ಶಿರೋಳ, ರಫೀಕ ಮಾಲದಾರ, ಭೀಮಶಿ ಸಸಾಲಟ್ಟಿ, ಮಹಾಲಿಂಗಪ್ಪ ಅವರಾದಿ, ಕರೆಪ್ಪ ಮೇಟಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-19-2059445765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ನಡೆಯು ತ್ತಿರುವ ಅನಿರ್ದಿಷ್ಟ ಮುಷ್ಕರ 1500 ದಿನ ಪೂರೈಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.</p>.<p>ಮುಷ್ಕರ ನಿರತ ವೇದಿಕೆಯಿಂದ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ಸಮಿತಿ ಸದಸ್ಯರು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕು ಕೇಂದ್ರ ಆಗುವವರೆಗೂ ಹೋರಾಟ ನಿಲ್ಲದು ಎಂದು ಘೋಷಣೆ ಕೂಗಿದರು. ನಂತರ ತಹಶೀಲ್ದಾರ್ ಗಿರೀಶ ಸ್ವಾದಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.</p>.<p>ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಮಾತನಾಡಿ, ‘ತಾಲ್ಲೂಕು ಕೇಂದ್ರವಾಗಲು ಮಹಾಲಿಂಗಪುರ ಯೋಗ್ಯವಾಗಿದೆ ಎಂದು 16 ಗ್ರಾಮಗಳನ್ನು ಒಳಗೊಂಡ ನಕಾಶೆ ಹಾಗೂ ವರದಿಯನ್ನು ತಯಾರಿಸಿ ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿಗಳು ಸಲ್ಲಿಸಿದ್ದಾರೆ.</p>.<p>ಕಂದಾಯ ಇಲಾಖೆಯಿಂದ ಸಚಿವ ಸಂಪುಟಕ್ಕೆ ವರದಿ ಹೋಗಿ ಅನುಮತಿ ಪಡೆದು ತಾಲ್ಲೂಕು ಘೋಷಣೆ ಕಾರ್ಯ ಬಾಕಿ ಇದೆ. ಹೀಗಾಗಿ, ಕೂಡಲೇ ತಾಲ್ಲೂಕು ಕೇಂದ್ರವನ್ನಾಗಿ ಮಹಾಲಿಂಗಪುರವನ್ನು ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ಗಂಗಾಧರ ಮೇಟಿ, ಅರ್ಜುನ ಹಲಗಿಗೌಡರ ಮುಂತಾದವರು ಮಾತನಾಡಿದರು.</p>.<p>ನಿಂಗಪ್ಪ ಬಾಳಿಕಾಯಿ, ಪರಪ್ಪ ಬ್ಯಾಕೋಡ, ದುಂಡಪ್ಪ ಜಾಧವ, ಚನ್ನು ದೇಸಾಯಿ, ಹಣಮಂತ ಜಮಾದಾರ, ದುಂಡಪ್ಪ ಇಟ್ನಾಳ, ಸಿದ್ದು ಶಿರೋಳ, ರಫೀಕ ಮಾಲದಾರ, ಭೀಮಶಿ ಸಸಾಲಟ್ಟಿ, ಮಹಾಲಿಂಗಪ್ಪ ಅವರಾದಿ, ಕರೆಪ್ಪ ಮೇಟಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-19-2059445765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>