<p>ಮಹಾಲಿಂಗಪುರ: ‘ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುವ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕೆಂಬ ಸಾರ್ವಜನಿಕರ ಬೇಡಿಕೆ ಸಮಯೋಚಿತ ಹಾಗೂ ನ್ಯಾಯಸಮ್ಮತವಾಗಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.</p>.<p>ಪಟ್ಟಣದ ಚನ್ನಮ್ಮ ವೃತ್ತದ ಬಳಿ ತಾಲ್ಲೂಕು ಹೋರಾಟ ಸಮಿತಿಯಿಂದ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ನಡೆದಿರುವ ಅನಿರ್ದಿಷ್ಟಾವಧಿ ಹೋರಾಟದ 1464ನೇ ದಿನವಾದ ಭಾನುವಾರ ಹೋರಾಟ ವೇದಿಕೆಗೆ ಭೇಟಿ ನೀಡಿ ಮಾತನಾಡಿದರು.</p>.<p>‘ಮುಧೋಳ ತಾಲ್ಲೂಕಿನಲ್ಲಿ ಈ ಹಿಂದಿನ ಜನಸಂಖ್ಯೆ ಅವಲೋಕಿಸಿದರೆ ಈಗಿನ ಜನಸಂಖ್ಯೆ ದುಪ್ಪಟ್ಟಾಗಿದೆ. ಸಹಜವಾಗಿ ಜನರ ಕೆಲಸ, ಕಾರ್ಯಗಳು ಸಹ ವಿಳಂಬವಾಗುತ್ತಿದ್ದು, ಇದಕ್ಕೆ ಪರಿಹಾರಾರ್ಥವಾಗಿ ತಕ್ಷಣದಿಂದಲೇ ಅಧಿಕಾರ ವಿಕೇಂದ್ರೀಕರಣ ಆಗಬೇಕು’ ಎಂದರು.</p>.<p>ಗಂಗಾಧರ ಮೇಟಿ, ವೀರೇಶ ಆಸಂಗಿ, ಶಿವಲಿಂಗ ಟಿರಕಿ, ಬಂದು ಪಕಾಲಿ, ಸಿದ್ದು ಶಿರೋಳ, ರಫೀಕ್ ಮಾಲದಾರ, ಹಣಮಂತ ಜಮಾದಾರ, ಮೂಸಾ ಬೂದಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-19-1352905567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ‘ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುವ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕೆಂಬ ಸಾರ್ವಜನಿಕರ ಬೇಡಿಕೆ ಸಮಯೋಚಿತ ಹಾಗೂ ನ್ಯಾಯಸಮ್ಮತವಾಗಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.</p>.<p>ಪಟ್ಟಣದ ಚನ್ನಮ್ಮ ವೃತ್ತದ ಬಳಿ ತಾಲ್ಲೂಕು ಹೋರಾಟ ಸಮಿತಿಯಿಂದ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ನಡೆದಿರುವ ಅನಿರ್ದಿಷ್ಟಾವಧಿ ಹೋರಾಟದ 1464ನೇ ದಿನವಾದ ಭಾನುವಾರ ಹೋರಾಟ ವೇದಿಕೆಗೆ ಭೇಟಿ ನೀಡಿ ಮಾತನಾಡಿದರು.</p>.<p>‘ಮುಧೋಳ ತಾಲ್ಲೂಕಿನಲ್ಲಿ ಈ ಹಿಂದಿನ ಜನಸಂಖ್ಯೆ ಅವಲೋಕಿಸಿದರೆ ಈಗಿನ ಜನಸಂಖ್ಯೆ ದುಪ್ಪಟ್ಟಾಗಿದೆ. ಸಹಜವಾಗಿ ಜನರ ಕೆಲಸ, ಕಾರ್ಯಗಳು ಸಹ ವಿಳಂಬವಾಗುತ್ತಿದ್ದು, ಇದಕ್ಕೆ ಪರಿಹಾರಾರ್ಥವಾಗಿ ತಕ್ಷಣದಿಂದಲೇ ಅಧಿಕಾರ ವಿಕೇಂದ್ರೀಕರಣ ಆಗಬೇಕು’ ಎಂದರು.</p>.<p>ಗಂಗಾಧರ ಮೇಟಿ, ವೀರೇಶ ಆಸಂಗಿ, ಶಿವಲಿಂಗ ಟಿರಕಿ, ಬಂದು ಪಕಾಲಿ, ಸಿದ್ದು ಶಿರೋಳ, ರಫೀಕ್ ಮಾಲದಾರ, ಹಣಮಂತ ಜಮಾದಾರ, ಮೂಸಾ ಬೂದಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-19-1352905567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>