<p><strong>ಮಹಾಲಿಂಗಪುರ: ಪ</strong>ಟ್ಟಣದಲ್ಲಿ ಕೃಷಿಗೆ ಅಗತ್ಯವಾದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ಸಮರ್ಪಕವಾಗಿ ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.</p>.<p>ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗಿದ್ದು, ಇದರಿಂದ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕಡಿಮೆ ದರ ಎನ್ನುವ ಕಾರಣಕ್ಕೆ ಯೂರಿಯಾ ಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಬಂದಿದೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು, ಅರಿಸಿನ, ಗೋವಿನ ಜೋಳ ಬೆಳೆಯಲಾಗುತ್ತದೆ. ಅಗತ್ಯ ಪ್ರಮಾಣದಲ್ಲಿ ಯೂರಿಯಾ ನೀಡಿದರೆ ಈ ಬೆಳೆಗಳು ಚೇತರಿಸಿಕೊಂಡು ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂಬ ಉದ್ದೇಶದಿಂದ ಯೂರಿಯಾ ಖರೀದಿಸಲು ರೈತರು ಮುಂದಾಗಿದ್ದಾರೆ.</p>.<p>ಮಹಾಲಿಂಗಪುರ, ಬುದ್ನಿ ಪಿಡಿ, ಕೆಸರಗೊಪ್ಪ, ಬಿಸನಾಳ, ಸೈದಾಪುರ, ಮಾರಾಪುರ, ಮದಭಾವಿ, ಸಂಗಾನಟ್ಟಿ, ನಂದಗಾಂವ, ಢವಳೇಶ್ವರ ಗ್ರಾಮಗಳ ವ್ಯಾಪ್ತಿಯನ್ನು ಪಟ್ಟಣದ ಕೃಷಿ ಮಾರಾಟ ಕೇಂದ್ರ ಹೊಂದಿದೆ.</p>.<p>‘ಈ ಭಾಗದಲ್ಲಿ 2025-26ನೇ ಸಾಲಿನಲ್ಲಿ ಕಬ್ಬು ಐದೂವರೆ ಸಾವಿರ ಹೆಕ್ಟೇರ್, ಗೋವಿನ ಜೋಳ 500 ಹೆಕ್ಟೇರ್, ಅರಿಸಿನ ಸೇರಿದಂತೆ ಇತರೆ ಬೆಳೆಗಳು 1 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ’ ಎಂದು ಕೃಷಿ ಮಾರಾಟ ಕೇಂದ್ರದ ಅಧಿಕಾರಿ ಟಿ.ಎಂ.ಡಾಂಗೆ ತಿಳಿಸಿದರು.</p>.<p>ಡಿಎಪಿಗೆ ಬೇಡಿಕೆ: ಯೂರಿಯಾ ಜತೆಗೆ ಡಿಎಪಿ ಗೊಬ್ಬರಕ್ಕೂ ಬೇಡಿಕೆ ಹೆಚ್ಚಾಗಿದೆ. ಆದರೆ, ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗದೇ ಇರುವುದರಿಂದ ಪರ್ಯಾಯವಾಗಿ ಕಾಂಪ್ಲೆಕ್ಸ್ ಗೊಬ್ಬರಕ್ಕೆ ರೈತರು ಮೊರೆ ಹೋಗಿದ್ದಾರೆ. ಬೆಳೆಗಳಿಗೆ ಕಾಂಪ್ಲೆಕ್ಸ್ ಹಾಕಿದ ನಂತರ ಯೂರಿಯಾ ಹಾಕಬೇಕಿದ್ದು, ಇದರಿಂದ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ.</p>.<p>50 ಕೇಜಿ ಡಿಎಪಿ ಗೊಬ್ಬರಕ್ಕೆ ₹1350 ಕಾಂಪ್ಲೆಕ್ಸ್ ಗೊಬ್ಬರಕ್ಕೆ ₹1300ದಿಂದ ₹1720ದರ ಇದೆ. ಯೂರಿಯಾಕ್ಕೆ ಸರ್ಕಾರದ ಸಬ್ಸಿಡಿ ಹೆಚ್ಚಿದ್ದು, 45 ಕೇಜಿ ಯೂರಿಯಾ ಗೊಬ್ಬರದ ಒಂದು ಚೀಲಕ್ಕೆ ₹280 ರಿಂದ ₹300ವರೆಗೆ ದರ ಇದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಸೇರಿದಂತೆ 30ಕ್ಕೂ ಹೆಚ್ಚು ರಸಗೊಬ್ಬರ ಅಂಗಡಿಗಳಿದ್ದು, ಕೆಲ ಅಂಗಡಿಗಳಲ್ಲಿ ಮಾತ್ರ ಯೂರಿಯಾ ಸಿಗುತ್ತಿದೆ.</p>.<p>‘ಅಪಾಯಕಾರಿ ರಾಸಾಯನಿಕ ಗೊಬ್ಬರಗಳಾದ ಯೂರಿಯಾ ಮತ್ತು ಫಾಸ್ಪೇಟ್ ಬೇಸಾಯ ಭೂಮಿಗಳಷ್ಟೆ ಅಲ್ಲದೆ, ಅನೇಕ ಜೀವರಾಶಿಗಳಿಗೆ ಹಾನಿಯುಂಟು ಮಾಡುತ್ತವೆ. ಬೆಳೆಯುವ ಹಾಗೂ ನಾಟಿಯಾಗುವ ಹಂತದಲ್ಲಿ ಮಾತ್ರ ಯೂರಿಯಾ ಅಗತ್ಯವಿದೆ. ರೈತರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗುವ ಅಪಾಯ ಇದೆ’ ಎನ್ನುತ್ತಾರೆ ಮಹಾಲಿಂಗಪುರದ ಕೃಷಿತಜ್ಞ ಎಂ.ವೈ.ಕಟ್ಟಿ.</p>.<div><blockquote>ಹೆಚ್ಚಿನ ಯೂರಿಯಾ ಗೊಬ್ಬರ ಬೇಡಿಕೆಗೆ ಕೃಷಿ ಇಲಾಖೆ ಮೇಲಧಿಕಾರಿಗಳ ಗಮನಕ್ಕೆ ತಂದು ಮಹಾಲಿಂಗಪುರ ಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಯೂರಿಯಾ ಗೊಬ್ಬರ ಪೂರೈಸಲಾಗುವುದು. ರೈತರು ಗೊಂದಲ ಆಗಬಾರದು.</blockquote><span class="attribution"> ಬಿ.ವಿ.ದೊಡಮನಿ ಸಹಾಯಕ ನಿರ್ದೇಶಕ ಕೃಷಿ ಇಲಾಖೆ ಮುಧೋಳ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ: ಪ</strong>ಟ್ಟಣದಲ್ಲಿ ಕೃಷಿಗೆ ಅಗತ್ಯವಾದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ಸಮರ್ಪಕವಾಗಿ ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.</p>.<p>ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗಿದ್ದು, ಇದರಿಂದ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕಡಿಮೆ ದರ ಎನ್ನುವ ಕಾರಣಕ್ಕೆ ಯೂರಿಯಾ ಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಬಂದಿದೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು, ಅರಿಸಿನ, ಗೋವಿನ ಜೋಳ ಬೆಳೆಯಲಾಗುತ್ತದೆ. ಅಗತ್ಯ ಪ್ರಮಾಣದಲ್ಲಿ ಯೂರಿಯಾ ನೀಡಿದರೆ ಈ ಬೆಳೆಗಳು ಚೇತರಿಸಿಕೊಂಡು ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂಬ ಉದ್ದೇಶದಿಂದ ಯೂರಿಯಾ ಖರೀದಿಸಲು ರೈತರು ಮುಂದಾಗಿದ್ದಾರೆ.</p>.<p>ಮಹಾಲಿಂಗಪುರ, ಬುದ್ನಿ ಪಿಡಿ, ಕೆಸರಗೊಪ್ಪ, ಬಿಸನಾಳ, ಸೈದಾಪುರ, ಮಾರಾಪುರ, ಮದಭಾವಿ, ಸಂಗಾನಟ್ಟಿ, ನಂದಗಾಂವ, ಢವಳೇಶ್ವರ ಗ್ರಾಮಗಳ ವ್ಯಾಪ್ತಿಯನ್ನು ಪಟ್ಟಣದ ಕೃಷಿ ಮಾರಾಟ ಕೇಂದ್ರ ಹೊಂದಿದೆ.</p>.<p>‘ಈ ಭಾಗದಲ್ಲಿ 2025-26ನೇ ಸಾಲಿನಲ್ಲಿ ಕಬ್ಬು ಐದೂವರೆ ಸಾವಿರ ಹೆಕ್ಟೇರ್, ಗೋವಿನ ಜೋಳ 500 ಹೆಕ್ಟೇರ್, ಅರಿಸಿನ ಸೇರಿದಂತೆ ಇತರೆ ಬೆಳೆಗಳು 1 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ’ ಎಂದು ಕೃಷಿ ಮಾರಾಟ ಕೇಂದ್ರದ ಅಧಿಕಾರಿ ಟಿ.ಎಂ.ಡಾಂಗೆ ತಿಳಿಸಿದರು.</p>.<p>ಡಿಎಪಿಗೆ ಬೇಡಿಕೆ: ಯೂರಿಯಾ ಜತೆಗೆ ಡಿಎಪಿ ಗೊಬ್ಬರಕ್ಕೂ ಬೇಡಿಕೆ ಹೆಚ್ಚಾಗಿದೆ. ಆದರೆ, ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗದೇ ಇರುವುದರಿಂದ ಪರ್ಯಾಯವಾಗಿ ಕಾಂಪ್ಲೆಕ್ಸ್ ಗೊಬ್ಬರಕ್ಕೆ ರೈತರು ಮೊರೆ ಹೋಗಿದ್ದಾರೆ. ಬೆಳೆಗಳಿಗೆ ಕಾಂಪ್ಲೆಕ್ಸ್ ಹಾಕಿದ ನಂತರ ಯೂರಿಯಾ ಹಾಕಬೇಕಿದ್ದು, ಇದರಿಂದ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ.</p>.<p>50 ಕೇಜಿ ಡಿಎಪಿ ಗೊಬ್ಬರಕ್ಕೆ ₹1350 ಕಾಂಪ್ಲೆಕ್ಸ್ ಗೊಬ್ಬರಕ್ಕೆ ₹1300ದಿಂದ ₹1720ದರ ಇದೆ. ಯೂರಿಯಾಕ್ಕೆ ಸರ್ಕಾರದ ಸಬ್ಸಿಡಿ ಹೆಚ್ಚಿದ್ದು, 45 ಕೇಜಿ ಯೂರಿಯಾ ಗೊಬ್ಬರದ ಒಂದು ಚೀಲಕ್ಕೆ ₹280 ರಿಂದ ₹300ವರೆಗೆ ದರ ಇದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಸೇರಿದಂತೆ 30ಕ್ಕೂ ಹೆಚ್ಚು ರಸಗೊಬ್ಬರ ಅಂಗಡಿಗಳಿದ್ದು, ಕೆಲ ಅಂಗಡಿಗಳಲ್ಲಿ ಮಾತ್ರ ಯೂರಿಯಾ ಸಿಗುತ್ತಿದೆ.</p>.<p>‘ಅಪಾಯಕಾರಿ ರಾಸಾಯನಿಕ ಗೊಬ್ಬರಗಳಾದ ಯೂರಿಯಾ ಮತ್ತು ಫಾಸ್ಪೇಟ್ ಬೇಸಾಯ ಭೂಮಿಗಳಷ್ಟೆ ಅಲ್ಲದೆ, ಅನೇಕ ಜೀವರಾಶಿಗಳಿಗೆ ಹಾನಿಯುಂಟು ಮಾಡುತ್ತವೆ. ಬೆಳೆಯುವ ಹಾಗೂ ನಾಟಿಯಾಗುವ ಹಂತದಲ್ಲಿ ಮಾತ್ರ ಯೂರಿಯಾ ಅಗತ್ಯವಿದೆ. ರೈತರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗುವ ಅಪಾಯ ಇದೆ’ ಎನ್ನುತ್ತಾರೆ ಮಹಾಲಿಂಗಪುರದ ಕೃಷಿತಜ್ಞ ಎಂ.ವೈ.ಕಟ್ಟಿ.</p>.<div><blockquote>ಹೆಚ್ಚಿನ ಯೂರಿಯಾ ಗೊಬ್ಬರ ಬೇಡಿಕೆಗೆ ಕೃಷಿ ಇಲಾಖೆ ಮೇಲಧಿಕಾರಿಗಳ ಗಮನಕ್ಕೆ ತಂದು ಮಹಾಲಿಂಗಪುರ ಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಯೂರಿಯಾ ಗೊಬ್ಬರ ಪೂರೈಸಲಾಗುವುದು. ರೈತರು ಗೊಂದಲ ಆಗಬಾರದು.</blockquote><span class="attribution"> ಬಿ.ವಿ.ದೊಡಮನಿ ಸಹಾಯಕ ನಿರ್ದೇಶಕ ಕೃಷಿ ಇಲಾಖೆ ಮುಧೋಳ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>