<p><strong>ಮಹಾಲಿಂಗಪುರ:</strong> ಪಟ್ಟಣದ ಪುರಸಭೆಯ 2026-27ನೇ ಸಾಲಿಗೆ ₹6.61 ಲಕ್ಷ ಉಳಿತಾಯ ಬಜೆಟ್ ಅನ್ನು ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಗುರುವಾರ ಮಂಡಿಸಿದರು.</p>.<p>‘ಪಟ್ಟಣದ ಕುಡಿಯುವ ನೀರು ನೈರ್ಮಲೀಕರಣ, ಬೀದಿದೀಪಗಳ ವ್ಯವಸ್ಥೆ, ರಸ್ತೆ ಮತ್ತು ಚರಂಡಿ, ಉದ್ಯಾನಗಳ ಅಭಿವೃದ್ಧಿ, ಕೆರೆ ಅಭಿವೃದ್ಧಿ, 15 ಮತ್ತು 16ನೇ ಹಣಕಾಸಿನ/ಎಸ್ಎಫ್ಸಿ ಹಾಗೂ ಇತರೆ ಸರ್ಕಾರದ ಪುರಷ್ಕøತ ಯೋಜನೆಗಳ ಮುಂದುವರೆದ ಕಾಮಗಾರಿಗಳಿಗಾಗಿ ಅನುದಾನ ಕಾಯ್ದಿರಿಸಿದ್ದು, ಅದರಂತೆ ಎಸ್ಎಫ್ಸಿ ಹಾಗೂ ಪುರಸಭೆ ನಿಧಿಯಡಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ 24.10, ಶೇ 7.25, ಶೇ 5 ರಡಿ ಮೊತ್ತವನ್ನು ಕಾಯ್ದಿರಿಸಲಾಗಿದೆ’ ಎಂದು ತಿಳಿಸಿದರು.</p>.<p>‘2026-27ನೇ ಸಾಲಿಗೆ ತಯಾರಿಸಿದ ಬಜೆಟ್ನಲ್ಲಿ ₹31.13 ಕೋಟಿ ಆದಾಯ ಹಾಗೂ ₹31.06 ಕೋಟಿ ವೆಚ್ಚ ನಿರೀಕ್ಷೆ ಮಾಡಲಾಗಿದೆ. ಒಟ್ಟು ₹6.61 ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಎನ್.ಎ.ಲಮಾಣಿ, ಕಚೇರಿ ವ್ಯವಸ್ಥಾಪಕ ಎಸ್.ಎನ್.ಪಾಟೀಲ, ಲೆಕ್ಕ ಸಹಾಯಕಿ ರಾಜೇಶ್ವರಿ ಸೋರಗಾಂವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ಪಟ್ಟಣದ ಪುರಸಭೆಯ 2026-27ನೇ ಸಾಲಿಗೆ ₹6.61 ಲಕ್ಷ ಉಳಿತಾಯ ಬಜೆಟ್ ಅನ್ನು ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಗುರುವಾರ ಮಂಡಿಸಿದರು.</p>.<p>‘ಪಟ್ಟಣದ ಕುಡಿಯುವ ನೀರು ನೈರ್ಮಲೀಕರಣ, ಬೀದಿದೀಪಗಳ ವ್ಯವಸ್ಥೆ, ರಸ್ತೆ ಮತ್ತು ಚರಂಡಿ, ಉದ್ಯಾನಗಳ ಅಭಿವೃದ್ಧಿ, ಕೆರೆ ಅಭಿವೃದ್ಧಿ, 15 ಮತ್ತು 16ನೇ ಹಣಕಾಸಿನ/ಎಸ್ಎಫ್ಸಿ ಹಾಗೂ ಇತರೆ ಸರ್ಕಾರದ ಪುರಷ್ಕøತ ಯೋಜನೆಗಳ ಮುಂದುವರೆದ ಕಾಮಗಾರಿಗಳಿಗಾಗಿ ಅನುದಾನ ಕಾಯ್ದಿರಿಸಿದ್ದು, ಅದರಂತೆ ಎಸ್ಎಫ್ಸಿ ಹಾಗೂ ಪುರಸಭೆ ನಿಧಿಯಡಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ 24.10, ಶೇ 7.25, ಶೇ 5 ರಡಿ ಮೊತ್ತವನ್ನು ಕಾಯ್ದಿರಿಸಲಾಗಿದೆ’ ಎಂದು ತಿಳಿಸಿದರು.</p>.<p>‘2026-27ನೇ ಸಾಲಿಗೆ ತಯಾರಿಸಿದ ಬಜೆಟ್ನಲ್ಲಿ ₹31.13 ಕೋಟಿ ಆದಾಯ ಹಾಗೂ ₹31.06 ಕೋಟಿ ವೆಚ್ಚ ನಿರೀಕ್ಷೆ ಮಾಡಲಾಗಿದೆ. ಒಟ್ಟು ₹6.61 ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಎನ್.ಎ.ಲಮಾಣಿ, ಕಚೇರಿ ವ್ಯವಸ್ಥಾಪಕ ಎಸ್.ಎನ್.ಪಾಟೀಲ, ಲೆಕ್ಕ ಸಹಾಯಕಿ ರಾಜೇಶ್ವರಿ ಸೋರಗಾಂವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>