<p><strong>ಮಹಾಲಿಂಗಪುರ:</strong> ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಾನುವಾರು ಮಾರುಕಟ್ಟೆ ಪ್ರಾಂಗಣ ವ್ಯಾಪ್ತಿಯಲ್ಲಿರುವ ಹಮಾಲರ ಕಾಲೊನಿಯಲ್ಲಿ ಪುರಸಭೆ ಸಿಬ್ಬಂದಿ ಭಾನುವಾರ ಕಸ ಸಂಗ್ರಹಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ನಿರ್ದೇಶನದಂತೆ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎಂ.ಮುಗಳಖೋಡ ಅವರು, ಹಮಾಲರ ಕಾಲೊನಿಯಲ್ಲಿ ಸ್ವಚ್ಛತೆ ಕೈಗೊಳ್ಳಲು ಸಿಬ್ಬಂದಿಗೆ ಸೂಚಿಸಿದರು.</p>.<p>ತ್ಯಾಜ್ಯ ವಿಲೇವಾರಿ ವಾಹನದ ಮೂಲಕ ಮನೆಮನೆಗೆ ತೆರಳಿ ಕಸ ಸಂಗ್ರಹಿಸಿದ ಪುರಸಭೆ ಸಿಬ್ಬಂದಿ, ‘ವಾಹನ ಬಂದಾಗ ಅದರಲ್ಲಿ ಒಣ ಕಸ, ಹಸಿ ಕಸ ಬೇರ್ಪಡಿಸಿ ಹಾಕುವಂತೆ ಹಾಗೂ ಕಸ ಹೊರಗೆ ಚೆಲ್ಲಬಾರದು’ ಎಂದು ತಾಕೀತು ಮಾಡಿದರು.</p>.<p>ಕಾಲೊನಿ ಕಾಂಪೌಂಡ್ಗೆ ಅಂಟಿಕೊಂಡಿರುವ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ನಿವಾಸಿಗಳು ಚೆಲ್ಲಿದ್ದ ಕಸವನ್ನು ಪುರಸಭೆ ಸಿಬ್ಬಂದಿ ತೆರವುಗೊಳಿಸಿದರು.</p>.<p>‘ಪಟ್ಟಣದ ಇತರೆ ಬಡಾವಣೆಯಂತೆ ಹಮಾಲರ ಕಾಲೊನಿಯಲ್ಲಿಯೂ ತ್ಯಾಜ್ಯ ವಿಲೇವಾರಿ ವಾಹನ ಸಂಚರಿಸಿ ಕಸ ಸಂಗ್ರಹಿಸಲಿದೆ. ವಿಶೇಷ ಅನುದಾನದಲ್ಲಿ ಕಾಲೊನಿ ರಸ್ತೆ ಅಭಿವೃದ್ಧಿ ಪಡಿಸಲಾಗುವುದು’ ಎಂದು ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು.</p>.<p><span class="bold"><strong>ಈ ಕುರಿತು ಮಾರ್ಚ್ 23ರಂದು </strong></span>‘ಪ್ರಜಾವಾಣಿ’ಯಲ್ಲಿ ‘ಸೌಲಭ್ಯ ವಂಚಿತ ಹಮಾಲರ ಕಾಲೊನಿ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಾನುವಾರು ಮಾರುಕಟ್ಟೆ ಪ್ರಾಂಗಣ ವ್ಯಾಪ್ತಿಯಲ್ಲಿರುವ ಹಮಾಲರ ಕಾಲೊನಿಯಲ್ಲಿ ಪುರಸಭೆ ಸಿಬ್ಬಂದಿ ಭಾನುವಾರ ಕಸ ಸಂಗ್ರಹಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ನಿರ್ದೇಶನದಂತೆ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಎಂ.ಮುಗಳಖೋಡ ಅವರು, ಹಮಾಲರ ಕಾಲೊನಿಯಲ್ಲಿ ಸ್ವಚ್ಛತೆ ಕೈಗೊಳ್ಳಲು ಸಿಬ್ಬಂದಿಗೆ ಸೂಚಿಸಿದರು.</p>.<p>ತ್ಯಾಜ್ಯ ವಿಲೇವಾರಿ ವಾಹನದ ಮೂಲಕ ಮನೆಮನೆಗೆ ತೆರಳಿ ಕಸ ಸಂಗ್ರಹಿಸಿದ ಪುರಸಭೆ ಸಿಬ್ಬಂದಿ, ‘ವಾಹನ ಬಂದಾಗ ಅದರಲ್ಲಿ ಒಣ ಕಸ, ಹಸಿ ಕಸ ಬೇರ್ಪಡಿಸಿ ಹಾಕುವಂತೆ ಹಾಗೂ ಕಸ ಹೊರಗೆ ಚೆಲ್ಲಬಾರದು’ ಎಂದು ತಾಕೀತು ಮಾಡಿದರು.</p>.<p>ಕಾಲೊನಿ ಕಾಂಪೌಂಡ್ಗೆ ಅಂಟಿಕೊಂಡಿರುವ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ನಿವಾಸಿಗಳು ಚೆಲ್ಲಿದ್ದ ಕಸವನ್ನು ಪುರಸಭೆ ಸಿಬ್ಬಂದಿ ತೆರವುಗೊಳಿಸಿದರು.</p>.<p>‘ಪಟ್ಟಣದ ಇತರೆ ಬಡಾವಣೆಯಂತೆ ಹಮಾಲರ ಕಾಲೊನಿಯಲ್ಲಿಯೂ ತ್ಯಾಜ್ಯ ವಿಲೇವಾರಿ ವಾಹನ ಸಂಚರಿಸಿ ಕಸ ಸಂಗ್ರಹಿಸಲಿದೆ. ವಿಶೇಷ ಅನುದಾನದಲ್ಲಿ ಕಾಲೊನಿ ರಸ್ತೆ ಅಭಿವೃದ್ಧಿ ಪಡಿಸಲಾಗುವುದು’ ಎಂದು ಮುಖ್ಯಾಧಿಕಾರಿ ಈರಣ್ಣ ದಡ್ಡಿ ಹೇಳಿದರು.</p>.<p><span class="bold"><strong>ಈ ಕುರಿತು ಮಾರ್ಚ್ 23ರಂದು </strong></span>‘ಪ್ರಜಾವಾಣಿ’ಯಲ್ಲಿ ‘ಸೌಲಭ್ಯ ವಂಚಿತ ಹಮಾಲರ ಕಾಲೊನಿ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>